ವಿಜಯಾ ಬ್ಯಾಂಕ್ಗೆ 254 ಕೋಟಿ ರೂ. ನಿವ್ವಳ ಲಾಭ
Team Udayavani, Jul 23, 2017, 9:40 AM IST
ಬೆಂಗಳೂರು: ವಿಜಯಾ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕ ಅವಧಿಯಲ್ಲಿ 254.69 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷದ ಮೊದಲ ತ್ತೈಮಾಸಿಕ ಅವಧಿಗೆ ಹೋಲಿಸಿದರೆ ಶೇ.57.55ರಷ್ಟು (161.66 ಕೋಟಿ ರೂ.) ಹೆಚ್ಚಳ ಕಂಡಿದ್ದು, ಬ್ಯಾಂಕ್ನ ಇತಿಹಾಸದಲ್ಲಿ ತ್ತೈಮಾಸಿಕದಲ್ಲಿ ಅತಿ ಹೆಚ್ಚು ನಿವ್ವಳ ಲಾಭ ಗಳಿಸಿದ ದಾಖಲೆ ಸೃಷ್ಟಿಯಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಇದೇ ತ್ತೈಮಾಸಿಕದಲ್ಲಿ ಬ್ಯಾಂಕ್ ಒಟ್ಟು 3,510.11 ಕೋಟಿ ರೂ. ಆದಾಯ ಗಳಿಸಿದ್ದು, ಶೇ. 6.52ರಷ್ಟು ಏರಿಕೆ ಕಂಡುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3,295 ಕೋಟಿ ರೂ. ಸಂಗ್ರಹವಾಗಿತ್ತು. ಈ ಅವಧಿಯಲ್ಲಿ
ಬ್ಯಾಂಕ್ನ ಪ್ರತಿ ಷೇರು ಮೌಲ್ಯ ( ಇಪಿಎಸ್ )2.55 ರೂ.ನಷ್ಟು ಏರಿಕೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 1.62 ರೂ. ಏರಿಕೆಯಾಗಿತ್ತು.
ವಿಜಯಾ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಜಯಾ ಬ್ಯಾಂಕ್ನ
ವ್ಯವಸ್ಥಾಪಕ ನಿರ್ದೇಶಕರೂ ಆದ ಸಿಇಒ ಡಾ.ಕಿಶೋರ್ ಸನ್ಸಿ, “ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ನಿವ್ವಳ ಲಾಭ ಶೇ.57.55ರಷ್ಟು ಏರಿಕೆಯಾಗಿದ್ದು, ಬ್ಯಾಂಕ್ನ ಇತಿಹಾಸದಲ್ಲಿ ತ್ತೈಮಾಸಿಕ ಅವಧಿಯಲ್ಲಿ ದಾಖಲೆ ಪ್ರಮಾಣದ ನಿವ್ವಳ ಲಾಭ ಗಳಿಸಿದೆ’ ಎಂದು ಹೇಳಿದರು.
“ನಿವ್ವಳ ಬಡ್ಡಿ ಆದಾಯವು ಶೇ.20.59ರಷ್ಟು ಏರಿಕೆಯಾಗಿದ್ದರೆ ಇತರೆ ಆದಾಯವು ಶೇ.114.49ರಷ್ಟು ಹೆಚ್ಚಳವಾಗಿದೆ.
ಜತೆಗೆ ನಿರ್ವಹಣಾ ಲಾಭ 752 ಕೋಟಿ ರೂ. ಸಂಗ್ರಹವಾಗಿದ್ದು, ಆ ಮೂಲಕ ಶೇ.64.05ರಷ್ಟು ಏರಿಕೆ ಕಂಡಿದೆ ಎಂದು ತಿಳಿಸಿದರು.
ಚಾಲ್ತಿ ಖಾತೆ- ಉಳಿತಾಯ ಖಾತೆಗಳ ಠೇವಣಿ ಮೊತ್ತ 36,318 ಕೋಟಿ ರೂ. ಇದ್ದು, ಶೇ.29.82ರಷ್ಟು ಹೆಚ್ಚಳ ಕಂಡಿದೆ. ಉಳಿತಾಯ ಖಾತೆ ಠೇವಣಿಯಡಿ 28,320 ಕೋಟಿ ರೂ. ಇದ್ದು, ಶೇ.29.11ರಷ್ಟು ಹೆಚ್ಚಳವಾಗಿದೆ. ಜತೆಗೆ ಚಾಲ್ತಿ ಖಾತೆ ಠೇವಣಿ ಪ್ರಮಾಣವು 7,998 ಕೋಟಿ ರೂ. ಇದ್ದು, ಶೇ.32.42ರಷ್ಟು ಏರಿಕೆಯಾಗಿದೆ ಎಂದು ವಿವರ ನೀಡಿದರು.
ಪ್ರಸ್ತುತ 2017-18ನೇ ಸಾಲಿನ ಮೊದಲ ತ್ತೈಮಾಸಿಕದಲ್ಲಿ ನಿವ್ವಳ ಅನುತ್ಪಾದಕ ಸಾಲ ಪ್ರಮಾಣದ ಮೊತ್ತ ಶೇ.5.24ರಷ್ಟಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.5.42ರಷ್ಟಿತ್ತು. ಅನುತ್ಪಾದಕ ಸಾಲ ಪ್ರಮಾಣ
ಕಳೆದ ವರ್ಷದ ತ್ತೈಮಾಸಿಕ ಅವಧಿಗೆ ಹೋಲಿಸಿದರೆ ಇಳಿಕೆಯಾಗಿದೆ. ಆದರೆ ಈ ಪ್ರಮಾಣವನ್ನು ಪರಿಣಾಮಕಾರಿಯಾಗಿ ಇಳಿಕೆ ಮಾಡಲು ನಾನಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 2016-17ನೇ ಸಾಲಿನಲ್ಲಿ ಬ್ಯಾಂಕ್ ಉತ್ತಮ ಸಾಧನೆ ತೋರಿದ್ದು, ಆ ಮೂಲಕ ಕೇಂದ್ರ ಸಚಿವಾಲಯ, ನಾನಾ ಖಾಸಗಿ ಕಂಪನಿಗಳಿಂದ 35ಕ್ಕೂ ಹೆಚ್ಚು ಪ್ರಶಸ್ತಿಗಳಿಗೆ ಭಾಜನವಾಗಿದೆ’ ಎಂದು ತಿಳಿಸಿದರು.ಬ್ಯಾಂಕ್ನ ಕಾರ್ಯಕಾರಿ ನಿರ್ದೇಶಕರಾದ ಬಿ.ಎಸ್.ರಾಮರಾವ್, ವೈ.ನಾಗೇಶ್ವರರಾವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ