ಸೇಲ್ಸ್ಮನ್ನ ಮನೆಗೆ ನುಗ್ಗಿ ದರೋಡೆ
Team Udayavani, Feb 6, 2018, 11:56 AM IST
ಬೆಂಗಳೂರು: ಮನೆಗೆ ನುಗ್ಗಿದ್ದ ದುಷ್ಕರ್ಮಿಗಳ ತಂಡವೊಂದು ಚಿನ್ನಾಭರಣ ಡೆಲವರಿ ಮಾಡುವ ಸೇಲ್ಸ್ಮನ್ ಕೈ-ಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಘಟನೆ ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಜ.24ರಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೆನ್ನೈನ ಕೇಸರ್ ಜ್ಯುವೆಲ್ಲರಿಯಲ್ಲಿ ಸೇಲ್ಸ್ಮನ್ ಆಗಿರುವ ನಗರದ ಸಂತೋಷ್ ಚೆನ್ನೈನಿಂದ ಚಿನ್ನಾಭರಣಗಳನ್ನು ತಂದು ನಗರದ ವಿವಿಧ ಮಳಿಗೆಗಳಿಗೆ ಪೂರೈಸುತ್ತಾರೆ. ಜ.22ರಂದು 2 ಕೆ.ಜಿ. ಚಿನ್ನಾಭರಣ ತಂದಿದ್ದು, ಒಂದೂವರೆ ಕೆ.ಜಿ ಚಿನ್ನಾಭರಣ ಸರಬರಾಜು ಮಾಡಿ 4.95 ಲಕ್ಷ ರೂ. ತಮ್ಮ ಬಳಿ ಇಟ್ಟುಕೊಂಡಿದ್ದರು.
ಜ.24ರಂದು ಬೆಳಗ್ಗೆ 9 ಗಂಟೆಗೆ ಮಹಿಳೆಯೊಬ್ಬರು ಸುಗಂಧ ದ್ರವ್ಯ ಮಾರಾಟ ನೆಪದಲ್ಲಿ ಸಂತೋಷ್ ಮನೆ ಬಂದಿದ್ದಾರೆ. ಇದೇ ವೇಳೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಏಕಾಏಕಿ ಸಂತೋಷ್ ಮೇಲೆ ದಾಳಿ ನಡೆಸಿ, ಕೈ-ಕಾಲು ಕಟ್ಟಿ, ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸಂತೋಷ್ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗಾಗಿ ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ