ಸಹಾಯಧನಕ್ಕಾಗಿ ಬೀದಿ ವ್ಯಾಪಾರಿಗಳ ಅಲೆದಾಟ
Team Udayavani, Jul 5, 2021, 4:58 PM IST
ಬೆಂಗಳೂರು: ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳಆತ್ಮ ನಿರ್ಭರ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ಆರ್ಥಿಕಸಹಾಯ ಧನ ಘೋಷಣೆ ಮಾಡಿದೆ.
ಆದರೆ ಆಹಣವನ್ನು ಪಡೆಯಲು ಬೀದಿಬದಿ ವ್ಯಾಪಾರಿಗಳು ಬ್ಯಾಂಕ್ಗಳಿಗೆ ದಿನ ಪ್ರತಿ ಅಲೆದಾಟನಡೆಸುವ ಪರಿಸ್ಥಿತಿಎದುರಾಗಿದೆ.ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನೀಡಿರುವ ಕೇಂದ್ರದಸಹಾಯಧನ ಪಡೆಯಲು ರಾಜ್ಯದಸುಮಾರು 2.4 ಲಕ್ಷ ಬೀದಿ ಬದಿ ವ್ಯಾಪಾರಿಗಳು ಅರ್ಜಿಸಲ್ಲಿಕೆ ಮಾಡಿದ್ದರು.
ಅದರಲ್ಲಿ ಸುಮಾರು 1.2 ಲಕ್ಷಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಆಗಿದೆ.ಆದರೆ ಬಿಡುಗಡೆ ಆಗಿರುವ ಆ ಹಣಪಡೆಯಲು ಆಗುತ್ತಿಲ್ಲ ಎಂಬ ಅಳಲು ಬೀದಿ ಬದಿ ವ್ಯಾಪಾರಿಗಳದ್ದಾಗಿದೆ.ಆರ್ಥಿಕ ಸಂಕÐದ r ಹಿನ್ನೆಲೆಯಲ್ಲಿ ಈಗಾಗಲೇ ಕೆಲವುಬೀದಿಬದಿ ವ್ಯಾಪಾರಿಗಳು ಕೆಲವು ಬ್ಯಾಂಕ್ಗಳಲ್ಲಿ ಸಾಲಮಾಡಿದ್ದಾರೆ.
ಆ ಹಣದ ಸಾಲದ ಕಂತನ್ನು ಇನ್ನೂ ಸರಿಯಾಗಿ ತೀರಿಸಿಲ್ಲ. ಆ ಹಿನ್ನೆಲೆಯಲ್ಲಿಯೇ ಈಗ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯ ಸಹಾಯ ಧನನೀಡಲು ವಿಳಂಬ ಮಾಡಲಾಗುತ್ತಿದೆ ಎಂದುಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ದೂರಿದೆ.
ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಬೀದಿ ಬದಿವ್ಯಾಪಾರಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆರ್ಥಿಕ ಸಹಾಯ ನೀಡಿದೆ.ಆದರೆ ಈಗ ದೇವರು ಕೊಟ್ಟರು ಪೂಜಾರಿ ಕೊಡುತ್ತಿಲ್ಲಎನ್ನುವಂತಾಗಿದೆ ಬೀದಿ ಬದಿ ವ್ಯಾಪಾರಿಗಳ ಸ್ಥಿತಿ ಎಂದುಇಸ್ರೋ ಲೇಔಟ್ ನಿವಾಸಿ ಲಕ್ಷ್ಮೀ ಆರೋಪಿಸಿದರು.
ಆನ್ಲೈನ್ನಲ್ಲಿ ಯೋಜನೆ ಆಯ್ಕೆ ಆಗಿರುವುದರಬಗ್ಗೆ ಮಾಹಿತಿ ನೀಡುತ್ತದೆ.ಆದರೆಬ್ಯಾಂಕ್ಅಧಿಕಾರಿಗಳುಇನ್ನೂ ನಮ್ಮ ಬ್ಯಾಂಕ್ಗೆ ನಿಮ್ಮ ದಾಖಲಾತಿ ಬಂದಿಲ್ಲಎಂದು ಹೇಳುತ್ತಾರೆ ಎಂದು ದೂರಿದರು.
ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ: ಆತ್ಮನಿರ್ಭರ್ ನಿಧಿ ಯೋಜನೆಯಡಿ ಸಹಾಯ ಧನಕ್ಕೆಆಯ್ಕೆಯಾದ ಫಲಾನುಭವಿಗಳಿಗೆ ಹಣ ಬ್ಯಾಂಕ್ನಿಂದಕೈಸೇರುತ್ತಿಲ್ಲದಿರುವುದರ ಬಗ್ಗೆ ಈಗಾಗಲೇ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಇ.ರಂಗಸ್ವಾಮಿಹೇಳಿದ್ದಾರೆ.
ಹಲವು ಬೀದಿ ಬದಿ ವ್ಯಾಪಾರಿಗಳು ಕೂಡ ತಮಗೆಆಗುತ್ತಿರುವ ಅನ್ಯಾಯದ ಬಗ್ಗೆ ಸಂಘದ ಗಮನಕ್ಕೆತಂದಿದ್ದಾರೆ.ಬ್ಯಾಂಕ್ಅಧಿಕಾರಿಗಳನಿರ್ಲಕ್ಷ Âಧೋರಣೆಬಗ್ಗೆ ಕೌಶಲ್ಯ ಮಿಷನ್ ಅಧಿಕಾರಿಗಳ ಗಮನಕ್ಕೆತರಲಾಗಿದೆ. ಬ್ಯಾಂಕ್ ಅಧಿಕಾರಿಗಳ ಜತೆಗೆ ಮಾತುಕತೆನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದುತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ