ಅನುಮತಿಯಿಲ್ಲದೆ ರಸ್ತೆ ಅಗೆದರೆ ದಂಡ ಪ್ರಯೋಗ
Team Udayavani, Nov 28, 2022, 12:09 PM IST
ಬೆಂಗಳೂರು: ರಸ್ತೆ ಗುಂಡಿ ಸಮಸ್ಯೆಗೆ ಕಾರಣವಾದ ರಸ್ತೆ ಅಗೆಯುವ (ರೋಡ್ ಕಟ್ಟಿಂಗ್) ಸಾರ್ವಜನಿಕರಿಗೆ ದಂಡ ವಿಧಿ ಸಲು ಬಿಬಿಎಂಪಿ ನಿರ್ಧರಿಸಿದೆ.
ಪ್ರಸಕ್ತ ವರ್ಷದಲ್ಲಿ ಮಳೆ ಪ್ರಮಾಣ ಹೆಚ್ಚಾದ ಕಾರಣ ನಗರದಲ್ಲಿ ರಸ್ತೆ ಗುಂಡಿ ಗಳ ಸಮಸ್ಯೆಯೂ ಉಲ್ಬಣವಾಗುವಂತಾ ಗಿತ್ತು. ಈವರೆಗೆ ನಗರದಲ್ಲಿ 32 ಸಾವಿ ರಕ್ಕೂ ಹೆಚ್ಚಿನ ರಸ್ತೆ ಗುಂಡಿಗಳು ಪತ್ತೆ ಯಾಗಿದ್ದು, ಅದರಲ್ಲಿ ಶೇ. 95ಕ್ಕೂ ಹೆಚ್ಚಿನ ಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ.
ಪ್ರಮುಖವಾಗಿ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿನ ಗುಂಡಿಗಳಲ್ಲಿ ಬಹು ತೇಕ ಗುಂಡಿಗಳನ್ನು ಮುಚ್ಚಲಾ ಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿನ ಗುಂಡಿ ಗಳನ್ನು ಮುಚ್ಚುವ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗುತ್ತಿದೆ. ಅದರ ಜತೆಗೆ ವಾರ್ಡ್ ರಸ್ತೆಗಳಲ್ಲಿ ನೀರಿನ ಪೈಪ್ ದುರಸ್ತಿ ಸೇರಿ ಇನ್ನಿತರ ಕಾರಣಕ್ಕಾಗಿ ಸಾರ್ವಜನಿಕರು ರಸ್ತೆ ಅಗೆದರೆ ಅವರಿಗೆ ದಂಡ ವಿಧಿಸುವ ಬಗ್ಗೆ ನಿರ್ಧರಿಸಲಾಗಿದೆ. ಈ ಕುರಿತು ವಾರ್ಡ್ ಎಂಜಿನಿಯರ್ ಗಳಿಗೂ ಸೂಚಿಸಲಾಗಿದ್ದು, ರಸ್ತೆ ಅಗೆ ಯುವವರನ್ನು ಪತ್ತೆ ಮಾಡಿ ಅವರಿಗೆ ದಂಡ ವಿಧಿಸುವಂತೆ ಹಿರಿಯ ಅಧಿಕಾರಿ ಗಳು ತಿಳಿಸಿದ್ದಾರೆ.
ಜಲಮಂಡಳಿಗೆ ಗಡುವು: ವಾರ್ಡ್ ರಸ್ತೆಗಳಲ್ಲಿ ನೀರಿನ ಪೈಪ್, ಒಳಚರಂಡಿ ದುರಸ್ತಿಗಾಗಿ ರಸ್ತೆ ಅಗೆಯುವುದನ್ನು ತಪ್ಪಿ ಸಲು ಬಿಬಿಎಂಪಿ ಅಧಿಕಾರಿಗಳು ಜಲ ಮಂಡಳಿ ಅಧಿಕಾರಿಗಳ ಜತೆ ಸಭೆ ನಡೆಸಿ ದ್ದಾರೆ. ನೀರಿನ ಪೈಪ್ಗ್ಳನ್ನು ಪರೀಕ್ಷಿಸಿ ಲೀಕೇಜ್ ಇದ್ದರೆ ಕೂಡಲೆ ಅದನ್ನು ದುರಸ್ತಿ ಮಾಡಬೇಕು. ರಸ್ತೆಗಳನ್ನು ಬಿಬಿ ಎಂಪಿಯಿಂದ ದುರಸ್ತಿ ಮಾಡಿದ ನಂತರ ಮತ್ತೆ ರಸ್ತೆ ಅಗುವುದನ್ನು ಮಾಡಬಾರದು ಎಂದು ಜಲಮಂಡಳಿಗೆ ಸೂಚಿಸಲಾಗಿದೆ. ಹೀಗಾಗಿ ನಾಲ್ಕೈದು ದಿನಗಳಲ್ಲಿ ನೀರಿನ ಪೈಪ್ ಸೇರಿ ಇನ್ನಿತರ ಲೀಕೇಜ್ ಪರೀಕ್ಷಿ ಸುವಂತೆಯೂ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ