![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪಿಐಎಲ್ ಸಲ್ಲಿಸಿದ ಶಿಕ್ಷಕಗೆ 20 ಸಾವಿರ ರೂ. ದಂಡ!
Team Udayavani, Jul 7, 2018, 2:15 PM IST
![highcourt3.jpg](https://www.udayavani.com/wp-content/uploads/2018/07/7/highcourt3.jpg)
ಬೆಂಗಳೂರು: ಸಾಮಾಜಿಕ ಸಮಸ್ಯೆಗಳ ನೈಜ ಕಾಳಜಿ ಇಲ್ಲದ ಸಾರ್ವಜಿಕ ಹಿತಾಸಕ್ತಿ ಅರ್ಜಿಗಳ ಸಲ್ಲಿಕೆಯಿಂದ ಹೈಕೋರ್ಟ್ನ ಅಮೂಲ್ಯ ಸಮಯ ಹಾಳಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನವ್ಯಕ್ತಪಡಿಸಿದೆ.
ಇತ್ತೀಚೆಗೆ ಅರ್ಜಿಗಳ ವಿಚಾರಣೆ ವೇಳೆಯೇ ಹಲವು ಬಾರಿ ಅನಗತ್ಯ ಪಿಐಎಲ್ಗಳನ್ನು ಸಲ್ಲಿಸಿದ ಅರ್ಜಿದಾರರಿಗೆ ಹಲವು ಬಾರಿ ತರಾಟೆ ತೆಗೆದುಕೊಂಡಿದ್ದ ನ್ಯಾಯ ಪೀಠ, ಪಿಐಎಲ್ಗಳು ಸಮಾಜದ ದುರ್ಬಲ ವರ್ಗಕ್ಕೆ ನೆರವು, ಸಮಾಜವನ್ನು ಕಾಡುತ್ತಿರುವ ನೈಜ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವಂತಿರಬೇಕು ಎಂದೂ ಸಲಹೆ ನೀಡಿದೆ.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಹುದ್ದೆ ಅಸಂವಿಧಾನಿಕ ಎಂದು ಘೋಷಿಸುವಂತೆ ಪಿಐಎಲ್ ಪ್ರೊ.ಶೇಖರ್ ಅಯ್ಯರ್ ಎಂಬುವವರಿಗೆ 10 ಸಾವಿರ ರೂ. ದಂಡ ವಿಧಿಸಿದ್ದ ಮುಖ್ಯ ನ್ಯಾಯಮೂರ್ತಿಗಳ ಪೀಠ, ಇದೀಗ ಮತ್ತೂಂದು ಪ್ರಕರಣದಲ್ಲಿ ಕೋರ್ಟ್ ಸಮಯ ವ್ಯರ್ಥ ಮಾಡಿದ ಶಿಕ್ಷಕನಿಗೆ 20 ಸಾವಿರ ರೂ. ದಂಡವಿಧಿಸುವ ಮೂಲಕ ಬಿಸಿಮುಟ್ಟಿಸಿದೆ.
ಸಿಖ್ ಧರ್ಮಕ್ಕೆ ಸಂಬಧಿಸಿದ ವಿಚಾರಗಳನ್ನು ಶಾಲಾ ಪಠ್ಯಗಳಲ್ಲಿ ಅಳವಡಿಸುವಂತೆ ರಾಜ್ಯ ಶಿಕ್ಷಣ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ವಿಜಯಪುರ ಜಿಲ್ಲೆ ಇಂಡಿ ಮೂಲದ ಪುಂಡಿತ್ರಾವ್ ಧರೇಣ್ಣವರ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ವಿಭಾಗೀಯ ಪೀಠ, ಅವರಿಗೆ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಅರ್ಜಿದಾರರು ಮುಂದಿನ 1 ತಿಂಗಳಲ್ಲಿ ದಂಡದ ಮೊತ್ತವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಳಿ ಪಾವತಿಸಬೇಕು. ಒಂದು ವೇಳೆ ಅರ್ಜಿದಾರ ದಂಡ ಪಾವತಿಸದಿದ್ದರೆ ಜಿಲ್ಲಾಧಿಕಾರಿಗಳು ಆತನ ಬಳಿ ದಂಡ ವಸೂಲಿ ಮಾಡಬೇಕು. ಬಳಿಕ ಆ ಮೊತ್ತವನ್ನು ರಾಜ್ಯ ಕಾನೂನು ಸೇವಾಪ್ರಾಧಿಕಾರಕ್ಕೆ ನೀಡಬೇಕು ಎಂದು ಆದೇಶಿಸಿದೆ.
ಚಂಡೀಗಡ ಕಾಲೇಜೊಂದರಲ್ಲಿ ಪ್ರೊಫೆಸರ್ ಎಂದು ಅರ್ಜಿಯಲ್ಲಿ ಹೇಳಿಕೊಂಡಿರುವ ಪುಂಡಿತ್ರಾವ್ ಧರೇಣ್ಣವರ್, ಸಿಖ್ ಧರ್ಮದ ಇತಿಹಾಸ, ಸಂಸ್ಕೃತಿ ಸಾರುವಂತಹ ವಿಚಾರಗಳನ್ನು ರಾಜ್ಯ ಪ್ರಾಥಮಿಕ ಶಾಲಾ ಪಠ್ಯಗಳಲ್ಲಿ ಅಳವಡಿಸಬೇಕು.
ಬಹುಮುಖ್ಯವಾಗಿ ರಾಜ್ಯದವರೇ ಆದ ಬಾಹಿಸಾಹೇಬ್ ಸಿಂಗ್, ಮೈ ಭಾಗೋ ವೋಸೆ ಅವರ ಜೀವನ ವಿಚಾರಳನ್ನು ಒಳಗೊಂಡಿರಬೇಕು.ಬೀದರ್ನಲ್ಲಿ ಸಿಖ್ ವಿಶ್ವವಿದ್ಯಾಲಯ ಸ್ಥಾಪಿಸಿ ಬಾಹೀ ಸಾಹೀಬ್ ಸಿಂಗ್ ಹೆಸರಿನಲ್ಲಿರಬೇಕು. ಪಂಜಾಬಿ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.