Robbery: ಒಂಟಿಯಾಗಿ ಓಡಾಡುವವರ ಸುಲಿಗೆ ಮಾಡುತ್ತಿದ್ದ ದರೋಡೆಕೋರನ ಸೆರೆ
Team Udayavani, Sep 5, 2023, 4:07 PM IST
ಬೆಂಗಳೂರು: ಒಂಟಿಯಾಗಿ ಓಡಾಡುವವರನ್ನು ಸುಲಿಗೆ ಮಾಡುತ್ತಿದ್ದ ಅಂತಾರಾಜ್ಯ ಸುಲಿಗೆ ಕೋರರನನ್ನು ಭಾರತೀನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೆರೆ ರಾಜ್ಯದ ಸೈಯದ್ ಆಸಿಫ್ (22) ಬಂಧಿತ. ಆರೋಪಿಯಿಂದ 20 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಮೇ 18 ರಂದು ಬೆಳಗಿನ ಜಾವ 5.30ರಲ್ಲಿ ಕಾಕ್ಬರ್ನ್ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಪ್ರತಿಭಾ ಭಟ್ ಎಂಬವರ ಬೈಕ್ ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ಅವರ ಬ್ಯಾಗ್ ಮತ್ತು ಮೊಬೈಲ್ ಸುಲಿಗೆ ಮಾಡಿದ್ದ. ಈ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈತನ ವಿಚಾರಣೆಯಲ್ಲಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 17 ವಾಹನ ಕಳವು, ನೆರೆ ರಾಜ್ಯದಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಪುಲಕೇಶಿನಗರ ಉಪವಿಭಾಗದ ಎಸಿಪಿ ಎಸ್.ಆರ್.ಗೀತಾ ಮತ್ತು ಠಾಣಾಧಿಕಾರಿ ಫಿರೋಜ್ ಮೊಹಮ್ಮದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ