ಪೊಲೀಸರ ಸೋಗಿನಲ್ಲಿ ಬಂದು ಸುಲಿಗೆ


Team Udayavani, Feb 26, 2023, 4:12 PM IST

tdy-11

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಖಾಸಗಿ ಕಂಪನಿ ಉದ್ಯೋಗಿಯನ್ನು ಸುಲಿಗೆ ಮಾಡಿರುವ ಘಟನೆ ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ನಾಗವಾರಪಾಳ್ಯ ನಿವಾಸಿ ಧನಂಜಯ್‌ ನಾಯರ್‌ ಎಂಬುವರು ರಾಮಮೂರ್ತಿನಗರ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಧನಂಜಯ್‌ ನಾಯರ್‌ ಫೆ.22ರಂದು ಮುಂಜಾನೆ 5.45ರ ಸುಮಾರಿಗೆ ಬೆನ್ನಿಗಾನಹಳ್ಳಿಯ ಅಂಡರ್‌ ಪಾಸ್‌ನಲ್ಲಿ ಕಾರಿನಲ್ಲಿ ಸಿಗರೇಟ್‌ ಸೇದಿಕೊಂಡು ಹೋಗುತ್ತಿದ್ದರು.  ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ಕಾರು ಅಡ್ಡಗಟ್ಟಿದ್ದಾನೆ. ನಂತರ ತಾನೂ ಪೊಲೀಸ್‌, ಕಾರಿನಲ್ಲಿ ಸಿಗರೇಟ್‌ ಸೇದುವುದರಿಂದ ಜೈಲಿಗೆ ಕಳುಹಿಸುತ್ತೇನೆ ಎಂದು ಹೆದರಿಸಿದ್ದಾನೆ. ಕೆಲ ನಕಲಿ ಗುರುತಿನ ಚೀಟಿ ತೋರಿಸಿ ಕಾರಿನ ಬಾಗಿಲು ತೆರೆಯುವಂತೆ ಹೇಳಿ, ಒಳಗಡೆ ಕುಳಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಅಲ್ಲದೆ, ಧನಂಜಯ್‌ಗೆ ಕನ್ನಡ ಬರಲ್ಲ ಎಂದು ತಿಳಿಯುತ್ತಿದ್ದಂತೆ ಆರೋಪಿ, ತನ್ನ ಬಳಿ ಚಾಕು ಇದೆ. ತಾನೂ ಹೇಳಿದಂತೆ ಕೇಳಬೇಕು. ಇಲ್ಲವಾದಲ್ಲಿ ಚಾಕುವಿನಿಂದ ಇರಿಯುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಧನಂಜಯ್‌ ನಾಯರ್‌ನ ಫೋನ್‌, ವಾಲೆಟ್‌ಗಳನ್ನು ಕಸಿದುಕೊಂಡು, ಸಮೀಪದ ಎಟಿಎಂ ಕೇಂದ್ರಕ್ಕೆ ಕರೆದೊಯ್ದು ಕ್ರೆಡಿಟ್‌ ಕಾರ್ಡ್‌ ನಿಂದ 50 ಸಾವಿರ ರೂ., ಡೆಬಿಟ್‌ ಕಾರ್ಡ್‌ನಿಂದ 45 ಸಾವಿರ ರೂ. ಡ್ರಾ ಮಾಡಿಸಿಕೊಂಡಿದ್ದಾನೆ. ನಂತರ ತನ್ನ ಬೈಕ್‌ ನಿಲ್ಲಿಸಿದ್ದ ಜಾಗಕ್ಕೆ ಡ್ರಾಪ್‌ ಹಾಕಿಸಿಕೊಂಡು, ಧನಂಜಯ್‌ ಕುತ್ತಿಗೆಯಲ್ಲಿದ್ದ ಸುಮಾರು 29-30 ಗ್ರಾಂ ತೂಕದ ಎರಡು ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ಧನಂಜಯ್‌ ನಾಯರ್‌ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಘಟನಾ ಸ್ಥಳ ಮತ್ತು ಎಟಿಎಂ ಕೇಂದ್ರದ ಸಿಸಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ. ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.