ರೌಡಿ ಸ್ಟೀವನ್‌ ರಾಜ್‌ ಕೊಲೆಗೆ ಪತ್ನಿ ಸಂಚು


Team Udayavani, Jun 6, 2019, 3:05 AM IST

rowdy-st

ಬೆಂಗಳೂರು: ರೌಡಿಶೀಟರ್‌ ಸ್ಟೀವನ್‌ ರಾಜ್‌ ಕೊಲೆ ಪ್ರಕರಣದ ರಹಸ್ಯ ಭೇದಿಸಿರುವ ಕೆ.ಜಿ ಹಳ್ಳಿ ಠಾಣೆ ಪೊಲೀಸರು, ಸ್ವೀವನ್‌ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ಟೀವನ್‌ ಪತ್ನಿ ರಂಜನಿ (24), ಕಿರಣ್‌ಕುಮಾರ್‌, ಮಹೇಂದ್ರನ್‌ ಬಂಧಿತರು. ಕಿರಣ್‌ ಕುಮಾರ್‌ ಹಾಗೂ ಮಹೇಂದ್ರನ್‌ ಒಳಸಂಚು ರೂಪಿಸಿ ಮೇ 30ರಂದು ರಾತ್ರಿ ಸ್ವೀವನ್‌ರಾಜ್‌ನನ್ನು ಕೊಲೆಗೈದಿದ್ದರು. ಪತಿ ಸ್ಟೀವನ್‌ ರಾಜ್‌ ಕೊಲೆ ಮಾಡಲು ಆರೋಪಿಗಳಿಬ್ಬರಿಗೂ ರಂಜಿತಾ ಕುಮ್ಮಕ್ಕು ನೀಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿಶೀಟರ್‌ ಆಗಿದ್ದ ಪತಿ ಸ್ವೀವನ್‌ ಗಾಂಜಾ ಸೇವಿಸುತ್ತಿದ್ದ ವಿನಾಕಾರಣ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ. ಜತೆಗೆ, ಸಹೋದರನ ಜತೆ ಹಲವು ಬಾರಿ ಜಗಳ ಮಾಡಿ ಕೊಲೆಮಾಡಲು ಯತ್ನಿಸಿದ್ದ. ಹೀಗಾಗಿ ಕೊಲೆ ಮಾಡುವ ಸಂಚು ರೂಪಿಸಲಾಗಿತ್ತು ಎಂದು ಆರೋಪಿ ರಂಜಿನಿ ವಿಚಾರಣೆ ವೇಳೆ ತಿಳಿಸಿದ್ದಾಳೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಕೆಲ ವರ್ಷಗಳಿಂದ ಸ್ವೀವನ್‌ ರಾಜ್‌ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ಚೆನೈನಲ್ಲಿ ನೆಲೆಸಿದ್ದ. ಒಂದು ತಿಂಗಳ ಹಿಂದೆ ಹಿದಾಯತ್‌ ನಗರದಲ್ಲಿರುವ ಪೋಷಕರ ಮನೆಗೆ ರಂಜಿತಾ ಆಗಮಿಸಿದ್ದಳು. ಈ ವೇಳೆ ಒಮ್ಮೆ ಆಗಮಿಸಿದ್ದ ಸ್ವೀವನ್‌ ರಂಜಿತಾ ಮತ್ತೂಬ್ಬ ಯುವಕನ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ವಿಚಾರ ಕುರಿತು ಜಗಳವಾಡಿದ್ದ ಎನ್ನಲಾಗಿದೆ.

ಹಳೇ ವೈಷಮ್ಯ: ಸ್ವೀವನ್‌ ಕೊಲೆ ಮಾಡಲು ನಿರ್ಧರಿಸಿದ್ದ ರಂಜಿತಾ ಸ್ಟೀವನ್‌ ಸ್ನೇಹಿತರಾದ ಕಿರಣ್‌ಕುಮಾರ್‌, ಸ್ವೀವನ್‌ ಮೇಲೆ ಹಳೆಯ ವೈಷಮ್ಯ ಹೊಂದಿದ್ದ ಮಹೇಂದ್ರನ್‌ ಸಹಾಯ ಕೇಳಿದ್ದು, ಅವರೂ ಒಪ್ಪಿಕೊಂಡಿದ್ದರು.ಅದರಂತೆ ಮೇ 30ರಂದು ಬೆಳಗ್ಗೆ ನಗರಕ್ಕೆ ಆಗಮಿಸಿದ್ದ ಸ್ವೀವನ್‌ನನ್ನು ಪುಸಲಾಯಿಸಿದ್ದ ಮಹೇಂದ್ರನ್‌ ಹಾಗೂ ಕಿರಣ್‌ಕುಮಾರ್‌ ಜತೆಗೆ ಕರೆದುಕೊಂಡಿದ್ದರು.

ರಾತ್ರಿ ಮದ್ಯ ಸೇವಿಸಲು ಕರೆದೊಯ್ದಿದ್ದ ಆರೋಪಿಗಳಿಬ್ಬರೂ ಕಂಠಪೂರ್ತಿ ಮದ್ಯ ಕುಡಿಸಿದ್ದರು. ಬಳಿಕ ಮಧ್ಯರಾತ್ರಿ ಸುಮಾರಿಗೆ ಬಾಣಸವಾಡಿಯ 80 ಅಡಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಹಲ್ಲೆಗೈದು ಮೃತದೇಹವನ್ನು ಆಟೋದಲ್ಲಿ ಸಾಗಿಸಿ ಹಿದಾಯತ್‌ ನಗರದ ನಾಲ್ಕನೇ ಕ್ರಾಸ್‌ನಲ್ಲಿ ಬಿಟ್ಟು ಪರಾರಿಯಾಗಿದ್ದರು.

ಬುಧವಾರ ತಡರಾತ್ರಿ 4 ಗಂಟೆ ಸುಮಾರಿಗೆ ಅಪರಿಚಿತರು ಪತ್ನಿ ರಂಜಿತಾ ಮನೆಯ ಬಾಗಿಲು ಬಡಿದಿದ್ದಾರೆ. ಕೂಡಲೇ ಅವರು ತೆರೆದಿಲ್ಲ. ಇದಾದ ಕೆಲ ಸಮಯದ ಬಳಿಕ ರಂಜಿತಾ ಹಾಗೂ ಆಕೆಯ ಸಂಬಂಧಿಕರು ಮನೆಯ ಬಾಗಿಲು ತೆರೆದು ಮನೆಯ ಮುಂಭಾಗದ ಕ್ರಾಸ್‌ನಲ್ಲಿದ್ದ ಆಟೋ ಗಮನಿಸಿದಾಗ ಆಟೋದಲ್ಲಿ ಕೊಲೆಯಾಗಿರುವ ಸ್ಟೀವನ್‌ ರಾಜ್‌ ಮೃತದೇಹ ಕಂಡು ಬಂದಿದೆ ಎಂದು ಪೊಲೀಸರಿಗೆ ತಿಳಿಸಿದರು. ಆದರೆ, ಪತಿಯ ಕೊಲೆಯ ಬಗ್ಗೆ ರಂಜಿತಾಳಿಗೆ ಮೊದಲೇ ಗೊತ್ತಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

“ಠಾಣೆಯಲ್ಲಿ ಹೈಡ್ರಾಮ ಬಂಧನ’: ಸ್ವೀವನ್‌ ರಾಜ್‌ ಕೊಲೆಯಾದ ಬಳಿಕ ತನಗೆ ಏನೂ ಗೊತ್ತಿಲ್ಲ ಎಂಬಂತೆ ರಂಜಿತಾ ನಟಿಸುತ್ತಿದ್ದಳು. ಪತಿಯ ಮೃತದೇಹ ಕಂಡ ಕೂಡಲೇ ತಲೆಸುತ್ತಿ ಬಿದ್ದಿದ್ದಳು. ಪತಿಯ ಕೊಲೆಯ ಬಗ್ಗೆ ಆಕೆಯೇ ದೂರು ನೀಡಲು ಮುಂದಾಗಿದ್ದಳು. ಆದರೆ, ಆಕೆಯ ಬಗ್ಗೆಯೂ ಅನುಮಾನವಿದ್ದದ್ದರಿಂದ ಸ್ವೀವನ್‌ ಸಹೋದರನಿಂದ ದೂರು ತೆಗೆದುಕೊಂಡು ತನಿಖೆ ಚುರುಕುಗೊಳಿಸಿದಾಗ ಆರೋಪಿಗಳಾದ ಕಿರಣ್‌ ಜತೆ ರಂಜಿತಾ ಹಲವು ಬಾರಿ ದೂರವಾಣಿ ಸಂಭಾಷಣೆ ನಡೆಸಿರುವ ಬಗ್ಗೆ ಸುಳಿವು ಸಿಕ್ಕಿತ್ತು.

ಮತ್ತೂಂದೆಡೆ ಕೊಲೆ ನಡೆದ ಮಾರನೇ ದಿನದಿಂದಲೇ ಠಾಣೆಗೆ ಬರಲು ಆರಂಭಿಸಿದ ರಂಜಿತಾ ಆರೋಪಿಗಳು ಯಾರು? ಯಾವಗ ಬಂಧಿಸುತ್ತೀರಿ ಎಂದು ಪದೇ ಪದೆ ಕೇಳಲಾರಂಭಿಸಿದಳು. ಅವಳ ಸ್ವಭಾವದಲ್ಲಿಯೂ ಸಾಕಷ್ಟು ಬದಲಾವಣೆ ಆಗಿದ್ದರಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತಿ ಸ್ಟೀವನ್‌ ಕೊಲೆ ರಹಸ್ಯ ಬಾಯ್ಬಿಟ್ಟಳು ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.