ಮದುವೆ ನೆಪದಲ್ಲಿ 25 ಲಕ್ಷ ರೂ. ದೋಚಿ ಪರಾರಿ


Team Udayavani, May 8, 2019, 3:00 AM IST

Udayavani Kannada Newspaper

ಬೆಂಗಳೂರು: ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ಪರಿಚಯವಾದ ವ್ಯಕ್ತಿ ವಿಚ್ಛೇದಿತ ಮಹಿಳೆಯನ್ನು ವಿವಾಹವಾಗುವ ನೆಪದಲ್ಲಿ 25 ಲಕ್ಷ ರೂ. ಹಣ ಪಡೆದು ಪರಾರಿಯಾಗಿರುವ ಘಟನೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಣ ಪಡೆದು ವಂಚಿಸುವ ಉದ್ದೇಶದಿಂದಲೇ ಮದುವೆ ನಾಟಕವಾಡಿದ ವ್ಯಕ್ತಿಗೆ ಆತನ ಸ್ನೇಹಿತೆಯೇ ಸಾಥ್‌ ನೀಡಿದ್ದಾರೆ. ಮಹಿಳೆಗೆ ನಂಬಿಕೆ ಬರಲು ತಮಿಳುನಾಡಿನಲ್ಲಿ ವಿವಾಹವಾದ ವಂಚಕ, ಒಂದೇ ತಿಂಗಳಿಗೆ 25 ಲಕ್ಷ ರೂ. ಪಡೆದು ಸದ್ದಿಲ್ಲದೆ ಪರಾರಿಯಾಗಿದ್ದಾನೆ.

ಹಣ ಕಳೆದುಕೊಂಡ ಬಳಿಕ ಮಹಿಳೆ ಅನುಮಾನ ಬಂದು ಆತ ವಾಸಿಸುತ್ತಿದ್ದ ಮನೆಗೆ ತೆರಳಿದಾಗ ಮನೆಖಾಲಿ ಮಾಡಿಕೊಂಡು ಹೋಗಿದ್ದಾನೆ. ಜತೆಗೆ, ವಂಚನೆ ಎಸಗುವ ಉದ್ದೇಶದಿಂದಲೇ ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ನಕಲಿ ಐಡಿ ಕ್ರಿಯೇಟ್‌ ಮಾಡಿದ್ದ ಸಂಗತಿ ಅರಿವಿಗೆ ಬಂದಿದೆ.

ಮದುವೆ ಹೆಸರಲ್ಲಿ ಹಣ ಕಳೆದುಕೊಂಡ ಮಹಿಳೆ ಇದೀಗ ಪೊಲೀಸ್‌ ಠಾಣೆಯಲ್ಲಿ ಕುಮಾರ್‌ ಹಾಗೂ ಆತನ ಸ್ನೇಹಿತೆ ರಮ್ಯಾ ಎಂಬಾಕೆ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ವಂಚಕ ಜೋಡಿಯ ಬಂಧನಕ್ಕೆ ಬಲೆಬೀಸಿದ್ದಾರೆ.

ವಂಚನೆಗೆ ಆರುತಿಂಗಳ ಫ್ಲ್ಯಾನ್‌! : ಸರ್ಕಾರಿ ಶಿಕ್ಷಕಿಯಾಗಿರುವ ಉಮಾ ( ಹೆಸರು ಬದಲಾಯಿಸಲಾಗಿದೆ)ಅವರು ಮೊದಲ ಪತಿಗೆ ವಿಚ್ಛೇದನ ನೀಡಿ ಆಡುಗೋಡಿಯಲ್ಲಿ ನೆಲೆಸಿದ್ದರು. ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ವಿಳಾಸ ಪಡೆದುಕೊಂಡಿರುವುದಾಗಿ ಹೇಳಿದ್ದ ಕುಮಾರ್‌ ಕಳೆದ ಡಿಸೆಂಬರ್‌ನಲ್ಲಿ ದೂರವಾಣಿ ಕರೆ ಮಾಡಿ ಮಾತನಾಡಿದ್ದ.

ಇದಾದ ಬಳಿಕ ರಮ್ಯಾ ಎಂಬಾಕೆ ಕರೆ ಮಾಡಿ, ತಾನು ಕುಮಾರ್‌ ಸಹೋದರಿ ಎಂದು ಹೇಳಿ, ಸಹೋದರ ಕುಮಾರ್‌ಬಿಲ್ಡರ್‌ ಆಗಿದ್ದು ನಗರದ ಹಲವು ಕಡೆ ಸ್ವಂತ ಮನೆಗಳಿವೆ ಲಕ್ಷಾಂತರ ರೂ. ಆದಾಯವಿದೆ ಎಂದು ತಿಳಿಸಿದ್ದರು. ಕುಮಾರ್‌ ಕೂಡ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದು ಮದುವೆಯಾಗುವುದಾಗಿ ನಂಬಿಸಿದ್ದ.

ಈ ಬೆಳವಣಿಗೆಗಳ ಮಧ್ಯೆಯೇ ಜನವರಿಯಲ್ಲಿ 8 ಲಕ್ಷ ರೂ. ತುರ್ತು ಅವಶ್ಯಕತೆಗೆ ಬೇಕಾಗಿದೆ ಎಂದು ಹೇಳಿ ಪಡೆದುಕೊಂಡು ಅದರಲ್ಲಿ 7ಲಕ್ಷ ರೂ. ವಾಪಾಸ್‌ ನೀಡಿದ್ದರು. ಫೆ.13ರಂದು ತಮಿಳುನಾಡಿನ ದೇವಾಲಯೊಂದಲ್ಲಿ ವಿವಾಹದ ಬಳಿಕ ಕುಮಾರ್‌ ಮನೆಗೆ ಬಂದು ಹೋಗುತ್ತಿದ್ದು ಸದ್ಯದಲ್ಲಿಯೇ ಮನೆಗೆ ಕರೆದೊಯ್ಯುವುದಾಗಿ ತಿಳಿಸಿದ್ದರು.

ಇದಾದ ಬಳಿಕ ತಮ್ಮ ತಾಯಿಯ ಹೆಸರಿನಲ್ಲಿದ್ದ ಮನೆ ಮಾರಾಟ ಮಾಡಿದ್ದಕ್ಕೆ 60 ಲಕ್ಷ ರೂ. ಹಣ ಬಂದಿದ್ದ ವಿಚಾರ ತಿಳಿದಿದ್ದ ಕುಮಾರ್‌ ಹಾಗೂ ರಮ್ಯಾ 25 ಲಕ್ಷ ರೂ. ಹಣ ಬೇಕೆಂದು ಪಟ್ಟು ಹಿಡಿದು ಪಡೆದುಕೊಂಡರು ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಹಣ ಪಡೆದು ಮಾತು ನಿಲ್ಲಿಸಿದ: 25 ಲಕ್ಷ ರೂ. ಪಡೆದ ಕೆಲವೇ ದಿನಗಳಲ್ಲಿ ಮನೆಗೆ ಬರುವುದನ್ನು ನಿಲ್ಲಿಸಿದ ಕುಮಾರ್‌ ಫೋನ್‌ ಮಾಡಿದರೂ ಕರೆ ಮಾಡಿ ಸ್ವೀಕರಿಸುತ್ತಿರಲಿಲ್ಲ. ರಮ್ಯಾಳಿಗೆ ಕರೆ ಮಾಡಿದರೆ ಕುಮಾರ್‌ ತನಗೆ ಗೊತ್ತೇ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಮತ್ತೂಮ್ಮೆ ಕರೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಪ್ರಾಣಬೆದರಿಕೆ ಒಡ್ಡಿದ್ದಾರೆ.

ಅವರು ವಾಸವಿದ್ದ ಮನೆ ಕೂಡ ಖಾಲಿ ಮಾಡಿಕೊಂಡು ಹೋಗಿದ್ದು. ಪರಿಶೀಲನೆ ನಡೆಸಿದಾಗ ಕುಮಾರ್‌ ಅವರ ನಿಜವಾದ ಹೆಸರು ಶೇಖರ್‌ ಆಗಿದ್ದು ವಂಚನೆ ಮಾಡುವ ಸಲುವಾಗಿಯೇ ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ಕುಮಾರ್‌ ಹೆಸರಿನಲ್ಲಿ ನಕಲಿ ಅಕೌಂಟ್‌ ಹೊಂದಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.