5 ಸಾವಿರ ರಸ್ತೆ ಗುಂಡಿ ಮುಚ್ಚಿದ ಪಾಲಿಕೆ
Team Udayavani, May 22, 2022, 10:25 AM IST
ಬೆಂಗಳೂರು: ನಗರದಲ್ಲಿ ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ವೇಗ ನೀಡಿದ್ದು ಶನಿವಾರ 5,070 ಗುಂಡಿಗಳನ್ನು ಮುಚ್ಚಲಾಗಿದೆ.
ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದ ಕಾರಣದಿಂದಾಗಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಹಿನ್ನಡೆಯಾಗಿತ್ತು. ಜತೆಗೆ ಬಿಬಿಎಂಪಿಯ ಬಿಟುಮಿನ್ ಮಿಕ್ಸ್ ಪ್ಲ್ರಾಂಟ್ ಕಾರ್ಯಸ್ಥಗಿತವಾಗಿ ಗುಂಡಿ ಮುಚ್ಚಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕಳೆದ ಸೋಮವಾರದಿಂದ ಬಿಟುಮಿನ್ ಮಿಕ್ಸ್ ಪ್ಲ್ರಾಂಟ್ ಕೆಲಸ ಆರಂಭಿಸಿದ್ದು ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ ನೀಡಲಾಗಿದೆ. ಶನಿವಾರ ನಗರದ ಬಹುತೇಕ ಕಡೆ ಗುಂಡಿಗಳನ್ನು ಮುಚ್ಚಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎಲ್ಲ ಗುಂಡಿ ಮುಚ್ಚಲು ನಿರ್ಧರಿಸಲಾಗಿದೆ.
5,070 ಗುಂಡಿಗಳಿಗೆ ಮುಕ್ತಿ: ಬಿಬಿಎಂಪಿ ಗುರುತಿಸಿದ 10,861 ಗುಂಡಿಗಳ ಪೈಕಿ ಶನಿವಾರ 5,070 ಗುಂಡಿಗಳನ್ನು ಕೋಲ್ಡ್ ಮತ್ತು ಹಾಟ್ ಬಿಟುಮಿನ ಮಿಕ್ಸ್ ಹಾಕಿ ಮುಚ್ಚಲಾಗಿದೆ. 2,148 ಗುಂಡಿಗಳನ್ನು ಬಿಬಿಎಂಪಿ ಸಹಾಯಕ ಎಂಜಿನಿಯರ್ ಪರಿಶೀಲಿಸಿದ್ದಾರೆ. 2,260 ಗುಂಡಿಗಳಿಗೆ ಯೋಜನಾ ವರದಿ ಸಿದ್ಧಪಡಿಸಲಾಗಿದೆ. 1094 ಗುಂಡಿಗಳು ಮುಚ್ಚುವ ಅವಶ್ಯಕತೆ ಇಲ್ಲ ಎಂದು ತಿರಸ್ಕರಿಸಲಾಗಿದೆ. 289 ಗುಂಡಿಗಳನ್ನು ಪ್ರತ್ಯೇಕ ಯೋಜನೆ ಸಿದ್ಧಪಡಿಸಿ ಸರಿಪಡಿಸಬೇಕಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಮಳೆ ಬಿಡುವು ನೀಡಿದರೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಗುಂಡಿ ಮುಚ್ಚುವ ಕಾಮಗಾರಿಗೆ ಪೂರ್ಣಗೊಳ್ಳಲಿದೆ. ಶನಿವಾರ 5 ಸಾವಿರಕ್ಕೂ ಅಧಿಕ ಗುಂಡಿಗಳಿಗೆ ಕೋಲ್ಡ್ ಬಿಟುಮಿನ್ ಹಾಕಿ ಮುಚ್ಚಲಾಗಿದೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತ ರವೀಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ