ಪೊಲೀಸರಿಗೆ ಪುನರ್ಮನನ ಕಾರ್ಯಕ್ರಮ: ಡಿಜಿಪಿ ಮಾಹಿತಿ


Team Udayavani, Mar 11, 2020, 3:06 AM IST

highcourt4

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್‌ ಅಧಿಕಾರಿ ಗಳಿಗೆ ಕಾನೂನಿನ ಕುರಿತು ಜಾಗೃತಿ ಮೂಡಿಸಲು “ಪುನರ್ಮನನ ಕಾರ್ಯಕ್ರಮ’ (ಓರಿಯಂಟೇಷನ್‌ ಪ್ರೋಗ್ರಾಂ) ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಾಲ ನ್ಯಾಯ (ಮಕ್ಕಳ ಕಾಳಜಿ ಹಾಗೂ ಸುರಕ್ಷತೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೈಕೋರ್ಟ್‌ ಸ್ವಯಂಪ್ರೇರಿತ ವಾಗಿ ದಾಖಲಿಸಿರುವ ಹಾಗೂ “ಬಚ್‌ಪನ್‌ ಬಚಾವೋ’ ಸ್ವಯಂ ಸೇವಾ ಸಂಸ್ಥೆ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಹಾಗೂ ನ್ಯಾ.ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಈ ಮಾಹಿತಿ ನೀಡಲಾಗಿದೆ.

ಅರ್ಜಿ ವಿಚಾರಣೆಗೆ ಬಂದಾಗ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಅವರು, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರ ಪ್ರಮಾಣಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಅದರಂತೆ, “ಎಸ್ಪಿ, ಡಿವೈಎಸ್ಪಿ, ಡಿಸಿಪಿ, ಎಸಿಪಿ ಸೇರಿದಂತೆ ಎಲ್ಲಾ ಪೊಲೀಸ್‌ ಅಧಿಕಾರಿಗಳಿಗೆ ಕಾನೂನಿನ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಈ ಸಂಬಂಧ ಈಗಾಗಲೇ ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ ಪತ್ರ ಬರೆಯಲಾಗಿದೆ. ಕಾರ್ಯಕ್ರಮದ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗು ವುದು’ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. “ಸಂಜ್ಞೆಯ’ ಅಥವಾ “ನ್ಯಾಯವೇದ್ಯ’ (ಕಾಗ್ನಿ ಜೆಬಲ್‌) ಪ್ರಕರಣಗಳಲ್ಲಿ ಎಫ್ಐಆರ್‌ ದಾಖಲಿಸುವ ಸಂಬಂಧ ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ 2014ರಲ್ಲಿ ಹೊರಡಿಸಲಾದ ಸುತ್ತೋಲೆಯನ್ನು 2020ರ ಮಾ.3ರಂದು ರಾಜ್ಯದ ಎಲ್ಲಾ ಪೊಲೀಸ್‌ ಅಧಿಕಾರಿಗಳಿಗೆ ಕಳಿಸಿಕೊಡಲಾಗಿದ್ದು, ಸೂಚನೆಗಳನ್ನು ನೀಡಲಾಗಿದೆ.

ಯಾವುದೇ ದೂರು ಕಾಗ್ನಿಜೆಬಲ್‌ ಪ್ರಕರಣ ಎಂದು ಮೇಲ್ನೋಟಕ್ಕೆ ಖಚಿತವಾದರೆ ಠಾಣಾಧಿಕಾರಿ (ಎಸ್‌ಎಚ್‌ಓ) ಎಫ್ಐಆರ್‌ ದಾಖಲಿಸಿಕೊಳ್ಳಬೇಕು. “ಅಸಂಜ್ಜೆಯ’ (ನಾನ್‌ ಕಾಗ್ನಿಜೆಬಲ್‌) ಪ್ರಕರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದರೆ ದೂರುದಾರರು ಅಥವಾ ಮಾಹಿತಿದಾರರಿಗೆ “ಸ್ವೀಕೃತಿ’ ಕೊಡಬೇಕು. ಇಂತಹ ಸಂದರ್ಭದಲ್ಲಿ ಪ್ರಕರಣ ನಾನ್‌ ಕಾಗ್ನಿಜೆಬಲ್‌ ಹೌದು ಅಥವಾ ಅಲ್ಲ ಎಂಬುದನ್ನು ಖಾತರಿಪಡಿಸಿಕೊಳ್ಳಲು ವಿಚಾರಣೆ ನಡೆಸಲಾಗುತ್ತದೆ.

ದೂರು, ಕಾಗ್ನಿಜೆಬಲ್‌ ಪ್ರಕರಣ ಎಂದು ಋಜುವಾತುಪಡಿಸಿಕೊಳ್ಳಲು ದೂರು ದಾಖಲಾದ ದಿನದಿಂದ 15 ದಿನಗಳಲ್ಲಿ ವಿಚಾರಣೆ ನಡೆಸುವ ಬಗ್ಗೆ ಠಾಣಾಧಿಕಾರಿಯು ದೂರುದಾರನಿಗೆ ದೃಢೀಕರಣ ನೀಡಬೇಕು. ಅಸಂಜ್ಞೆಯ (ನಾನ್‌ ಕಾಗ್ನಿಜೆಬಲ್‌) ಪ್ರಕರಣ ಎಂದು ಕಂಡು ಬಂದಲ್ಲಿ ಅದರ ಬಗ್ಗೆಯೂ ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು. ಪ್ರಾಥಮಿಕ ತನಿಖೆಯಲ್ಲಿ ಕಂಡು ಬರುವ ಅಂಶಗಳನ್ನು ಆಧರಿಸಿ ಪ್ರಕರಣ ಇತ್ಯರ್ಥಪಡಿಸಬೇಕು.

ಆ ಬಗ್ಗೆ ಠಾಣಾಧಿಕಾರಿಯು ದೂರುದಾರನಿಗೆ ಮಾಹಿತಿ ಒದಗಿಸಬೇಕು. ಈ ಬಗ್ಗೆ ಮೇಲಾಧಿಕಾರಿಗಳು ನಿಗಾ ವಹಿಸಬೇಕು. ಈ ಸಂಬಂಧ ಠಾಣಾಧಿಕಾರಿಗಳಿಗೆ ಕಾರ್ಯಾಗಾರ ಏರ್ಪಡಿಸಲು ಮೇಲಾಧಿಕಾರಿಗಳಿಗೆ ಸೂಚಿಸಲಾಗಿದೆ. ತಪ್ಪಿತಸ್ಥ ಠಾಣಾಧಿಕಾರಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.