ಶಿಕ್ಷಕರ ನೇಮಕಾತಿಗೆ ಮೀಸಲಾತಿ ಆದೇಶ
Team Udayavani, Oct 20, 2018, 6:35 AM IST
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಯ 6ರಿಂದ 8ನೇ ತರಗತಿಯಲ್ಲಿ ಖಾಲಿ ಇರುವ ಹತ್ತು ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೀಸಲಾತಿ ಕುರಿತು ಆದೇಶ ಹೊರಡಿಸಿದೆ.
ಇತರ ಹಿಂದುಳಿದ ವರ್ಗಗಳಿಗೆ ಗುರುತಿಸಲ್ಪಟ್ಟ, ಆದರೆ ಆಯಾ ಪ್ರವರ್ಗಗಳ ಅರ್ಹ ಅಭ್ಯರ್ಥಿಗಳ ಲಭ್ಯತೆ ಕೊರತೆಯಿಂದ ಭರ್ತಿ ಮಾಡಲಾಗದ ಸ್ಥಾನಗಳನ್ನು ಬ್ಯಾಕ್ಲಾಗ್ ಎಂದು ಪರಿಗಣಿಸಿ ಮುಂದುವರಿಸಬೇಕು. ಈ ಸ್ಥಾನಗಳನ್ನು ಮೀಸಲಾತಿಯಿಂದ ವಿಮುಕ್ತಿಗೊಳಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಮುಂದಿನ ನೇರ ನೇಮಕಾತಿ ಸಂದರ್ಭದಲ್ಲಿ ಹೊಸದಾಗಿ ಲಭ್ಯವಾದ ಸ್ಥಾನ ಮತ್ತು ಬ್ಯಾಕ್ಲಾಗ್ ಸ್ಥಾನಗಳ ಪಟ್ಟಿಯನ್ನು
ಪ್ರತ್ಯೇಕವಾಗಿ ಪ್ರಕಟಿಸಬೇಕು. ಹೊಸದಾಗಿ ಲಭ್ಯವಾದ ಸ್ಥಾನವನ್ನು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ವರ್ಗೀಕರಣ ಮಾಡಿ ಪ್ರಕಟಿಸಬೇಕು. ಆದರೆ, ಬ್ಯಾಕ್ಲಾಗ್ ಸ್ಥಾನಗಳನ್ನು ಮತ್ತೂಮ್ಮೆ ವರ್ಗೀಕರಣ ಮಾಡುವಂತಿಲ್ಲ. 2015ರ ಫೆ.5ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಿರುವಂತೆ ನೇರ ನೇಮಕಾತಿಯಲ್ಲಿ ಇತರ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳ ಕೊರತೆಯಿಂದ ಭರ್ತಿ ಮಾಡದೆ ಮುಂದಕ್ಕೆ ಕೊಂಡೊಯ್ಯಲಾದ ಸ್ಥಾನಗಳಿಗೂ ಈ ಆದೇಶ ಅನ್ವಯಿಸುತ್ತದೆ ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ