Road mishap:ಪ್ರತ್ಯೇಕ ಅಪಘಾತ: ಮೂವರು ಸಾವು
Team Udayavani, Sep 11, 2023, 1:44 PM IST
ಬೆಂಗಳೂರು: ನಗರದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಗಾರ್ಮೆಂಟ್ಸ್ ನೌಕರ, ಫುಡ್ ಡೆಲಿವರಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಸೈಕಲ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಟ್ಟಹಲಸೂರು ನಿವಾಸಿ ನಾಗರಾಜು(28) ಮೃತ ಸೈಕಲ್ ಸವಾರ. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜು, ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಸೈಕಲ್ನಲ್ಲಿ ಮನೆಯತ್ತ ಹೋಗುತ್ತಿದ್ದರು. ಸೆಂಟ್ರಲ್ ಜೈಲು ರಸ್ತೆಯಲ್ಲಿ ಕಾರು ಸೈಕಲ್ಗೆ ಡಿಕ್ಕಿ ಹೊಡೆದು ಘಟನೆ ನಡೆದಿದೆ.
ಪಾದಚಾರಿ ಸಾವು: ಮತ್ತೂಂದು ಪ್ರಕರಣದಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವ ಪ್ರಕರಣ ಕೆ.ಜಿ.ಹಳ್ಳಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗವಾರ ನಿವಾಸಿ ಮಹೇಂದ್ರಕುಮಾರ್(50) ಮೃತರು. ಖಾಸಗಿ ಆಸ್ಪತ್ರೆಯಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುವ ಮಹೇಂದ್ರ ಶನಿವಾರ ಕೆಲಸ ಮುಗಿಸಿಕೊಂಡು ಸಂಜೆ 6.45ಕ್ಕೆ ಜೆಎಂಜೆ ರಸ್ತೆಯ ಜೂಡಿಯಾ ಶಾಪಿಂಗ್ ಮಾಲ್ ಬಳಿಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಫುಡ್ ಡೆಲಿವರಿ ಬಾಯ್ ಸಾವು: ಇನ್ನೊಂದು ಪ್ರಕರಣದಲ್ಲಿ ಕ್ರಾಂಕ್ರೀಟ್ ಮಿಕ್ಸರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಫುಡ್ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕದ ಅಟ್ಟೂರಿನಲ್ಲಿ ನಡೆದಿದೆ.ಚಿಕ್ಕಬೊಮ್ಮಸಂದ್ರ ನಿವಾಸಿ ದೇವರಾಜು(21) ಮೃತ ಯುವಕ. ಯಾದಗಿರಿ ಮೂಲದ ದೇವರಾಜು ನಗರದಲ್ಲಿ ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಝೋಮ್ಯಾಟೋದಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ.