ಅಪಘಾತಗಳ ತಡೆಗೆರೋಡ್‌ರನ್ನರ್‌ ಆ್ಯಪ್‌


Team Udayavani, Mar 21, 2019, 9:37 AM IST

blore-5.jpg

ಬೆಂಗಳೂರು: ಭೀಕರ ರಸ್ತೆ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿ ಹೆದ್ದಾರಿಗಳಲ್ಲಿ. ಅತಿ ವೇಗ ಹಾಗೂ ವೇಗದ ಏಕತಾನತೆಯಿಂದ ಚಾಲಕ ನಿದ್ರೆಗೆ ಜಾರುವುದರಿಂದ, ಹೆದ್ದಾರಿಗಳಲ್ಲಿನ ಅಪಘಾತ ಸೂಕ್ಷ್ಮ ವಲಯಗಳ ಅರಿವು ಚಾಲಕನಿಗೆ ಇರುವುದಿಲ್ಲ.

ಇಂತಹ ಹಲವು ಕಾರಣಗಳಿಂದ ಅಪಘಾತಗಳು ಸಂಭವಿಸುತ್ತವೆ. ಹೀಗೆ ಅಪಘಾತಗಳು ಸಂಭವಿಸುವ ಸೂಕ್ಷ್ಮ ಸ್ಥಳ ತಲುಪುವ ಮುನ್ನವೇ ವಾಹನ ಚಾಲಕನಿಗೆ ಎಚ್ಚರಿಕೆ ನೀಡುವ “ರೋಡ್‌ರನ್ನರ್‌’ ಎಂಬ ಮೊಬೈಲ್‌ ಆ್ಯಪ್‌ ಅನ್ನು ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ (ಎನ್‌ಎಂಐಟಿ) ವಿದ್ಯಾರ್ಥಿಗಳ ತಂಡ ಅಭಿವೃದ್ಧಿಪಡಿಸಿದೆ.

ಭಾರತ ಸರ್ಕಾರದಿಂದ ನಡೆದ 2019ನೇ ಸಾಲಿನ ಸ್ಮಾರ್ಟ್‌ ಇಂಡಿಯ ಹ್ಯಾಕ ಥಾನ್‌ ಸ್ಪರ್ಧೆಯಲ್ಲಿ ಈ ಅನ್ವೇಷಣೆಗೆ ಪ್ರಥಮ ಬಹುಮಾನ ಲಭಿಸಿದೆ. ಈ ಆ್ಯಪ್‌ಗೆ ಮತ್ತಷ್ಟು ಸುಧಾರಿತ ಅಂಶಗಳನ್ನು ಸೇರಿಸಿ ಅಭಿವೃದ್ಧಿಪಡಿಸುವಂತೆ ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ನಿರ್ವಹಣೆ ಸಚಿ ವಾಲಯ, ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾದ್ಯಾಲಯಕ್ಕೆ ಅಧಿಕೃತವಾಗಿ ಸೂಚಿಸಿದೆ.

ಈ ಆ್ಯಪ್‌ ಸಂಶೋಧನೆ ಹಾಗೂ ಅಭಿವೃದ್ಧಿ ತಂಡದ ನೇತೃತ್ವವನ್ನು ಫಜಲ್‌ ರೆಹಮಾನ್‌ ವಹಿಸಿದ್ದರು. ಇವರಿಗೆ ವಿದ್ಯಾರ್ಥಿಗಳಾದ ಅಭ್ರಜ್ಯೋತಿ ಪಾಲ್‌, ಯಶ್‌ ಜೈಸ್ವಾಲ್‌, ಅಮಿತ್‌ ಕೆ.ಕೆ, ದೀಪ್ತಾ ಎಂ, ಸಾರಂಗ್‌ ಪಾರಿಖ್‌, ಅಜಯ್‌ ಎಂ ಮತ್ತು ಯಶಸ್‌ ಎಂ. ಸಾಥ್‌ ನೀಡಿದ್ದರು. ಎನ್‌ಎಂಐಟಿ ಮಾಹಿತಿ ತಂತ್ರಜ್ಞಾನ ಭಾಗದ ಮುಖ್ಯಸ್ಥ ಡಾ. ಎಚ್‌.ಎ.ಸಂಜಯ್‌ ಮಾರ್ಗದರ್ಶನ ನೀಡಿದ್ದರು.

ಕಾರ್ಯನಿರ್ವಹಣೆ ಹೇಗೆ?: ಜಿ.ಪಿ.ಎಸ್‌ ಆಧಾರಿತ ಜಿಯೋ ಫೆನ್ಸಿಂಗ್‌ ಮೂಲಕ ದತ್ತಾಂಶಗಳನ್ನು ಪರಿಶೀಲಿಸಿ, ಈ ಆ್ಯಪ್‌ ಚಾಲಕನಿಗೆ ಅಪಘಾತ ವಲಯ ತಲುಪುವ ಮುನ್ನವೇ ಎಚ್ಚರಿಕೆ ಸಿಗ್ನಲ್‌ ನೀಡುತ್ತದೆ. ಈಗಾಗಲೇ ಗುರುತಿಸಲ್ಪಟ್ಟ ತಾಣಗಳ ಜತೆಗೆ, ರಸ್ತೆಯನ್ನು ಬಳಸುವ ಚಾಲಕರೂ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ತಾಣಗಳನ್ನು ತಾವೇ ಗುರುತಿಸಿ ಅವುಗಳನ್ನೂ ಈ ಆ್ಯಪ್‌ಗೆ ಸೇರಿಸಬಹುದು. ಇದರ ವ್ಯಾಪ್ತಿಯನ್ನು ಹೆದ್ದಾರಿಯ ನಿರ್ವಹಣೆಯ ಹೊಣೆ ಹೊತ್ತವರು ಹಾಗೂ ಬಳಕೆದಾರರೂ ಒಟ್ಟೊಟ್ಟಿಗೆ ವಿಸ್ತರಿಸ ಬಹುದು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.