ಬೇಳೆಕಾಳು, ಆಹಾರ ಧಾನ್ಯಗಳ ಬೆಲೆಯಲ್ಲೂ ಏರಿಕೆ


Team Udayavani, Dec 7, 2021, 11:23 AM IST

food grains

Representative Image used

ಬೆಂಗಳೂರು: ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆ ಕೇವಲ ತರಕಾರಿ ಬೆಲೆಗಳ ಮೇಲೆ ಅಷ್ಟೇ ಪರಿಣಾಮ ಬೀರಿಲ್ಲ. ಬದಲಾಗಿ ಈಗ ಮೆಣಸಿನ ಕಾಯಿ, ಅಲಸಂದಿ ಕಾಳು, ಅವರೆಕಾಳು, ಹೆಸರುಬೇಳೆ, ಹೆಸರು ಕಾಳು ಸೇರಿದಂತೆ ಬೇಳೆ ಕಾಳು, ಆಹಾರ ಧಾನ್ಯ ಸೇರಿ ಇತರೆ ಅಗತ್ಯ ಪದಾರ್ಥಗಳ ಬೆಲೆ ದುಪ್ಪಟ್ಟಿಗೂ ಕಾರಣವಾಗಿದೆ. ಈ ಹಿಂದೆ ಕೆ.ಜಿಗೆ 80 ರೂ. ಇದ್ದ ಅಲಸಂದಿಕಾಳು 102 ರೂ.ಗೆ ಏರಿಕೆ ಆಗಿದೆ. ಕೆಜಿಗೆ 52 ರಿಂದ 55 ರೂ. ವರೆಗೆ ಇದ್ದ ಅವರೆಕಾಳು 62ರೂ. ದಿಂದ 65 ರೂ. ವರೆಗೂ ಮಾರಾಟವಾಗುತ್ತಿದೆ.

85ರೂ. ದರ ಇದ್ದ ಹೆಸರು ಬೇಳೆ ಈಗ 93 ರೂ.ಗೆ ಏರಿದೆ. ಈ ಹಿಂದೆ ಕಡಲೆಕಾಳು ಕೆಜಿಗೆ 58 ರೂ. ಇದ್ದ ಈಗ 64 ರೂ.ಗೆ ಮಾರಾಟವಾಗುತ್ತಿದೆ. 105 ರೂ.ಗೆ ಮಾರಾಟವಾಗುತ್ತಿದ್ದ ಕಡ್ಲೆ ಬೀಜ ಈಗ 115 ರೂ. ತಲುಪಿದೆ. ಜತೆಗೆ ಹುರುಳಿಕಾಳು ಬೆಲೆ 38 ರಿಂದ 43 ರೂ. ವರೆಗೆ ಜಿಗಿತ ಕಂಡಿದೆ ಎಂದು ಯಶವಂತಪುರ ಮಾರುಕಟ್ಟೆಯ ಬೆಳೆಕಾಳು ಪದಾರ್ಥಗಳ ಹೋಲ್‌ ಸೇಲ್‌ ವ್ಯಾಪಾರಿ ನೀಲಾದ್ರಿ ಎಂಟರ್‌ ಪ್ರೈಸಸ್‌ ಮಾಲೀಕ ಸಂದೇಶ್‌ ಹೇಳುತ್ತಾರೆ.

ಇದನ್ನೂ ಓದಿ:- ದೇಶದ ದಿಕ್ಕು ಬದಲಿಸಿದ್ದು ಅಂಬೇಡ್ಕರ್

ಇದೇ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಮೆಣಸಿನ ಕಾಯಿ ಬೆಲೆಯಲ್ಲೂ ಹೆಚ್ಚಳವಾಗಿದೆ. ಯಶವಂತಪುರ ಮಾರುಕಟ್ಟೆಯಲ್ಲಿ ಈ ಹಿಂದೆ ಕ್ವಿಂಟಲ್‌ಗೆ 25 ಸಾವಿರ ರೂ. ದರ ಇದ್ದ ಉತ್ತಮ ಗುಣಮಟ್ಟದ ಬ್ಯಾಡಗಿ ಮೆಣಸಿನ ಕಾಯಿ ಇದೀಗ 27 ರಿಂದ 30 ಸಾವಿರ ರೂ. ವರೆಗೂ ಏರಿಕೆಯಾಗಿದೆ. 12 ಸಾವಿರ ರೂ. ಇದ್ದ ಗುಂಟೂರು ಮೆಣಸಿನಕಾಯಿ 15 ಸಾವಿರ ರೂ. ವರೆಗೂ ತಲುಪಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮೆಣಸಿನ ಬೆಳೆ ಹಾಳಾಗಿದೆ. ಜತೆಗೆ ಇಳುವರಿ ಕೂಡ ಕಡಿಮೆ ಆಗಿದೆ. ಆ ಹಿನ್ನೆಲೆಯಲ್ಲಿ ಮೆಣಸಿನಕಾಯಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ ಎಂದು ಯಶವಂತಪುರ ಎಪಿಎಂಸಿಯ ಮೆಣಸಿನಕಾಯಿ ವ್ಯಾಪಾರಿ ಆನಂದ್‌ ಹೇಳುತ್ತಾರೆ.

ಬಾಸುಮತಿ ಅಕ್ಕಿ ಬೆಲೆ ಏರಿಕೆ

ಬಿರಿಯಾನಿ, ಪಲಾವ್‌ಗೆ ಬಳಕೆ ಮಾಡುವ ಬಾಸುಮತಿ ಅಕ್ಕಿ (ಸ್ಟೀಮ್‌ ರೈಸ್‌)ಬೆಲೆಯಲ್ಲಿ 5 ರಿಂದ 10 ರೂ. ಹೆಚ್ಚಳವಾಗಿದೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಈ ಹಿಂದೆ ಬಾಸುಮತಿ ಅಕ್ಕಿ ಕೆ.ಜಿಗೆ 80 ರೂ.ಗೆ ಖರೀದಿ ಆಗುತ್ತಿತ್ತು. ಆದರೆ ಈಗ 90 ರೂ. ಆಗಿದೆ. ಹರಿಯಾಣ ಮತ್ತು ಪಂಜಾಬ್‌ ರಾಜ್ಯಗಳಿಂದ ಬಾಸುಮತಿ ರೈಸ್‌ ಬೆಂಗಳೂರಿಗೆ ಪೂರೈಕೆ ಆಗುತ್ತದೆ. ಆದರೆ ಮಳೆಯಿಂದಾಗಿ ಆ ಭಾಗಗಳಲ್ಲಿ ಕೊಯ್ಲು ತಡವಾಗಿದೆ.

ಅಕ್ಕಿ ದಾಸ್ತಾನು ಇಲ್ಲದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ ಎಂದು ಎಫ್ಕೆಸಿಸಿಐನ ಎಪಿಎಂಸಿ ಸಮಿತಿಯ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ ತಿಳಿಸಿದ್ದಾರೆ. ಬಾಸುಮತಿ ಅಕ್ಕಿ ಬಿಟ್ಟರೆ ಉಳಿದ ಅಕ್ಕಿಗಳ ಬೆಲೆಯಲ್ಲಿ ಅಷ್ಟೊಂದು ರೀತಿಯ ವ್ಯತ್ಯಾಸವಾಗಿಲ್ಲ. ವಿಮಾನ ವೆಚ್ಚ ಮತ್ತು ಪೂರೈಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೆಲವೇ ಕೆಲವು ಅಕ್ಕಿಗಳ ಬೆಲೆಯಲ್ಲಿ 4ರಿಂದ 10ರೂ. ವರೆಗೂ ಏರಿಕೆ ಕಂಡು ಬಂದಿದೆ. ಆದರೆ ಸ್ಥಳೀಯ ಅಕ್ಕಿಗಳ ಬೆಲೆಯಲ್ಲಿ ಹೆಚ್ಚಳವಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.