ನಿವೃತ್ತ ಐಎಎಸ್‌ ಅಧಿಕಾರಿ ಕಾರು ಚಾಲಕ ಬಂಧನ


Team Udayavani, Oct 20, 2017, 12:02 PM IST

Ias-arrest.jpg

ಬೆಂಗಳೂರು: ಕಳವು ಮಾಡಿದ ಬ್ಲ್ಯಾಕ್‌ ಪಲ್ಸರ್‌ ಬೈಕ್‌ಗಳಲ್ಲಿ ಬಂದು ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಸರಗಳ್ಳರು ಇದೀಗ ಹೈಟೆಕ್‌ ಆಗಿದ್ದು, ಕಾರುಗಳಲ್ಲಿ ಬಂದು ಕೃತ್ಯವೆಸಗಲು ಆರಂಭಿಸಿದ್ದಾರೆ. ಹೌದು, ರಿಡ್ಜ್ ಕಾರಿನಲ್ಲಿ ಬಂದು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರ ಕಳವು ಮಾಡುತ್ತಿದ್ದ ನಿವೃತ್ತ ಐಎಎಸ್‌ ಅಧಿಕಾರಿಯ ಕಾರು ಚಾಲಕ ಸೇರಿದಂತೆ ಮೂವರು ಕಾರು ಚಾಲಕರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಕೆಂಗೇರಿ ನಿವಾಸಿಗಳಾದ ಪ್ರದೀಪ್‌, ಪುರುಷೋತ್ತಮ್‌ ಹಾಗೂ ಪ್ರಜ್ವಲ್‌ನನ್ನು ಮಹಾಲಕ್ಷಿ ಲೇಔಟ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಬಂಧನದಿಂದ ನಗರದ ಹತ್ತು ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 18 ಸರ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಇವರಿಂದ 27,34 ಲಕ್ಷ ರೂ. ಮೌಲ್ಯದ 700 ಗ್ರಾಂ ಚಿನ್ನಾಭರಣ, ಒಂದು ಮಾರುತಿ ರಿಡ್ಜ್ ಕಾರು, ಪಲ್ಸರ್‌ ಬೈಕ್‌, 2 ಮೊಬೈಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಪೈಕಿ ಪುರುಷೋತ್ತಮ್‌ ಈ ಮೊದಲು ಯವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಐಎಎಸ್‌ ಅಧಿಕಾರಿಯೊಬ್ಬರ ಕಾರು ಚಾಲಕನಾಗಿದ್ದು, ಅಧಿಕಾರಿ ನಿವೃತ್ತರಾದ ಬಳಿಕವೂ ತಮ್ಮ ಖಾಸಗಿ ಕಾರಿಗೆ ಈತನನ್ನೇ ಚಾಲಕನಾಗಿ ನೇಮಕ ಮಾಡಿಕೊಂಡಿದ್ದರು. ಈ ಮಧ್ಯೆ ಆರೋಪಿ ಪ್ರದೀಪ್‌ ಮತ್ತು ಪ್ರಜ್ವಲ್‌ ಜತೆ ಸೇರಿಕೊಂಡು ರಾತ್ರಿ ಮತ್ತು ಹಗಲು ವೇಳೆ ಕೃತ್ಯವೆಸಗುತ್ತಿದ್ದರು.

ಕಳೆದ ವರ್ಷವಷ್ಟೇ ಪ್ರದೀಪ್‌ ರಿಡ್ಜ್ ಕಾರನ್ನು ಖರೀದಿಸಿದ್ದು, ಬಾಡಿಗೆಗೆ ಓಡಿಸುತ್ತಿದ್ದ. ನಂತರ ತನ್ನ ಸ್ನೇಹಿತರಾದ ಪುರುಷೋತ್ತಮ್‌ ಮತ್ತು ಪ್ರಜ್ವಲ್‌ ಜತೆ ಸೇರಿಕೊಂಡು ಬಹುಬೇಗ ಹಣ ಸಂಪಾದಿಸಲು ನಿರ್ಧರಿಸಿದ್ದರು. ಅದರಂತೆ ಆರೋಪಿಗಳು ರಿಡ್ಜ್ ಕಾರಿನಲ್ಲಿ ನಿರ್ಜನ ಪ್ರದೇಶದಲ್ಲಿ ಓಡಾಡುವ ಒಂಟಿ ಮಹಿಳೆಯರ ಮೇಲೆ ದಾಳಿ ನಡೆಸಿ ಸರಗಳನ್ನು ಕಳವು ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

ಐಷಾರಾಮಿ ಜೀವನಕ್ಕಾಗಿ ಸರಗಳ್ಳತನ: ಮೂವರು ಆರೋಪಿಗಳು ರಿಡ್ಜ್ ಕಾರಿನಲ್ಲಿ ಬಂದು ನಗರದಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಗುರುತ್ತಿಸುತ್ತಿದ್ದರು. ಬಳಿಕ ಆರೋಪಿ ಪ್ರಜ್ವಲ್‌ ಮಹಿಳೆಯನ್ನು ಹಿಂಬಾಲಿಸಿಕೊಂಡು ಸರ ಕಸಿದುಕೊಂಡು ಕಾರಿನೊಳಗೆ ಕುಳಿತುಕೊಳ್ಳುತ್ತಿದ್ದ, ಪ್ರದೀಪ್‌ ಕ್ಷಣಮಾತ್ರದಲ್ಲಿ ಬೇರೆ ಪ್ರದೇಶಕ್ಕೆ ಕಾರು ಕೊಂಡೊಯ್ಯುತ್ತಿದ್ದ. ಪುರುಷೋತ್ತಮ್‌ ಯಾರಾದರೂ ಬಂದರೆ ಸನ್ನೆ ಮೂಲಕ ಎಚ್ಚರಿಸುತ್ತಿದ್ದ. ನಂತರ ಕಳವು ಮಾಡಿದ್ದ ಚಿನ್ನಾಭರಣವನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು ಎಂದು ಮಾಲಿನಿ ಕೃಷ್ಣಮೂರ್ತಿ ತಿಳಿಸಿದರು.

ಜೈಲು ಸೇರಿದ್ದ ಪ್ರದೀಪ್‌: ಪ್ರದೀಪ್‌ನನ್ನು ಜುಲೈನಲ್ಲಿ ಅಮೃತಹಳ್ಳಿ ಪೊಲೀಸರು ದರೋಡೆ ಪ್ರಕರಣದಲ್ಲಿ ಈತನನ್ನು ಬಂಧಿಸಿದ್ದರು. ಪ್ರಕರಣವೊಂದರಲ್ಲಿ ಮಹಾಲಕ್ಷಿಲೇಔಟ್‌ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯಗಳ ಬಗ್ಗೆ ಬಾಯಿಬಿಟ್ಟಿದ್ದಾನೆ. ಈತನ ಮಾಹಿತಿ ಮೇರೆಗೆ ಪುರುಷೋತ್ತಮ್‌ ಮತ್ತು ಪ್ರಜ್ವಲ್‌ನನ್ನು ಬಂಧಿಸಲಾಗಿದೆ ಎಂದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.