ಬೈಯಪ್ಪನಹಳ್ಳಿ ಸಂಪರ್ಕಕ್ಕೆ ರೋಟರಿ ಮೇಲ್ಸೇತುವೆ


Team Udayavani, Feb 27, 2023, 10:57 AM IST

TDY-2

ಬೆಂಗಳೂರು: ಬೈಯಪ್ಪನಹಳ್ಳಿಯ ಸರ್‌ ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್‌ಗೆ ಬರುವ ವಾಹನಗಳಿಗೆ ಎದುರಾಗುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ಇದೇ ಮೊದಲ ಬಾರಿ ನಗರದಲ್ಲಿ ರೋಟರಿ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿ 47 ಮೇಲ್ಸೇತುವೆಗಳಿದ್ದು, ಅವುಗಳೆಲ್ಲವೂ ಒಂದೇ ರೀತಿಯಿವೆ. ಆದರೆ, ಇದೇ ಮೊದಲ ಬಾರಿ ರೋಟರಿ ಮೇಲ್ಸೇತುವೆ (ಮಧ್ಯದಲ್ಲಿ ವೃತ್ತಾಕಾರದ ಮೇಲ್ಸೇತುವೆ) ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ. ಬೆಂಗಳೂರಿನಲ್ಲಿ ಉಪನಗರ ರೈಲು ಯೋಜನೆ ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್‌ ಸಂಸ್ಥೆಯ ಪ್ರಸ್ತಾವನೆಯಂತೆ ಬೈಯಪ್ಪನಹಳ್ಳಿಯ ಸರ್‌ ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್‌ಗೆ ವಾಹನಗಳು ಯಾವುದೇ ಸಂಚಾರ ದಟ್ಟಣೆ ಎದುರಿಸದಂತೆ ಸರಾಗವಾಗಿ ಓಡಾಡಲು ಐಒಸಿ ಜಂಕ್ಷನ್‌ ಬಳಿ ರೋಟರಿ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. ಅದರ ಜತೆಗೆ ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್‌ ಕ್ರಾಸಿಂಗ್‌ನಲ್ಲಿ 2 ಪಥದ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ.

ನಾಲ್ಕು ದಿನಗಳಿಂದ ಸಂಪರ್ಕ: ಸದ್ಯ ಬಿಬಿಎಂಪಿ ರೂಪಿಸುತ್ತಿರುವ ಯೋಜನೆ ನಾಲ್ಕು ದಿಕ್ಕು ಗಳಿಂದಲೂ ವಾಹನಗಳು ಸಂಚರಿಸುವಂತಹ ಮೇಲ್ಸೇತುವೆಯಾಗಿರಲಿದೆ. ಅದರಂತೆ ಪಶ್ಚಿಮದಿಂದ ಮಾರುತಿ ಸೇವಾನಗರ, ಪೂರ್ವದಲ್ಲಿ ಬಾಣಸವಾಡಿ, ಉತ್ತರದಲ್ಲಿ ಕಮ್ಮನಹಳ್ಳಿ ಮತ್ತು ದಕ್ಷಿಣದಲ್ಲಿ ಬೈಯಪ್ಪನಹಳ್ಳಿಗೆ ಸಂಪರ್ಕಿಸುವಂತೆ ಹಾಗೂ ಆ ಭಾಗದಿಂದ ಬರುವ ವಾಹನಗಳು ಮುಂದಕ್ಕೆ ಸಾಗುವಂತೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ.

ಹಾಲಿ ಮೇಲ್ಸೇತುವೆ ಕೆಡವಲು ನಿರ್ಧಾರ: ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವುದಕ್ಕೆ ಸದ್ಯ ಐಒಸಿ ಜಂಕ್ಷನ್‌ನಲ್ಲಿ 2 ಪಥದ ಮೇಲ್ಸೇತುವೆಯಿದೆ. ಇದರಿಂದ ವಾಹನ ದಟ್ಟಣೆ ನಿವಾರಣೆ ಹಾಗೂ ರೈಲ್ವೆ ನಿಲ್ದಾಣಕ್ಕೆ ಸಮರ್ಪಕವಾಗಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಾಲಿ ಇರುವ ಮೇಲ್ಸೇತುವೆಯನ್ನು ಕೆಡವಿ, ಹೊಸದಾಗಿ ರೋಟರಿ ಮೇಲ್ಸೇತುವೆ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ಪ್ರಸ್ತಾವನೆ ಸಿದ್ಧಪಡಿಸಿರುವ ಬಿಬಿಎಂಪಿ, ರಾಜ್ಯ ಸರ್ಕಾರಕ್ಕೆ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆಗೆ ಕೋರಲಾಗಿದೆ.

2021ಯೋಜನೆ: ರೋಟರಿ ಮೇಲ್ಸೇತುವೆ ಮತ್ತು 2 ಪಥದ ಆರ್‌ಒಬಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯಿಂದ 2021ರ ಸೆಪ್ಟೆಂಬರ್‌ನಲ್ಲಿಯೇ ಯೋಜನೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ವೇಳೆ ಯೋಜನಾ ವೆಚ್ಚವನ್ನು 250 ಕೋಟಿ ರೂ. ನಿಗದಿ ಮಾಡಲಾಗಿತ್ತು. ಆದರೆ, ರೈಲ್ವೆ ಇಲಾಖೆಯಿಂದ ನಿರಾಕ್ಷೇಪಣೆ ಪತ್ರ ನೀಡುವಲ್ಲಿ ವಿಳಂಬವಾದ ಕಾರಣ ಯೋಜನೆ ಅನುಷ್ಠಾನ ಸಾಧ್ಯವಾಗಿರಲಿಲ್ಲ. ಇದೀಗ ರೈಲ್ವೆ ಇಲಾಖೆ ನಿರಾಕ್ಷೇಪಣಾ ಪತ್ರ ನೀಡಿದೆ ಮತ್ತು ಯೋಜನೆಗೆ ಸಮ್ಮತಿಯನ್ನು ಸೂಚಿಸಿದೆ. ಹೀಗಾಗಿ ಇದೀಗ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸಲಾಗುತ್ತಿದೆ.

345 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ: ಮೇಲ್ಸೇತುವೆ ಮತ್ತು ಆರ್‌ಒಬಿ ನಿರ್ಮಾಣಕ್ಕೆ 345 ಕೋಟಿ ರೂ. ಯೋಜನಾ ವೆಚ್ಚವನ್ನು ನಿಗದಿ ಮಾಡಲಾಗಿದೆ. ಅದರಲ್ಲಿ ಮೇಲ್ಸೇತುವೆಗಳ ನಿರ್ಮಾಣಕ್ಕೆ 277 ಕೋಟಿ ರೂ. ವ್ಯಯಿಸಲಾಗುತ್ತದೆ. ಉಳಿದ 68 ಕೋಟಿ ರೂ. ಗಳನ್ನು ಕಮ್ಮನಹಳ್ಳಿ ಮುಖ್ಯರಸ್ತೆ, ಮಾರುತಿ ಸೇವಾನಗರ ಮತ್ತು ಬೈಯಪ್ಪನಹಳ್ಳಿ ಮುಖ್ಯರಸ್ತೆಯಲ್ಲಿ ಭೂಸ್ವಾಧೀನ ಮಾಡಿಕೊಳ್ಳಲು ಖರ್ಚು ಮಾಡಲಾಗುತ್ತದೆ.

ಪಾದಚಾರಿಗಳಿಗೆ ಕೆಳಸೇತುವೆ : ಮೇಲ್ಸೇತುವೆಗಳ ಜತೆಗೆ ಪಾದಚಾರಿಗಳ ಅನುಕೂಲಕ್ಕಾಗಿ ಕೆಳಸೇತುವೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗುತ್ತಿದೆ. ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್‌ನಿಂದ ಕಮ್ಮನಹಳ್ಳಿ ಕಡೆಗೆ ಪಾದಚಾರಿ ಕೆಳಸೇತುವೆ ನಿರ್ಮಿಸುವುದಕ್ಕೂ ಉದ್ದೇಶಿಸಲಾಗಿದೆ. ಈ ಕೆಳಸೇತುವೆ ರೈಲ್ವೆ ಹಳಿಗಳ ಕೆಳಭಾಗದಲ್ಲಿ ಸಾಗಲಿದ್ದು, ಆ ಬಗ್ಗೆಯೂ ಸಂಬಂಧಪಟ್ಟ ಇಲಾಖೆಗಳ ಜತೆಗೆ ಚರ್ಚಿಸಲಾಗುತ್ತಿದೆ.

ಪಾದಚಾರಿಗಳಿಗೆ ಕೆಳಸೇತುವೆ : ಮೇಲ್ಸೇತುವೆಗಳ ಜತೆಗೆ ಪಾದಚಾರಿಗಳ ಅನುಕೂಲಕ್ಕಾಗಿ ಕೆಳಸೇತುವೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗುತ್ತಿದೆ. ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್‌ನಿಂದ ಕಮ್ಮನಹಳ್ಳಿ ಕಡೆಗೆ ಪಾದಚಾರಿ ಕೆಳಸೇತುವೆ ನಿರ್ಮಿಸುವುದಕ್ಕೂ ಉದ್ದೇಶಿಸಲಾಗಿದೆ. ಈ ಕೆಳಸೇತುವೆ ರೈಲ್ವೆ ಹಳಿಗಳ ಕೆಳಭಾಗದಲ್ಲಿ ಸಾಗಲಿದ್ದು, ಆ ಬಗ್ಗೆಯೂ ಸಂಬಂಧಪಟ್ಟ ಇಲಾಖೆಗಳ ಜತೆಗೆ ಚರ್ಚಿಸಲಾಗುತ್ತಿದೆ.

ಪಾದಚಾರಿಗಳಿಗೆ ಕೆಳಸೇತುವೆ :  ಮೇಲ್ಸೇತುವೆಗಳ ಜತೆಗೆ ಪಾದಚಾರಿಗಳ ಅನುಕೂಲಕ್ಕಾಗಿ ಕೆಳಸೇತುವೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗುತ್ತಿದೆ. ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್‌ನಿಂದ ಕಮ್ಮನಹಳ್ಳಿ ಕಡೆಗೆ ಪಾದಚಾರಿ ಕೆಳಸೇತುವೆ ನಿರ್ಮಿಸುವುದಕ್ಕೂ ಉದ್ದೇಶಿಸಲಾಗಿದೆ. ಈ ಕೆಳಸೇತುವೆ ರೈಲ್ವೆ ಹಳಿಗಳ ಕೆಳಭಾಗದಲ್ಲಿ ಸಾಗಲಿದ್ದು, ಆ ಬಗ್ಗೆಯೂ ಸಂಬಂಧಪಟ್ಟ ಇಲಾಖೆಗಳ ಜತೆಗೆ ಚರ್ಚಿಸಲಾಗುತ್ತಿದೆ.

ಬೈಯಪ್ಪನಹಳ್ಳಿಯ ಸರ್‌ ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸುವ ರೋಟರಿಮೇಲ್ಸೇತುವೆ ನಿರ್ಮಿಸಲು ಅನುದಾನ ಮತ್ತು ಆಡಳಿತಾತ್ಮಕ ಅನುಮೋದನೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಸರ್ಕಾರದಿಂದ ಅನುಮೋದನೆ ದೊರೆತ ನಂತರ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು. – ರವೀಂದ್ರ ಬಿಬಿಎಂಪಿ ವಿಶೇಷ ಆಯುಕ್ತ

-ಗಿರೀಶ್‌ ಗರಗ 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.