10 ಲಕ್ಷ ಬಚ್ಚಿಟ್ಟು ದರೋಡೆ ನಾಟಕವಾಡಿದ ವ್ಯಾಪಾರಿ!


Team Udayavani, Jan 21, 2023, 9:56 AM IST

10 ಲಕ್ಷ ಬಚ್ಚಿಟ್ಟು ದರೋಡೆ ನಾಟಕವಾಡಿದ ವ್ಯಾಪಾರಿ!

ಬೆಂಗಳೂರು: ಸಿಸಿಬಿ ಪೊಲೀಸರ ಸೋಗಿನಲ್ಲಿ ವ್ಯಾಪಾರಿಯನ್ನು ದರೋಡೆ ಮಾಡಿ 10 ಲಕ್ಷ ರೂ. ದೋಚಿದ್ದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಅಸಲಿಗೆ ಸಾಲ ತೀರಿಸುವ ಉದ್ದೇಶದಿಂದ ಉದ್ಯಮಿಯೊಬ್ಬರಿಗೆ ಸೇರಿದ 10 ಲಕ್ಷ ರೂ. ಅನ್ನು ಲಪಟಾಯಿಸಲು ದೂರುದಾರನೇ ದರೋಡೆ ನಾಟಕವಾಡಿರುವುದು ಪೊಲೀಸ್‌ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ದೂರು ಸಲ್ಲಿಸಿದ್ದ ಪಾದರಕ್ಷೆ ಅಂಗಡಿ ಮಾಲೀಕ ಮೂಲರಾಮ್‌(37) ನನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉತ್ತರಭಾರತ ಮೂಲದ ಮೂಲರಾಮ್‌ ನಗರದ ಮನವರ್ತಪೇಟೆಯಲ್ಲಿ “ಮೆಟ್ರೋ ಶೂ ಏಜೆನ್ಸಿ’ ಪಾದರಕ್ಷೆ ಮಾರಾಟ ಮಳಿಗೆ ಹೊಂದಿದ್ದ. ಮೂಲರಾಮ್‌ನ ನೆರೆಯ ಊರಿನ ರಮೇಶ್‌ ನಗರದಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದು, ಪರಿಚಿತ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಬಡ್ಡಿಗೆ ಹಣ ನೀಡುತ್ತಾರೆ. ಅವರು ವ್ಯಾಪಾರಿಗಳಿಗೆ ಕೊಡುತ್ತಿದ್ದ ಹಣವನ್ನು ಮೂಲರಾಮ್‌ ಸಂಗ್ರಹಿಸಿ ವಾಪಸ್‌ ರಮೇಶ್‌ ಅವರಿಗೆ ನೀಡುತ್ತಿದ್ದ. ಅದರಂತೆ ರಮೇಶ್‌ ಜ.13ರಂದು ಸಂಜೆ 4.30ಕ್ಕೆ ಮೂಲರಾಮ್‌ಗೆ ಕರೆ ಮಾಡಿ ಕೆಲವು ವ್ಯಾಪಾರಿಗಳಿಂದ ಹಣ ಸಂಗ್ರಹಿಸಿಕೊಂಡು ಬರುವಂತೆ ಸೂಚಿಸಿದ್ದರು. ಮೂಲರಾಮ್‌ ವ್ಯಾಪಾರಿಗಳಿಂದ 10 ಲಕ್ಷ ರೂ. ಸಂಗ್ರಹಿಸಿದ್ದ. ಆ ಹಣವನ್ನು ರಮೇಶ್‌ಗೆ ತಲುಪಿಸುವ ಬದಲು ತನ್ನ ಅಂಗಡಿಯ ಗೋದಾಮಿನಲ್ಲಿ ಬಚ್ಚಿಟ್ಟಿದ್ದ. ಬಳಿಕ ಮನೆಯಲ್ಲಿದ್ದ ಬ್ಯಾಗ್‌ನಲ್ಲಿ ಹಳೆ ಬಟ್ಟೆ ತುಂಬಿಕೊಂಡು ಮೈಸೂರು ರಸ್ತೆಯ ಸಿರ್ಸಿ ಸರ್ಕಲ್‌ ಬಳಿ ಬೈಕ್‌ ನಲ್ಲಿ ಬಂದು ಖಾಲಿ ಜಾಗದಲ್ಲಿ ಬ್ಯಾಗ್‌ ಎಸೆದಿದ್ದ. ಬಳಿಕ ತನ್ನ ಕೈಗೆ ತಾನೇ ಬ್ಲೇಡ್‌ನಿಂದ ಗಾಯಗೊಳಿಸಿದ್ದ.

ಅಲ್ಲಿಂದ ನೇರವಾಗಿ ಪೊಲೀಸ್‌ ಠಾಣೆಗೆ ಬಂದು “ಸಿಸಿಬಿ ಪೊಲೀಸರ ಸೋಗಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ನನ್ನನ್ನು ಅಡ್ಡಗಟ್ಟಿ ಹಲ್ಲೆಗೈದು 10 ಲಕ್ಷ ರೂ.ದರೋಡೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಸುಳ್ಳು ದೂರು ನೀಡಿದ್ದ.

ಪೊಲೀಸರು ಕೃತ್ಯ ನಡೆದ ಸ್ಥಳಕ್ಕೆ ಧಾವಿಸಿ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಮೂಲರಾಮ್‌ನನ್ನು ದರೋಡೆ ಮಾಡಿದ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಅನುಮಾನದ ಮೇರೆಗೆ ಮೂಲರಾಮ್‌ನನ್ನೇ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಅಸಲಿ ಕತೆ ಬೆಳಕಿಗೆ ಬಂದಿದೆ.

ವ್ಯಾಪಾರದಲ್ಲಿ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕ್ಕಿದ್ದೆ. ಹೀಗಾಗಿ 10 ಲಕ್ಷ ರೂ. ಅನ್ನು ತನ್ನದಾಗಿಸಿಕೊಳ್ಳಲು ದರೋಡೆ ನಾಟಕವಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಟಾಪ್ ನ್ಯೂಸ್

1-sasdsadad

Vijayapura ಡಿಡಿಪಿಐ ಹುದ್ದೆಗೆ ಅಧಿಕಾರಿಗಳಿಬ್ಬರ ಕಿತ್ತಾಟ;ಪೊಲೀಸರ ಮಧ್ಯ ಪ್ರವೇಶ

1-swqqe

WTC Final ; 469ಕ್ಕೆ ಆಸೀಸ್ ಆಲೌಟ್ ಮಾಡಿದ ಟೀಮ್ ಇಂಡಿಯಾ

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಕುವಿನಿಂದ ಇರಿದು ಯುವತಿಯ ಮೊಬೈಲ್‌ ಸುಲಿಗೆ

ಚಾಕುವಿನಿಂದ ಇರಿದು ಯುವತಿಯ ಮೊಬೈಲ್‌ ಸುಲಿಗೆ

ಸಾಲ ಪಡೆದು ಬ್ಯಾಂಕ್‌ಗೆ ವಂಚನೆ: ಇಡಿ ದಾಳಿ

ಸಾಲ ಪಡೆದು ಬ್ಯಾಂಕ್‌ಗೆ ವಂಚನೆ: ಇಡಿ ದಾಳಿ

ಅಂಡರ್‌ಪಾಸ್‌ ನಿರ್ವಹಣೆ ಯಾರೆಂಬುದೇ ಗೊತ್ತಿಲ್ಲ!

ಅಂಡರ್‌ಪಾಸ್‌ ನಿರ್ವಹಣೆ ಯಾರೆಂಬುದೇ ಗೊತ್ತಿಲ್ಲ!

ನಕಲಿ ದಾಖಲೆ ಸೃಷ್ಟಿಸಿ ಟ್ಯಾಕ್ಸಿ ಕಂಪನಿಗಳಿಗೆ ವಂಚನೆ 

ನಕಲಿ ದಾಖಲೆ ಸೃಷ್ಟಿಸಿ ಟ್ಯಾಕ್ಸಿ ಕಂಪನಿಗಳಿಗೆ ವಂಚನೆ 

ಬೆಂಗಳೂರು: ಮೀಸಲು ವಿಚಾರದಲ್ಲಿ ಕೇಂದ್ರಕ್ಕೆ ಒತ್ತಡ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಸಲು ವಿಚಾರದಲ್ಲಿ ಕೇಂದ್ರಕ್ಕೆ ಒತ್ತಡ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-sasdsadad

Vijayapura ಡಿಡಿಪಿಐ ಹುದ್ದೆಗೆ ಅಧಿಕಾರಿಗಳಿಬ್ಬರ ಕಿತ್ತಾಟ;ಪೊಲೀಸರ ಮಧ್ಯ ಪ್ರವೇಶ

1-swqqe

WTC Final ; 469ಕ್ಕೆ ಆಸೀಸ್ ಆಲೌಟ್ ಮಾಡಿದ ಟೀಮ್ ಇಂಡಿಯಾ

ಯೋಗ ಸ್ಟೋರ್ ತೆರೆದ ಅಮೆಜಾನ್ ಇಂಡಿಯಾ

ಯೋಗ ಸ್ಟೋರ್ ತೆರೆದ ಅಮೆಜಾನ್ ಇಂಡಿಯಾ

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ