Road mishap: ಸರಣಿ ಅಪಘಾತ: ಬೈಕ್ನಲ್ಲಿದ್ದ ತಾಯಿ-ಮಗ ದುರ್ಮರಣ
Team Udayavani, Oct 26, 2023, 11:10 AM IST
ಬೆಂಗಳೂರು: ನಾಲ್ಕು ವಾಹನಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ನರೇಶ್ ಎಂಬುವರ ಪತ್ನಿ ಅಶ್ವಿನಿ (29) ಮತ್ತು ಅವರ ಪುತ್ರ ಯಶ್ವಿನ್(7) ಮೃತ ದುರ್ದೈವಿಗಳು. ಘಟನೆಯಲ್ಲಿ ಬೈಕ್ ಚಾಲಕ ನರೇಶ್, ಆಟೋ ಚಾಲಕ, ಪ್ರಯಾಣಿಕರು ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶ ಮೂಲದ ನರೇಶ್ ನಗರದಲ್ಲಿ ಗುತ್ತಿಗೆದಾರರಾಗಿದ್ದು, ಈ ಮೊದಲು ಹೂಡಿಯಲ್ಲಿ ವಾಸವಾಗಿದ್ದರು. ಕೆಲ ತಿಂಗಳ ಹಿಂದೆ ಆಂಧ್ರಪ್ರದೇಶಕ್ಕೆ ಸ್ಥಳಾಂತರವಾಗಿದ್ದರು. ಆದರೂ ನಗರದಲ್ಲಿ ಸಣ್ಣ-ಪುಟ್ಟ ಗುತ್ತಿಗೆ ಕಾಮಗಾರಿಗಳನ್ನು ನಡೆಸುತ್ತಿದ್ದರು. ಅ.24ರಂದು ವಿಜಯದಶಮಿ ಪ್ರಯುಕ್ತ ನರೇಶ್, ಪತ್ನಿ ಮತ್ತು ಪುತ್ರನ ಜತೆ ಬೈಕ್ನಲ್ಲಿ ಆಂಧ್ರಪ್ರದೇಶದಿಂದ ಕೆ.ಜಿ.ಹಳ್ಳಿಯಲ್ಲಿರುವ ಮಾವನ ಮನೆಗೆ ಬರುತ್ತಿದ್ದರು.
ಇದೇ ವೇಳೆ ಬೆಳಗ್ಗೆ 11 ಗಂಟೆ ಸುಮಾರಿಗೆ ಹುಳಿಮಾವು ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ನಿಂತಿತ್ತು. ಈ ವೇಳೆ ಅತೀ ವೇಗವಾಗಿ ಬಂದ ಆಟೋ ಚಾಲಕ ಬಸ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಹಿಂದೆ ಬೈಕ್ನಲ್ಲಿ ಬರುತ್ತಿದ್ದ ನರೇಶ್ ಆಟೋಕ್ಕೆ ಡಿಕ್ಕಿ ಹೊಡೆದಿದ್ದರು.
ಮತ್ತೂಂದೆಡೆ ಅತೀವೇಗವಾಗಿ ಬಂದ ಟಾಟಾ ಏಸ್ ಚಾಲಕ ನಿಯಂತ್ರಣ ತಪ್ಪಿ ನರೇಶ್ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಪತ್ನಿ ಅಶ್ವಿನಿ ಮತ್ತು ಪುತ್ರ ಯಶ್ವಿನ್ ಕೆಳಗೆ ಬಿದ್ದು, ತಲೆಗೆ ಪೆಟ್ಟು ಬಿದ್ದಿದ್ದೆ. ತೀವ್ರ ರಕ್ತಸ್ರಾವವಾಗಿ ತಾಯಿ-ಮಗನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ