ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಜತೆಗೆ ಬರಲಿದೆ ರೋಬೋಟ್‌!

ದೇಶದಲ್ಲೇ ರೋಬೋಟ್‌ ಸೇವೆ ನೀಡುವ ಮೊದಲ ನಿಲ್ದಾಣ ಕೆಐಎಎಲ್‌

Team Udayavani, Jun 8, 2022, 2:21 PM IST

ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಜತೆಗೆ ಬರಲಿದೆ ರೋಬೋಟ್‌!

ಬೆಂಗಳೂರು: ನೀವು ಏರಲಿರುವ ವಿಮಾನ ಎಷ್ಟೊತ್ತಿಗೆ ಹೊರಡಲಿದೆ? ಅಷ್ಟು ದೊಡ್ಡ ಟರ್ಮಿನಲ್‌ನಲ್ಲಿ ನೀವು ಪ್ರಯಾಣ ಬೆಳೆಸಲಿರುವ ವಿಮಾನ ಎಲ್ಲಿ ನಿಂತಿದೆ? ಅಲ್ಲಿಗೆ ಹೋಗುವುದಾದರೂ ಹೇಗೆ? ನಿಲ್ದಾಣದಲ್ಲಿ ತಿಂಡಿ ಎಲ್ಲಿ ಸಿಗುತ್ತದೆ? ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌)ಕ್ಕೆ ಆಗಮಿಸುವ ಪ್ರಯಾಣಿಕರಿಗೆ ಇಂತಹ ಹಲವಾರು ಮಾಹಿತಿ ಗಳನ್ನು ಇನ್ಮುಂದೆ ರೋಬೋಟ್‌ಗಳೇ ನೀಡಲಿವೆ.

ಅಷ್ಟೇ ಅಲ್ಲ, ಟರ್ಮಿನಲ್‌ನಲ್ಲಿ ನೀವು ತೆರಳಬೇಕಾದ ಜಾಗಕ್ಕೆ ಸ್ವತಃ ಈ ರೋಬೋಟ್‌ಗಳು ನಿಮ್ಮನ್ನು ಕರೆದೊಯ್ದು ಬಿಡುತ್ತವೆ! ಹೌದು, ಪ್ರಯಾಣಿಕರ ಅನುಕೂಲಕ್ಕಾಗಿ ಕೃತಕ ಬುದ್ಧಿಮತ್ತೆ ಆಧಾರಿತ 10 ಹೈಟೆಕ್‌ ರೋಬೋಟ್‌ಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್‌) ಪರಿಚಯಿಸಿದ್ದು, ಇವು ಅಲ್ಲಿನ ಸಿಬ್ಬಂದಿಯಂತೆಯೇ ನಿಲ್ದಾಣದ ತುಂಬಾ ಓಡಾಡಿಕೊಂಡು ಬಂದು- ಹೋಗುವ ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲಿವೆ. ದೇಶದ ವಿಮಾನ ನಿಲ್ದಾಣಗಳಲ್ಲಿ ಈ ರೀತಿಯ ತಂತ್ರಜ್ಞಾನಗಳನ್ನು ಪರಿಚಯಿಸುತ್ತಿರುವುದು ಇದೇ ಮೊದಲು ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಐಎಎಲ್‌, ಆರ್ಟಿಲಿಜೆಂಟ್‌ ಸಲ್ಯುಷನ್ಸ್‌ ಪ್ರೈ.ಲಿ., ಸಹಯೋಗದಲ್ಲಿ ರೋಬೋಟ್‌ಗಳನ್ನು ಅಳವಡಿಸಿದೆ. ಈ ಯಂತ್ರಗಳು ಪ್ರಯಾಣಿಕರಿಗೆ ಕನಿಷ್ಠ ಮಾಹಿತಿಗಳನ್ನು ಒದಗಿಸಲಿವೆ. ಉದಾಹರಣೆಗೆ ವಿಮಾನ ನಿರ್ಗಮನ- ಆಗಮನದ ಸಮಯ, ವಿಮಾನ ನಿಲುಗಡೆ ಸ್ಥಳ ಸೇರಿದಂತೆ ವಿವಿಧೆಡೆ ತೆರಳಲು ದಿಕ್ಕು ತೋರಿಸುವುದು, ಆಹಾರ ಮತ್ತು ಪಾನೀಯ ಮಾಹಿತಿಗಳನ್ನು ಒದಗಿಸಲಿದೆ. ಅಲ್ಲದೆ, ಈ ರೋಬೋಟ್‌ಗಳು ನೀವು ಬಯಸುವ ಸ್ಥಳಕ್ಕೆ ನಿಮ್ಮನ್ನು ಕರೆದೊಯ್ದು ಕೂಡ ಬಿಡಲಿವೆ.

ಸದ್ಯಕ್ಕೆ ಇಂಗ್ಲಿಷ್‌ನಲ್ಲಿ ಮಾರ್ಗದರ್ಶನ ಮಾಡುವ ಈ ಯಂತ್ರಗಳು, ಮುಂಬರುವ ದಿನಗಳಲ್ಲಿ ಕನ್ನಡದಲ್ಲೂ ನೀಡಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಯಾಣಿಕ ದೃಷ್ಟಿಯನ್ನು ಇಟ್ಟುಕೊಂಡು ಪರಿಚಯಿಸಲಾದ ಈ ಸ್ಮಾರ್ಟ್‌ ರೋಬೋಟ್‌ಗಳು ಅಸಾಧಾರಣ ಸೇವೆಗಳನ್ನು ನೀಡಲಿವೆ. ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಅಡತಡೆ ರಹಿತ ಸೇವೆಗೆ ಇದು ಟ್ರೆಂಡ್‌ಸೆಟರ್‌ ಆಗಲಿದೆ. –ಜಯರಾಜ್‌ ಷಣ್ಮುಗಂ, ಬಿಐಎಎಲ್‌ ಮುಖ್ಯ ಕಾರ್ಯಾಚರಣೆ ಅಧಿಕಾರಿ

ಜಾಗತಿಕ ಮಟ್ಟದಲ್ಲಿ ವಿಮಾನಯಾನ ಕ್ಷೇತ್ರ ದಲ್ಲಿ ಇದೊಂದು ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಲಿದೆ. ದೇಶದಲ್ಲಿ ವಿಮಾನ ನಿಲ್ದಾಣಗಳಲ್ಲಿ ರೋಬೋಟ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆ ನೀಡುತ್ತಿರುವ ಮೊದಲ ನಿಲ್ದಾಣ ಬೆಂಗಳೂರು ಏರ್‌ಪೋರ್ಟ್‌ ಆಗಿದೆ. -ರೂಪೇಶ್‌ ಸಾವಂತ್‌, ಆರ್ಟಿಲಿಜೆಂಟ್‌ ಸಲ್ಯುಷನ್ಸ್‌ ಪ್ರೈ.ಲಿ. ಸಿಇಒ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.