ಗುಂಡಿಗಳ ಹೆಚ್ಚಳಕ್ಕೆ ರಸ್ತೆ ಅಗೆತವೂ ಕಾರಣ


Team Udayavani, Nov 30, 2022, 11:27 AM IST

ಗುಂಡಿಗಳ ಹೆಚ್ಚಳಕ್ಕೆ ರಸ್ತೆ ಅಗೆತವೂ ಕಾರಣ

ಬೆಂಗಳೂರು: ರಸ್ತೆ ಗುಂಡಿ ಸಮಸ್ಯೆಗೆ ಪ್ರಮುಖ ಕಾರಣವಾದ ರಸ್ತೆ ಅಗೆತ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಆದರೆ, ರಸ್ತೆ ಅಗೆತ ಸಂಪೂರ್ಣ ತಡೆಯಲು ಸಾಧ್ಯವಾಗಿಲ್ಲ. ಅದರಲ್ಲೂ ಕಳೆದ ವರ್ಷ ಅನುಮತಿ ಪಡೆದು ಪ್ರಸಕ್ತ ಸಾಲಿನಲ್ಲಿ ರಸ್ತೆ ಅಗೆಯುವ ಕಾಮಗಾರಿ ಆರಂಭಿಸಿರುವುದರಿಂದಾಗಿ ಪ್ರಸ್ತುತ ರಸ್ತೆ ಗುಂಡಿ ಸಮಸ್ಯೆ ಹೆಚ್ಚುವಂತಾಗಿದೆ.

ನಗರದಲ್ಲಿ ಯಾರೇ ರಸ್ತೆ ಅಗೆಯಬೇಕೆಂದರೂ ಅದಕ್ಕೆ ಬಿಬಿಎಂಪಿಯಿಂದ ಅನುಮತಿ ಪಡೆಯುವುದೂ ಕಡ್ಡಾಯ. ಅದರಲ್ಲೂ ಬಿಬಿಎಂಪಿಗೆ ಅರ್ಜಿ ಸಲ್ಲಿಸಿ, ಅನುಮತಿ ಶುಲ್ಕ ಪಾವತಿಸಬೇಕು. ಅದರಂತೆ 2021-22ನೇ ಸಾಲಿನಲ್ಲಿ 43 ಅರ್ಜಿಗಳು ಸಲ್ಲಿಕೆಯಾಗಿದ್ದು, 303.85 ಕಿ.ಮೀ. ರಸ್ತೆ ಅಗೆಯುವುದಕ್ಕೆ ಅನುಮತಿಸಲಾಗಿದೆ. ಅದೇ 2022-23ನೇ ಸಾಲಿನಲ್ಲಿ 29 ಕಡೆ ರಸ್ತೆ ಅಗೆಯಲು ಅರ್ಜಿ ಸಲ್ಲಿಕೆಯಾಗಿದ್ದು, ಕೇವಲ 12.10 ಕಿ.ಮೀ. ರಸ್ತೆ ಅಗೆಯಲು ಅನುಮತಿಸಲಾಗಿದೆ. ಆದರೆ, 2021-22ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಮಾರ್ಚ್‌ನಲ್ಲಿಯೇ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದವು. ಹೀಗಾಗಿ ಆ ಅರ್ಜಿಗಳು ಕಳೆದ ವರ್ಷದ ಸಾಲಿಗೆ ಸೇರಿದ್ದರೂ, ಪ್ರಸಕ್ತ ವರ್ಷದಲ್ಲಿ ರಸ್ತೆ ಅಗೆಯುವ ಕೆಲಸ ಮಾಡಲಾಗುತ್ತಿದೆ.

ಒಂದೇ ತಿಂಗಳಲ್ಲಿ 216 ಕಿ.ಮೀ.ಗೆ ಅನುಮತಿ: ರಸ್ತೆ ಅಗೆತಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ 303.85 ಕಿ.ಮೀ. ರಸ್ತೆ ಅಗೆಯಲು ಅನುಮತಿ ನೀಡಲಾಗಿದೆ. ಅದರಲ್ಲಿ 2022ರ ಮಾರ್ಚ್‌ ತಿಂಗಳಲ್ಲಿಯೇ 13 ಅರ್ಜಿಗಳು ಸಲ್ಲಿಕೆಯಾಗಿ, 216.28 ಕಿ.ಮೀ. ರಸ್ತೆ ಅಗೆಯಲು ಅನುಮತಿ ಕೋರಲಾಗಿತ್ತು. ಅದಕ್ಕೆ ಬಿಬಿಎಂಪಿ ಅನುಮತಿಸಿದೆ. ಅಲ್ಲದೆ, ಒಟ್ಟಾರೆ 2021-22ನೇ ಸಾಲಿನಲ್ಲಿ ಬಿಬಿಎಂಪಿ ರಸ್ತೆ ಅಗೆತಕ್ಕೆ ಸಂಬಂಧಿಸಿದಂತೆ 44.51 ಕೋಟಿ ರೂ. ಸಂಗ್ರಹಿಸಿದ್ದು, ಅದರಲ್ಲಿ ರಸ್ತೆ ದುರಸ್ತಿಗಾಗಿ 27.83 ಕೋಟಿ ರೂ. ವಸೂಲಾಗಿದೆ. ಹೀಗೆ ಒಂದೇ ತಿಂಗಳಲ್ಲಿ ಹೆಚ್ಚಿನ ಕಿ.ಮೀ. ರಸ್ತೆಯನ್ನು ಅಗೆಯಲು ಅನುಮತಿಸಿದ್ದರಿಂದಾಗಿ ಈ ವರ್ಷದಲ್ಲಿ ರಸ್ತೆ ಗುಂಡಿ ಸಮಸ್ಯೆ ಹೆಚ್ಚುವಂತಾಗಿದೆ.

ಈ ವರ್ಷ 29 ಅರ್ಜಿ: 2022-23ನೇ ಸಾಲಿನಲ್ಲಿ ರಸ್ತೆ ಅಗೆತಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಅರ್ಜಿಗಳ ಸಂಖ್ಯೆ ಕಡಿಮೆ ಇದೆ. ಅದರ ಪ್ರಕಾರ 2022ರ ಏಪ್ರಿಲ್‌ನಿಂದ ಈವರೆಗೆ 29 ಕಡೆ ರಸ್ತೆ ಅಗೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅದರ ಮೂಲಕ 12.10 ಕಿ.ಮೀ. ರಸ್ತೆ ಅಗೆಯಲು ಬಿಬಿಎಂಪಿ ಅನುಮತಿಸಿದೆ. ಈ ಅನುಮತಿ ಮೂಲಕ ಬಿಬಿಎಂಪಿ 2.36 ಕೋಟಿ ರೂ. ಅದಾಯ ಸಂಗ್ರಹಿಸಿದೆ.

ಅಗೆಯುವವರೇ ದುರಸ್ತಿ ಮಾಡಬೇಕು: ಕಳೆದ ವರ್ಷದವರೆಗೆ ರಸ್ತೆ ಅಗೆಯುವವರು ಬಿಬಿಎಂಪಿಗೆ ದುರಸ್ತಿ ವೆಚ್ಚ ಪಾವತಿಸಿದರೆ ಬಿಬಿಎಂಪಿಯಿಂದ ರಸ್ತೆಯನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿತ್ತು. ಆದರೆ, ರಸ್ತೆ ಅಗೆಯುವ ಸಂಸ್ಥೆ ತಮ್ಮ ಕಾಮಗಾರಿ ಪೂರ್ಣಗೊಂಡ ನಂತರ ರಸ್ತೆ ದುರಸ್ತಿಗಾಗಿ ಬಿಬಿಎಂಪಿಗೆ ಮಾಹಿತಿ ನೀಡಬೇಕಿತ್ತು. ಆದರೆ, ಬಿಬಿಎಂಪಿ ಹಾಗೂ ರಸ್ತೆ ಅಗೆಯುವ ಸಂಸ್ಥೆ ನಡುವಿನ ಸಮನ್ವಯದ ಕೊರತೆಯಿಂದಾಗಿ ರಸ್ತೆ ದುರಸ್ತಿ ವಿಳಂಬವಾಗುತ್ತಿತ್ತು. ಇದನ್ನು ಮನಗಂಡ ಬಿಬಿಎಂಪಿ ರಸ್ತೆ ಅಗೆಯುವವರಿಂದಲೇ ರಸ್ತೆ ದುರಸ್ತಿ ಮಾಡಿಸುವಂತೆ ಸಮನ್ವಯ ಸಮಿತಿ ಮುಂದೆ ಬೇಡಿಕೆ ಇಟ್ಟಿತ್ತು. ಅದಕ್ಕೆ ಸಂಬಂಧಿಸಿದಂತೆ ಸಮನ್ವಯ ಸಮಿತಿಯು ರಸ್ತೆ ಅಗೆತಕ್ಕೆ ಅರ್ಜಿ ಸಲ್ಲಿಸುವ ಸಂಸ್ಥೆಯೇ ರಸ್ತೆ ದುರಸ್ತಿ ಮಾಡಬೇಕು ಎಂದು ಸೂಚಿಸಿದೆ. ಇದರಿಂದಾಗಿ ರಸ್ತೆ ಅಗೆತದ ನಂತರ ಎದುರಾಗುವ ಸಮಸ್ಯೆಗೆ ರಸ್ತೆ ಅಗೆಯುವ ಸಂಸ್ಥೆಯೇ ಹೊಣೆಯಾಗಲಿದೆ.

ಕಳೆದ ವರ್ಷದವರೆಗೆ ರಸ್ತೆ ಅಗೆಯುವ ಸಂಸ್ಥೆ ದುರಸ್ತಿಗಾಗಿ ಬಿಬಿಎಂಪಿಗೆ ಹಣ ಪಾವತಿಸುತ್ತಿತ್ತು. ಆದರೆ, ಈಗ ರಸ್ತೆ ಅಗೆಯುವ ಸಂಸ್ಥೆಯೇ ಅದನ್ನು ದುರಸ್ತಿ ಮಾಡಬೇಕು ಎಂದು ನಿರ್ದೇಶಿಸಲಾಗಿದೆ. ಹೀಗಾಗಿ ರಸ್ತೆ ಅಗೆತದಿಂದ ಎದುರಾಗುವ ಸಮಸ್ಯೆಗೆ ಬಿಬಿಎಂಪಿ ಹೊಣೆಯಾಗುವುದಿಲ್ಲ. ಆದರೂ, ರಸ್ತೆ ಅಗೆದು ಕಾಮಗಾರಿ ಮುಗಿದ ನಂತರ ರಸ್ತೆ ದುರಸ್ತಿ ಮಾಡದಿ ದ್ದರೆ ಅದರ ಬಗ್ಗೆ ಬಿಬಿಎಂಪಿ ಎಂಜಿನಿ ಯರ್‌ಗಳು ಕ್ರಮ ಕೈಗೊಳ್ಳಲಿದ್ದಾರೆ. – ರವೀಂದ್ರ, ಬಿಬಿಎಂಪಿ ವಿಶೇಷ ಆಯುಕ್ತ

– ಗಿರೀಶ್‌ ಗರಗ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.