![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಮೆಡಿಕಲ್ ಸೀಟು ನೆಪದಲ್ಲಿ 21.50 ಲಕ್ಷ ರೂ. ವಂಚನೆ
Team Udayavani, Aug 20, 2018, 12:41 PM IST
![medical-sea.jpg](https://www.udayavani.com/wp-content/uploads/2018/08/20/medical-sea.jpg)
ಬೆಂಗಳೂರು: ನಗರದ ಕೆಂಪೇಗೌಡ ಮೆಡಿಕಲ್ ಕಾಲೇಜಿನಲ್ಲಿ (ಕಿಮ್ಸ್) ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ, ಹರ್ಯಾಣ ಮೂಲದ ವ್ಯಕ್ತಿ ಒಬ್ಬರಿಂದ 21.50 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮಗನಿಗೆ ಮೆಡಿಕಲ್ ಸೀಟು ಸಿಗುತ್ತದೆ ಎಂಬ ಆಸೆಯಿಂದ ಹಣ ಕೊಟ್ಟು ವಂಚನೆಗೊಳಗಾದ ಕ್ರಿಶನ್ ಪಾಲ್ ಎಂಬುವರು ವಿಷನ್ ಎಂಟರ್ಪ್ರೈಸಸ್ ಹೆಸರಿನ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ದೆಹಲಿ ಮೂಲದ ವಿಷನ್ ಎಂಟರ್ಪ್ರೈಸಸ್ನ ಸಿಬ್ಬಂದಿ ಭೂಪೇಂದ್ರ ಸಿಂಗ್, ರಾಹುಲ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಹರ್ಯಾಣದ ಕರ್ನಾಲ್ ನಿವಾಸಿಯಾಗಿರುವ ಉದ್ಯಮಿ ಕ್ರಿಶನ್ ಪಾಲ್ಗೆ ಕೆಲ ದಿನಗಳ ಹಿಂದೆ ದೂರವಾಣಿ ಕರೆ ಮಾಡಿದ್ದ ಭೂಪೇಂದ್ರ ಸಿಂಗ್, ನಿಮ್ಮ ಮಗ ಆದಿತ್ಯ ಚೌಹಾಣ್ಗೆ ಬೆಂಗಳೂರಿನ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಕೊಡಿಸುತ್ತೇವೆ. ಹೀಗಾಗಿ ದಾಖಲೆಗಳನ್ನು ಮೇಲ್ ಮಾಡಿ ಎಂದು ಹೇಳಿ ದಾಖಲೆಗಳನ್ನು ತರಿಸಿಕೊಂಡಿದ್ದ. ಬಳಿಕ ಆದಿತ್ಯ ಚೌಹಾಣ್ ಪಿಯುಸಿ ಹಾಗೂ ನೀಟ್ನಲ್ಲಿ ಉತ್ತಮ ಅಂಕ ಪಡೆದಿದ್ದು, ಸೀಟು ಸಿಗಲಿದೆ ಎಂದು ನಂಬಿಸಿದ್ದ.
ಕೆಲ ದಿನಗಳ ಬಳಿಕ ಮತ್ತೆ ಕ್ರಿಶನ್ ಪಾಲ್ರನ್ನು ಸಂಪರ್ಕಿಸಿದ ಭೂಪೇಂದ್ರ ಸಿಂಗ್, ಸೀಟು ಕೊಡಿಸುವ ಪ್ರಕ್ರಿಯೆ ಮುಂದುವರಿಸಲು ಆರಂಭಿಕವಾಗಿ 1.50 ಲಕ್ಷ ರೂ. ಚೆಕ್ಅನ್ನು ಕಂಪನಿ ಹೆಸರಿಗೆ ಕಳಿಸುವಂತೆ ತಿಳಿಸಿದ್ದ. ಅದರಂತೆ ಕ್ರಿಶನ್ ಪಾಲ್ ಚೆಕ್ ಕಳುಹಿಸಿದ್ದರು.
ನಂತರ ಮಗನಿಗೆ ಸೀಟು ಖಾತರಿಯಾಗಿದೆ ಎಂದು ಹೇಳಿ ಆಗಸ್ಟ್ 13ರಂದು ಕ್ರಿಶನ್ಪಾಲ್ರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಭೂಪೇಂದ್ರ ಸಿಂಗ್ ಮತ್ತು ರಾಹುಲ್ ಎಂಬುವರು ಎಂ.ಜಿ.ರಸ್ತೆಯಲ್ಲಿರುವ ಬಾರ್ಟನ್ ಕಾಫಿ ಡೇಯಲ್ಲಿ 20 ಲಕ್ಷ ರೂ. ಪಡೆದುಕೊಂಡು, ಕೆಲ ಸಮಯದ ಬಳಿಕ ಕರೆ ಮಾಡುವುದಾಗಿ ಹೇಳಿ ಅಲ್ಲಿಂದ ತೆರಳಿದ್ದರು.
ಇಡೀ ದಿನ ಕಾದರೂ ಅವರಿಬ್ಬರು ಮತ್ತೆ ಬಾರದೇ ಇರುವುದು ಮತ್ತು ದೂರವಾಣಿ ಕರೆಯನ್ನು ಮಾಡದ ಕಾರಣ ಅನುಮಾನಗೊಂಡ ಕ್ರಿಶನ್ ಪಾಲ್, ವಂಚಕರ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಹೀಗಾಗಿ ತಾವು ವಂಚನೆಗೆ ಒಳಗಾಗಿರುವುದನ್ನು ಅರಿತ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕ್ರಿಶನ್ ಪಾಲ್ ನೀಡಿದ ದೂರು ಮತ್ತು ಆರೋಪಿಗಳ ಮೇಲ್ ಐಡಿ ಸೇರಿದಂತೆ ಇನ್ನಿತರೆ ದಾಖಲೆಗಳನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.