Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು
Team Udayavani, Apr 15, 2024, 8:19 AM IST
ಬೆಂಗಳೂರು: ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್ನಲ್ಲಿ ಬೆಂಗಳೂರು ಜಲಮಂಡಳಿ ತೋಡಿದ್ದ ಗುಂಡಿಗೆ ದ್ವಿಚಕ್ರ ವಾಹನ ಸಹಿತ ಬಿದ್ದ ಮೂವರು ಯುವಕರ ಪೈಕಿ ಓರ್ವ ಮೃತ ಪಟ್ಟು, ಉಳಿದಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಜೆ.ಜೆ.ನಗರದ ಸದ್ದಾಂ ಪಾಷಾ(20) ಮೃತರು. ಉಮ್ರಾನ್ ಪಾಷಾ ಮತ್ತು ಮುಬಾರಕ್ ಪಾಷಾ ಗಾಯಗೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಇಬ್ಬರೂ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ.
ಈ ಮೂವರು ಕೊಮ್ಮಘಟ್ಟದಲ್ಲಿ ಗುಜರಿ ವಸ್ತುಗಳ ವ್ಯಾಪಾರ ಮಾಡುತ್ತಾರೆ. ಭಾನುವಾರ ರಾತ್ರಿ 8.30ಕ್ಕೆ ವ್ಯಾಪಾರ ಮುಗಿಸಿಕೊಂಡು ಮೂವರು ಯುವಕರು ಒಂದೇ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟ್ಟಿದ್ದರು. ಕೊಮ್ಮಘಟ್ಟ ಸರ್ಕಲ್ ಬಳಿ ಬರುವಾಗ ಬ್ಯಾರಿಕೇಡ್ ನಡುವಿನ ಸಣ್ಣ ಜಾಗದಲ್ಲಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ದ್ವಿಚಕ್ರವಾಹನ ಸಹಿತ ಮೂವರು ಗುಂಡಿಗೆ ಬಿದ್ದಿದ್ದಾರೆ. ಈ ವೇಳೆ ದ್ವಿಚಕ್ರ ವಾಹನ ಚಲಾಯಿ ಸುತ್ತಿದ್ದ ಸವಾರ ಸದ್ದಾಂ ಪಾಷಾಗೆ ಗಂಭೀರ ಗಾಯವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಉಳಿದಿಬ್ಬರು ಹಿಂಬದಿ ಸವಾರರು ಗಾಯಗೊಂಡು ಗುಂಡಿಯಲ್ಲಿ ಒದ್ದಾಡುತ್ತಿದ್ದರು. ಆಗ ನೆರವಿಗೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಗುಂಡಿ ಯಿಂದ ಮೇಲಕ್ಕೆ ಎತ್ತಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು