ರೇವಣ್ಣ “ಕುರ್ಚಿ’ ಕಾಲೆಳೆದ ಬಿಜೆಪಿ


Team Udayavani, Jul 5, 2018, 11:54 AM IST

blore-4.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕೇಂದ್ರ ಬಿಂದುವಾಗಿರುವ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ವಿಧಾನಸಭೆಯಲ್ಲಿ ತಮಗೆ ನೀಡಿದ ಆಸನದಲ್ಲಿ ಕುಳಿತುಕೊಳ್ಳದೇ ಇರುವ ವಿಷಯ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಮಾತನಾಡಿ, ಅಧಿವೇಶನ 10 ದಿನದ ಬದಲು 9 ದಿನ ಮಾಡಿದ್ದಾರೆ. ಇದರ ಹಿಂದೆ ರೇವಣ್ಣ ಅವರ ಜ್ಯೋತಿಷಿಗಳ ಸಲಹೆ ಇರಬಹುದು ಎಂದರು.

ಮಧ್ಯಪ್ರವೇಶಿಸಿದ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ, ರೇವಣ್ಣ ಇದುವರೆಗೂ ಅವರಿಗೆ ನೀಡಿದ ಆಸನದಲ್ಲಿ ಕುಳಿತುಕೊಂಡಿಲ್ಲ. ಅಲ್ಲಿಯೂ ಏನಾದರೂ ವಾಸ್ತು ದೋಷವಿದೆಯೇ ಎಂಬುದನ್ನು ಸಭಾಧ್ಯಕ್ಷರು ಪರಿಶೀಲಿಸಬೇಕು ಎಂದರು. ಪ್ರತಿಕ್ರಿಯಿಸಿದ ಸ್ಪೀಕರ್‌ ರಮೇಶ್‌ ಕುಮಾರ್‌, ಸದನದಲ್ಲಿ ಹಿರಿತನದ ಆಧಾರದಲ್ಲಿ ಕುರ್ಚಿ ಹಂಚಲಾಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನಂತರ ಕಾನೂನು ಸಂಸದೀಯ ವ್ಯವಹಾರಗಳ ಸಚಿವರಿಗೆ ಅವಕಾಶ ನೀಡಲಾಗುತ್ತದೆ. ಆದರೆ, ದೇಶಪಾಂಡೆ ಹಾಗೂ ಡಿ.ಕೆ.ಶಿವಕುಮಾರ್‌ ಹಿರಿಯ ಸದಸ್ಯರಾಗಿರುವುದರಿಂದ ಅವರಿಗೆ ಮೊದಲು ಕುರ್ಚಿ ಹಂಚಿಕೆ ಮಾಡಿ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡಗೆ ಅವಕಾಶ ಕಲ್ಪಿಸಲಾಗಿದೆ. ಅವರ ನಂತರದ ಸ್ಥಾನದಲ್ಲಿ ರೇವಣ್ಣಗೆ ಕುರ್ಚಿ ಹಂಚಲಾಗಿದೆ. ಅವರಿಗೆ ಬೇಸರವಿದ್ದರೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಚರ್ಚಿಸಿ ಹೇಳಿದರೆ ಹಿರಿಯ ನಾಯಕರ ಪಕ್ಕದಲ್ಲಿ ಸ್ಥಳಾವಕಾಶ ಮಾಡಿಕೊಡಲಾಗುವುದು ಎಂದರು.

ಈ ವೇಳೆ ರೇವಣ್ಣ ಸದನದಲ್ಲಿ ಹಾಜರಿರಲಿಲ್ಲ. ನಂತರ ಸದನಕ್ಕೆ ಆಗಮಿಸಿದ ಎಚ್‌.ಡಿ.ರೇವಣ್ಣ ತಮಗೆ ಮೀಸಲಾಗಿದ್ದ ಕುರ್ಚಿಯಲ್ಲಿ ಕೂಡದೇ ಬೇರೆಯವರಿಗೆ ಮೀಸಲಾಗಿದ್ದ ಕುರ್ಚಿಯಲ್ಲಿ ಕುಳಿತುಕೊಂಡರು. ಇದನ್ನು ಗಮನಿಸಿದ ಮಾಧುಸ್ವಾಮಿ, ಸಭಾಧ್ಯಕ್ಷರೇ, ರೇವಣ್ಣ ಬೇರೆ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದಾಗ, ರೇವಣ್ಣ ತಮಗೆ ಮೀಸಲಿಟ್ಟ ಕುರ್ಚಿಯಲ್ಲಿ ಕುಳಿತುಕೊಳ್ಳದಿರುವುದಕ್ಕೆ ಕಾರಣ ಹೇಳಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ವಾಸ್ತು ಸರಿಯಾಗೇ ಇದೆ: ರೇವಣ್ಣ ತಮಗೆ ಮೀಸಲಿಟ್ಟ ಆಸನದಲ್ಲಿ ಕುಳಿತುಕೊಳ್ಳದ ಬಗ್ಗೆ ಬೆಳಗ್ಗೆಯೂ ಚರ್ಚೆ ನಡೆಯಿತು. ಕೊನೆಯ ಸಾಲಿನಲ್ಲಿ ರೇವಣ್ಣ ಕುಳಿತಿದ್ದುದನ್ನು ಗಮನಿಸಿದ ಸ್ಪೀಕರ್‌, ಮೀಸಲಿಟ್ಟ ಸ್ಥಾನಕ್ಕೆ ಹೋಗುವಂತೆ ಸಲಹೆ ಮಾಡಿದರು. ಆದರೆ, ನನಗೆ ಹಿಂದಿನ ಸಾಲಿನಲ್ಲೇ ಕುರ್ಚಿ ಕೊಡಿ ಎಂದು ರೇವಣ್ಣ ಕೇಳಿದಾಗ, ಅದೆಲ್ಲಾ ಸಾಧ್ಯವಿಲ್ಲ. ನಿಮಗೆ ಕೊಟ್ಟಿರುವ ಸ್ಥಾನ ವಾಸ್ತು ಪ್ರಕಾರವೇ ಇದೆ. ಅಲ್ಲೇ ಕುಳಿತುಕೊಳ್ಳಿ ಎಂದರು.

ಸಿದ್ದು ದನಿ ಮಿಮಿಕ್ರಿ ಮಾಡಿದ್ದಾರೆ: ಅಪ್ಪಾಜಿಗೌಡ
ವಿಧಾನ ಪರಿಷತ್ತು: ಧರ್ಮಸ್ಥಳದ ಶಾಂತಿವನದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ಹೊರಬಂದ ವಿಡಿಯೋದಲ್ಲಿ ಇರುವುದು ಸಿದ್ದರಾಮಯ್ಯ ಅವರ ಧ್ವನಿ ಅಲ್ಲ, ಯಾರೋ ಮಿಮಿಕ್ರಿ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಜೆಡಿಎಸ್‌ ಸದಸ್ಯ ಅಪ್ಪಾಜಿಗೌಡ ಹೇಳಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, 37 ಸ್ಥಾನ ಗೆದ್ದರೂ ಪ್ರಜಾಪ್ರಭುತ್ವದಲ್ಲಿ ಇರುವ ಅವಕಾಶವನ್ನು ಬಳಸಿಕೊಂಡು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಈ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ. ಅಸೂಯೆ ಬಿಟ್ಟು ರಚನಾತ್ಮಕ ಪ್ರತಿಪಕ್ಷವಾಗಿ ಕೆಲಸ ಮಾಡಿ ಎಂದು ಬಿಜೆಪಿಯವರಿಗೆ ಕಿವಿಮಾತು ಹೇಳಿದರು.

ನಾವು ಅಸೂಯೆ ಪಟ್ಟುಕೊಳ್ಳುತ್ತಿಲ್ಲ. ಸರ್ಕಾರದ ಅಸ್ತಿತ್ವ, ಆಯಸ್ಸು ಮತ್ತು ಬಜೆಟ್‌ ಮಂಡನೆ ಬಗ್ಗೆ ಶಾಂತಿವನದಲ್ಲಿ ಸಿದ್ದರಾಮಯ್ಯನವರೇ ಹೇಳಿದ್ದಾರೆ ಎಂದು ಬಿಜೆಪಿ ಸದಸ್ಯರು ತಿರುಗೇಟು ನೀಡಿದರು. “ಅದು ಸಿದ್ದರಾಯ್ಯನವರ ಧ್ವನಿ ಅಲ್ಲ, ಯಾರೋ ಮಿಮಿಕ್ರಿ ಮಾಡಿ ವಿಡಿಯೋ ರಿಲೀಸ್‌ ಮಾಡಿದ್ದಾರೆ ಎಂದು ಅಪ್ಪಾಜಿಗೌಡ ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರೆಲ್ಲರೂ ಜೋರಾಗಿ ನಕ್ಕರು.

ಶಾಸಕರ ಭವನಕ್ಕೆ ಸಮಯ ನಿಗದಿಗೆ ಸ್ಪೀಕರ್‌ ಸಮರ್ಥನೆ ಶಾಸಕರ ಭವನಕ್ಕೆ ಸಾರ್ವಜನಿಕರ ವಾಹನ ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ನಿರ್ಬಂಧ ತೆರವುಗೊಳಿಸುವಂತೆ ಶಾಸಕರ ಕೋರಿಕೆಯನ್ನು ಸ್ಪೀಕರ್‌ ರಮೇಶ್‌ಕುಮಾರ್‌ ತಳ್ಳಿಹಾಕಿದ್ದಾರೆ. ಬುಧವಾರ ಈ ಕುರಿತಂತೆ ಶಾಸಕರು ಮಾಡಿಕೊಂಡ ಮನವಿಗೆ ಪ್ರತಿಕ್ರಿಯಿಸಿದ ಸ್ಪೀಕರ್‌, ಶಾಸಕರ ಭವನದಲ್ಲಿ ಅನೇಕ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. 

ಎಲ್ಲವನ್ನೂ ಗಮನದಲ್ಲಿಟ್ಟುಕೊಂಡೇ ನಿರ್ಬಂಧ ಹೇರಿದ್ದೇನೆ. ಜನಪ್ರತಿನಿಧಿಗಳಾದ ನಮಗೆ ಖಾಸಗಿತನ ಇರಬೇಕು. ಹಾಗಾಗಿ ಜನರು ಬೆಳಗ್ಗೆ 9 ಗಂಟೆ ನಂತರ ಬಂದರೆ ತೊಂದರೆಯಿಲ್ಲ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.