ಸಿಎಂ ಪರಿಹಾರ ನಿಧಿಗೆ 15 ಲಕ್ಷ ರೂ. ದೇಣಿಗೆ
Team Udayavani, Jan 11, 2019, 6:40 AM IST
ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪನಿ (ಕೆಐಒಸಿಎಲ್) ಲಿಮಿಟೆಡ್ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 15 ಲಕ್ಷ ರೂ. ದೇಣಿಗೆ ನೀಡಿದೆ.
ಪರಿಹಾರದ ಚೆಕ್ಕನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೆಐಒಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಎಂ.ವಿ.ಸುಬ್ಬರಾವ್, ಹಣಕಾಸು ನಿರ್ದೇಶಕ ಎಸ್.ಕೆ.ಗೋರೈ ಹಾಗೂ ಹಿರಿಯ ಅಧಿಕಾರಿಗಳು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಎಂ.ವಿ.ಸುಬ್ಬರಾವ್ ಅವರು ಮಾತನಾಡಿ, ಕೆಐಒಸಿಎಲ್ ವತಿಯಿಂದ ರಾಯಚೂರು ಜಿಲ್ಲೆಯ 30 ಸರ್ಕಾರಿ ಶಾಲೆಗಳಿಗೆ ಸೋಲಾರ್ ಬೇಸ್ಡ್ ಸ್ಮಾರ್ಟ್ ಕ್ಲಾಸಸ್ ಆಗಿ ಪರಿವರ್ತಿಸಲಾಗಿದೆ. ಇದಕ್ಕಾಗಿ 15 ಲಕ್ಷ ರೂ. ಖರ್ಚು ಮಾಡಿ ಅಭಿವೃದ್ಧಿಪಡಿಸಲಾಗಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿ ಸಿಎಸ್ಆರ್ ಚಟುವಟಿಕೆಗಳಿಗಾಗಿ 25ರಿಂದ 30 ಲಕ್ಷ ರೂ. ಖರ್ಚು ಮಾಡಲಿದೆ ಎಂದರು. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೆಐಒಸಿಎಲ್ ವ್ಯವಸ್ಥಾಪಕ ಮಂಡಳಿ ಸಿಎಸ್ಆರ್ ಚಟುವಟಿಕೆಯಡಿ ಹಾಕಿಕೊಂಡಿರುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ