ಕೊಲೆ, ದರೋಡೆಗೆ ಜೈಲಲ್ಲೇ ಪ್ಲಾನ್‌: ಮಂಗಳೂರಿನ ರೌಡಿ ಶೀಟರ್‌ಗಳ ಕರೆಸಿ ಕೊಲೆಗೆ ಸಂಚು!


Team Udayavani, Feb 25, 2021, 9:35 AM IST

ಕೊಲೆ, ದರೋಡೆಗೆ ಜೈಲಲ್ಲೇ ಪ್ಲಾನ್‌: ಮಂಗಳೂರಿನ ಇಬ್ಬರು ರೌಡಿ ಶೀಟರ್‌ಗಳ ಕರೆಸಿ ಕೊಲೆಗೆ ಸಂಚು

ಬೆಂಗಳೂರು: ದರೋಡೆ, ಸುಲಿಗೆ, ಡಕಾಯಿತಿ ಹಾಗೂ ಎದುರಾಳಿ ತಂಡದ ರೌಡಿಗಳ ಹತ್ಯೆಗಾಗಿ ಮಂಗಳೂರಿನಿಂದ ಬಂದಿದ್ದ ಇಬ್ಬರು ರೌಡಿಶೀಟರ್‌ ಸೇರಿ 20 ಮಂದಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.

ಈ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯ ಹಾರಿಜಾನ್‌ ರಸ್ತೆಯಲ್ಲಿ ಎರಡು ಕಾರುಗಳಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಕಾಡುಬೀಸನಹಳ್ಳಿ ಸೋಮ ಮತ್ತು ಆತನ ಸಹಚರರನ್ನು ಕೊಲೆಗೆ ಸಂಚು ರೂಪಿಸಿದ್ದ ರೌಡಿ ರೋಹಿತ್‌ನ 11 ಸಹಚರರನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಿರಣ್‌ ಗೌಡ(30), ವಿಶ್ವನಾಥ ಭಂಡಾರಿ (32), ಆನೇಕಲ್‌ನ ಹರೀಶ್‌ (27), ವೆಂಕಟೇಶ್‌ (27), ಸತೀಶ್‌ (27), ಹೇಮಂತ್‌ (28), ಗಣೇಶ್‌ (27), ವಿನೋದ್‌ (28), ಕಿರಣ್‌ ಕುಮಾರ್‌ (27) ಮತ್ತು ಅಣ್ಣಮಲೈ (29) ಬಂಧಿತರು. ಅವರಿಂದ 18 ಮಾರಕಾಸ್ತ್ರಗಳು ಮತ್ತು ಎರಡು ಕಾರುಗಳ ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧ ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಆರೋಪಿಗಳ ಪೈಕಿ ಕಿರಣ್‌ ಗೌಡ ಮತ್ತು ವಿಶ್ವನಾಥ್‌ ಭಂಡಾರಿ ಮಂಗಳೂರು ಮೂಲದ ರೌಡಿಶೀಟರ್‌ ಗಳಾಗಿದ್ದಾರೆ. ಅವರನ್ನು ಕಾಡು ಬೀಸನಹಳ್ಳಿ ನಿವಾಸಿ, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ರೌಡಿಶೀಟರ್‌ ರೋಹಿತ್‌, ತನ್ನ ಏರಿಯಾದಲ್ಲಿ ಹಿಡಿತ ಸಾಧಿಸಲು ಎದುರಾಳಿ ತಂಡದ ಸೋಮ ಮತ್ತು ಆತನ ಸಹಚರರನ್ನು ಹತ್ಯೆಗಾಗಿ 20 ದಿನಗಳ ಹಿಂದೆಯೇ ಕರೆಯಿಸಿಕೊಂಡಿದ್ದು, ಕರಿಯಮ್ಮನ ಅಗ್ರಹಾರದಲ್ಲಿ ಇರಿಸಿದ್ದ. ಸೋಮ ಮತ್ತು ಆತನ ಚಲನವಲನಗಳ ಮೇಲೆ ನಿಗಾವಹಿಸಿ ಕೊಲೆಗೆ ಸಂಚು ರೂಪಿಸಿದ್ದರು. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮಂಗಳೂರಿನಲ್ಲೂ ಕೇಸು: ಕಿರಣ್‌ ಗೌಡ ವಿರುದ್ಧ ಮಂಗಳೂರು ಉತ್ತರ ಪೊಲೀಸ್‌ ಠಾಣೆಯ ರೌಡಿಶೀಟರ್‌ ಆಗಿದ್ದಾನೆ. ವಿಶ್ವನಾಥ್‌ ಭಂಡಾರಿ ವಿರುದ್ಧ ಮಂಗಳೂರಿನ ಉಲ್ಲಾಳ ಪೊಲೀಸ್‌ ಠಾಣೆ ರೌಡಿ ಶೀಟರ್‌ ಆಗಿದ್ದು, ಇಬ್ಬರು ಮಂಗಳೂರು ಮೂಲದ ರೌಡಿಯೊಬ್ಬನ ಸಹಚರರಾಗಿದ್ದಾರೆ. ಇಬ್ಬರ ವಿರುದ್ಧ ಮಂಗಳೂರಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ ಸೇರಿ 12ಕ್ಕೂ ಅಧಿಕ ಪ್ರಕರಣಗಳು ಇವೆ. ರೌಡಿ ರೋಹಿತ್‌, ಮಂಗಳೂರು ಮೂಲದ ರೌಡಿ ಶೀಟರ್ ವೊಬ್ಬನಿಗೆ ಹಣ ಕೊಟ್ಟು ಈ ಇಬ್ಬರು ಆರೋಪಿಗಳನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?  

ಗಲಭೆಕೋರನಿಂದ ಪ್ಲಾನ್‌: 2020 ಆಗಸ್ಟ್‌ 11ರಂದು ನಡೆದ ಡಿ.ಜೆ. ಹಳ್ಳಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ರೌಡಿಶೀಟರ್‌ ಜಲಾಲ್‌ನಿಂದ ಇಬ್ಬರ ಹತ್ಯೆಗೆ ಸುಪಾರಿ ಪಡೆದುಕೊಂಡಿದ್ದ ರೌಡಿಶೀಟರ್‌ ಸೇರಿ ಐವರನ್ನು ಸಿಸಿಬಿ ಪೊಲೀ ಸರು ಬಂಧಿಸಿದ್ದಾರೆ. ಡಿ.ಜೆ. ಹಳ್ಳಿಯ ರೌಡಿಶೀಟರ್‌ ಮಜರ್‌ ಖಾನ್‌ (38), ಯೋಗೇಶ್‌ (38), ರಿಜ್ವಾನ್‌ (26), ಸಮಿತ್‌ (28) ಮತ್ತು ಪುನಿತ್‌ (30) ಬಂಧಿತರು. ಅವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಡಿ.ಜೆ.ಹಳ್ಳಿಯ ರೌಡಿಶೀಟರ್‌ ಆಗಿರುವ ಮಜರ್‌ಖಾನ್‌ ವಿರುದ್ಧ ಎರಡು ಕೊಲೆ, 2 ಕೊಲೆ ಯತ್ನ, 2 ಹಲ್ಲೆ, 6 ಕಳ್ಳಭಟ್ಟಿ, ಒಂದು ದರೋಡೆ, ದರೋಡೆ ಯತ್ನ ಸೇರಿ 13 ಪ್ರಕರಣಗಳು ಇವೆ. ಸುಮಿತ್‌ ಅಲಿಯಾಸ್‌ ರಾಹುಲ್‌ ವಿರುದ್ಧ ಉಡುಪಿಯ ಮಂಚಕಲ್‌ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿದೆ.

ಡಿ.ಜೆ. ಹಳ್ಳಿ ಗಲಭೆ ಪ್ರಕರದಲ್ಲಿ ಜೈಲಿನಲ್ಲಿರುವ ಜಲಾಲ್‌, ತನ್ನ ಸ್ನೇಹಿತ ಲೋಕೇಶ್‌ ಎಂಬಾತನಿಗೆ ತೊಂದರೆ ಕೊಡುತ್ತಿರುವ ಇಬ್ಬರ ಹತ್ಯೆಗೈಯುವಂತೆ ಮಜರ್‌ ಖಾನ್‌ಗೆ ಸುಪಾರಿ ಕೊಟ್ಟಿದ್ದಾನೆ. ಅದರಂತೆ ಆರೋಪಿ ತನ್ನ ಸಹಚರರ ಜತೆ ಸೇರಿಕೊಂಡು ಡಿ.ಜೆ. ಹಳ್ಳಿಯ ಮೋದಿ ಗಾರ್ಡನ್‌ ಸಮೀಪದ ಮಡ್‌ ರಸ್ತೆಯಲ್ಲಿ ಹತ್ಯೆಗೆ ಸಂಚು ರೂಪಿಸಿದ್ದರು. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ದೇವರ ಜೀವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.