ಪರಾರಿಯಾಗಲೆತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡು
Team Udayavani, Mar 6, 2019, 6:20 AM IST
ಬೆಂಗಳೂರು: ರೌಡಿ ಪ್ರಶಾಂತ್ಕುಮಾರ್ ಕೊಲೆ ಪ್ರಕರಣದ ಆರೋಪಿ ಲೋಕೇಶ್ ಕಾಲಿಗೆ ಗುಂಡೇಟು ಹೊಡೆದು ಮಾರತ್ಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಲೋಕೇಶ್ ಪರಾರಿಯಾಗಲು ಯತ್ನಿಸಿದ ವೇಳೆ ಪ್ರಾಣರಕ್ಷಣೆ ಸಲುವಾಗಿ ಗುಂಡು ಹೊಡೆದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಶಾಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಹಾಗೂ ಮಾರತ್ಹಳ್ಳಿ ಠಾಣೆಯ ಎರಡು ವಿಶೇಷ ತಂಡಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಲೋಕೇಶ್ ಸೇರಿ 12ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ. ಫೆ.27ರಂದು ರಾತ್ರಿ ಹಳೆ ವೈಷಮ್ಯಕ್ಕೆ ಹೊರಮಾವು ಜಂಕ್ಷನ್ ಸಮೀಪ ರೌಡಿ ಪ್ರಶಾಂತ್ಕುಮಾರ್ನ್ನು ಲೋಕೇಶ್ ಹಾಗೂ ಆತನ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದರು.
ಆರೋಪಿಗಳ ಬಂಧನಕ್ಕೆ ಸಹಕಾರ ನೀಡುವಂತೆ ಪೂರ್ವವಿಭಾಗದ ಡಿಸಿಪಿ ರಾಹುಲ್ಕುಮಾರ್ ಶಹಾಪುರವಾಡ್ ಕೋರಿದ್ದರು. ಈ ಹಿನ್ನೆಲೆಯಲ್ಲಿ ಮಾರತ್ಹಳ್ಳಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ರಚಿಸಿದ್ದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ತಮಿಳುನಾಡಿನಿಂದ ಸೋಮವಾರ ರಾತ್ರಿ ಲೋಕೇಶ್ ಸೇರಿದಂತೆ 9 ಮಂದಿಯನ್ನು ಬಂಧಿಸಿ ಕರೆತಂದಿತ್ತು.
ವಿಚಾರಣೆ ವೇಳೆ ಪ್ರಕರಣದ ಪ್ರಮುಖ ಆರೋಪಿ ಶಿವರಾಜ್ ಇರುವ ಸ್ಥಳವನ್ನು ತೋರಿಸುವುದಾಗಿ ಲೋಕೇಶ್ ತಿಳಿಸಿದ್ದ. ಹೀಗಾಗಿ ಮಂಗಳವಾರ ಮಧ್ಯಾಹ್ನ 3.15ರ ಸುಮಾರಿಗೆ ಇನ್ಸ್ಪೆಕ್ಟರ್ ಗಿರೀಶ್ ನೇತೃತ್ವದ ತಂಡ ಲೋಕೇಶ್ನನ್ನು ಬೆಳ್ಳಂದೂರು ಸಮೀಪ ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಜತೆಗೆ ಹಿಡಿಯಲು ಹೋದ ಮುಖ್ಯ ಪೇದೆ ರವಿಶಂಕರ್ ಕೈಗೆ ಕಲ್ಲಿನಿಂದ ಹೊಡೆದಿದ್ದಾನೆ.
ಶರಣಾಗುವಂತೆ ಸೂಚಿಸಿದರೂ ಒಪ್ಪದೆ ಹಲ್ಲೆ ಮುಂದುವರಿಸಿದ್ದ. ಈ ಸಂದರ್ಭಧಲ್ಲಿ ಇನ್ಸ್ಪೆಕ್ಟರ್ ಗಿರೀಶ್ ಪ್ರಾಣರಕ್ಷಣೆಗಾಗಿ, ಲೋಕೇಶ್ ಎಡಕಾಲಿಗೆ ಗುಂಡು ಹೊಡೆದಿದ್ದಾರೆ. ಗುಂಡೇಟಿನಿಂದ ಕುಸಿದು ಬಿದ್ದ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.
ವಿನಯ್ ಕಿಡ್ನಾಪ್ ಕೇಸ್ನ ಆರೋಪಿ ಪ್ರಶಾಂತ್!: ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪ್ರಶಾಂತ್ ಕುಮಾರ್ 2017ರಲ್ಲಿ ಶಾಸಕ ಕೆ.ಎಸ್ ಈಶ್ವರಪ್ಪ ಅವರ ಮಾಜಿ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದ. ಈ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಶಾಂತ್ ಜಾಮೀನಿನ ಆಧಾರದಲ್ಲಿ ಬಿಡುಗಡೆಗೊಂಡಿದ್ದ.
ಸಹೋದರನ ಕೊಲೆ ಕೇಸ್ಗಾಗಿ ಹತ್ಯೆ!: ಕೊಲೆಯಾದ ಪ್ರಶಾಂತ್ ಅಣ್ಣ ವಿನೋದ್ಕುಮಾರ್ನನ್ನು ಕೊಲೆಗೈದ ಆರೋಪ ಪ್ರಕರಣದಲ್ಲಿ ಶಿವರಾಜ್ ಮತ್ತಿತರರು ಭಾಗಿಯಾಗಿರುವ ಆರೋಪಿಗಳಾಗಿದ್ದಾರೆ. ಹೀಗಾಗಿ, ಕೇಸ್ ವಾಪಾಸ್ ತೆಗೆದುಕೊಳ್ಳಲು ಹಲವು ಬಾರಿ ಪ್ರಶಾಂತ್ಗೆ ಸೂಚಿಸಿದರೂ ಕೇಳಿರಲಿಲ್ಲ. ಇದೇ ಕಾರಣಕ್ಕೆ ಪ್ರಶಾಂತ್ನನ್ನು ಕೊಲೆಮಾಡಿರುವ ಸಾಧ್ಯತೆಯಿದೆ. ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಶಾಂತ್ ಕೊಲೆಪ್ರಕರಣದ ಆರೋಪಿಗಳಾದ ಲೋಕೇಶ್ ಸೇರಿ 12 ಮಂದಿಯನ್ನು ಬಂಧಿಸಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ಬಾಣಸವಾಡಿ ಪೊಲೀಸರಿಗೆ ಒಪ್ಪಿಸಲಾಗುತ್ತದೆ.
-ಅಬ್ದುಲ್ ಅಹದ್, ಡಿಸಿಪಿ ವೈಟ್ಫೀಲ್ಡ್ ವಿಭಾಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ