ಮದುವೆ ನೆಪದಲ್ಲಿ 25 ಲಕ್ಷ ರೂ. ದೋಚಿ ಪರಾರಿ


Team Udayavani, May 8, 2019, 3:00 AM IST

Udayavani Kannada Newspaper

ಬೆಂಗಳೂರು: ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ಪರಿಚಯವಾದ ವ್ಯಕ್ತಿ ವಿಚ್ಛೇದಿತ ಮಹಿಳೆಯನ್ನು ವಿವಾಹವಾಗುವ ನೆಪದಲ್ಲಿ 25 ಲಕ್ಷ ರೂ. ಹಣ ಪಡೆದು ಪರಾರಿಯಾಗಿರುವ ಘಟನೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಣ ಪಡೆದು ವಂಚಿಸುವ ಉದ್ದೇಶದಿಂದಲೇ ಮದುವೆ ನಾಟಕವಾಡಿದ ವ್ಯಕ್ತಿಗೆ ಆತನ ಸ್ನೇಹಿತೆಯೇ ಸಾಥ್‌ ನೀಡಿದ್ದಾರೆ. ಮಹಿಳೆಗೆ ನಂಬಿಕೆ ಬರಲು ತಮಿಳುನಾಡಿನಲ್ಲಿ ವಿವಾಹವಾದ ವಂಚಕ, ಒಂದೇ ತಿಂಗಳಿಗೆ 25 ಲಕ್ಷ ರೂ. ಪಡೆದು ಸದ್ದಿಲ್ಲದೆ ಪರಾರಿಯಾಗಿದ್ದಾನೆ.

ಹಣ ಕಳೆದುಕೊಂಡ ಬಳಿಕ ಮಹಿಳೆ ಅನುಮಾನ ಬಂದು ಆತ ವಾಸಿಸುತ್ತಿದ್ದ ಮನೆಗೆ ತೆರಳಿದಾಗ ಮನೆಖಾಲಿ ಮಾಡಿಕೊಂಡು ಹೋಗಿದ್ದಾನೆ. ಜತೆಗೆ, ವಂಚನೆ ಎಸಗುವ ಉದ್ದೇಶದಿಂದಲೇ ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ನಕಲಿ ಐಡಿ ಕ್ರಿಯೇಟ್‌ ಮಾಡಿದ್ದ ಸಂಗತಿ ಅರಿವಿಗೆ ಬಂದಿದೆ.

ಮದುವೆ ಹೆಸರಲ್ಲಿ ಹಣ ಕಳೆದುಕೊಂಡ ಮಹಿಳೆ ಇದೀಗ ಪೊಲೀಸ್‌ ಠಾಣೆಯಲ್ಲಿ ಕುಮಾರ್‌ ಹಾಗೂ ಆತನ ಸ್ನೇಹಿತೆ ರಮ್ಯಾ ಎಂಬಾಕೆ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ವಂಚಕ ಜೋಡಿಯ ಬಂಧನಕ್ಕೆ ಬಲೆಬೀಸಿದ್ದಾರೆ.

ವಂಚನೆಗೆ ಆರುತಿಂಗಳ ಫ್ಲ್ಯಾನ್‌! : ಸರ್ಕಾರಿ ಶಿಕ್ಷಕಿಯಾಗಿರುವ ಉಮಾ ( ಹೆಸರು ಬದಲಾಯಿಸಲಾಗಿದೆ)ಅವರು ಮೊದಲ ಪತಿಗೆ ವಿಚ್ಛೇದನ ನೀಡಿ ಆಡುಗೋಡಿಯಲ್ಲಿ ನೆಲೆಸಿದ್ದರು. ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ವಿಳಾಸ ಪಡೆದುಕೊಂಡಿರುವುದಾಗಿ ಹೇಳಿದ್ದ ಕುಮಾರ್‌ ಕಳೆದ ಡಿಸೆಂಬರ್‌ನಲ್ಲಿ ದೂರವಾಣಿ ಕರೆ ಮಾಡಿ ಮಾತನಾಡಿದ್ದ.

ಇದಾದ ಬಳಿಕ ರಮ್ಯಾ ಎಂಬಾಕೆ ಕರೆ ಮಾಡಿ, ತಾನು ಕುಮಾರ್‌ ಸಹೋದರಿ ಎಂದು ಹೇಳಿ, ಸಹೋದರ ಕುಮಾರ್‌ಬಿಲ್ಡರ್‌ ಆಗಿದ್ದು ನಗರದ ಹಲವು ಕಡೆ ಸ್ವಂತ ಮನೆಗಳಿವೆ ಲಕ್ಷಾಂತರ ರೂ. ಆದಾಯವಿದೆ ಎಂದು ತಿಳಿಸಿದ್ದರು. ಕುಮಾರ್‌ ಕೂಡ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದು ಮದುವೆಯಾಗುವುದಾಗಿ ನಂಬಿಸಿದ್ದ.

ಈ ಬೆಳವಣಿಗೆಗಳ ಮಧ್ಯೆಯೇ ಜನವರಿಯಲ್ಲಿ 8 ಲಕ್ಷ ರೂ. ತುರ್ತು ಅವಶ್ಯಕತೆಗೆ ಬೇಕಾಗಿದೆ ಎಂದು ಹೇಳಿ ಪಡೆದುಕೊಂಡು ಅದರಲ್ಲಿ 7ಲಕ್ಷ ರೂ. ವಾಪಾಸ್‌ ನೀಡಿದ್ದರು. ಫೆ.13ರಂದು ತಮಿಳುನಾಡಿನ ದೇವಾಲಯೊಂದಲ್ಲಿ ವಿವಾಹದ ಬಳಿಕ ಕುಮಾರ್‌ ಮನೆಗೆ ಬಂದು ಹೋಗುತ್ತಿದ್ದು ಸದ್ಯದಲ್ಲಿಯೇ ಮನೆಗೆ ಕರೆದೊಯ್ಯುವುದಾಗಿ ತಿಳಿಸಿದ್ದರು.

ಇದಾದ ಬಳಿಕ ತಮ್ಮ ತಾಯಿಯ ಹೆಸರಿನಲ್ಲಿದ್ದ ಮನೆ ಮಾರಾಟ ಮಾಡಿದ್ದಕ್ಕೆ 60 ಲಕ್ಷ ರೂ. ಹಣ ಬಂದಿದ್ದ ವಿಚಾರ ತಿಳಿದಿದ್ದ ಕುಮಾರ್‌ ಹಾಗೂ ರಮ್ಯಾ 25 ಲಕ್ಷ ರೂ. ಹಣ ಬೇಕೆಂದು ಪಟ್ಟು ಹಿಡಿದು ಪಡೆದುಕೊಂಡರು ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಹಣ ಪಡೆದು ಮಾತು ನಿಲ್ಲಿಸಿದ: 25 ಲಕ್ಷ ರೂ. ಪಡೆದ ಕೆಲವೇ ದಿನಗಳಲ್ಲಿ ಮನೆಗೆ ಬರುವುದನ್ನು ನಿಲ್ಲಿಸಿದ ಕುಮಾರ್‌ ಫೋನ್‌ ಮಾಡಿದರೂ ಕರೆ ಮಾಡಿ ಸ್ವೀಕರಿಸುತ್ತಿರಲಿಲ್ಲ. ರಮ್ಯಾಳಿಗೆ ಕರೆ ಮಾಡಿದರೆ ಕುಮಾರ್‌ ತನಗೆ ಗೊತ್ತೇ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಮತ್ತೂಮ್ಮೆ ಕರೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಪ್ರಾಣಬೆದರಿಕೆ ಒಡ್ಡಿದ್ದಾರೆ.

ಅವರು ವಾಸವಿದ್ದ ಮನೆ ಕೂಡ ಖಾಲಿ ಮಾಡಿಕೊಂಡು ಹೋಗಿದ್ದು. ಪರಿಶೀಲನೆ ನಡೆಸಿದಾಗ ಕುಮಾರ್‌ ಅವರ ನಿಜವಾದ ಹೆಸರು ಶೇಖರ್‌ ಆಗಿದ್ದು ವಂಚನೆ ಮಾಡುವ ಸಲುವಾಗಿಯೇ ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ಕುಮಾರ್‌ ಹೆಸರಿನಲ್ಲಿ ನಕಲಿ ಅಕೌಂಟ್‌ ಹೊಂದಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.