ಸಿಸಿಬಿಯಿಂದ 4.50 ಕೋಟಿ ರೂ. ಮೌಲ್ಯದ ವಸ್ತುಗಳ ವಶ


Team Udayavani, Oct 31, 2019, 3:05 AM IST

ccb-inda

ಬೆಂಗಳೂರು: ಕಳೆದ ಮೂರು ತಿಂಗಳ ಅವಧಿಯಲ್ಲಿ ಕೊಲೆಯತ್ನ, ದರೋಡೆ, ಸುಲಿಗೆ, ಮಾದಕ ವಸ್ತು ಮಾರಾಟ, ಕ್ರಿಕೆಟ್‌ ಫಿಕ್ಸಿಂಗ್‌, ವಂಚನೆ ಸೇರಿದಂತೆ ವಿವಿಧ ಮಾದರಿಯ 105 ಪ್ರಕರಣಗಳನ್ನು ಬೇಧಿಸಿರುವ ಕೇಂದ್ರ ಅಪರಾಧ ವಿಭಾಗ ಪೊಲೀಸರು 568 ಮಂದಿ ವಿರುದ್ಧ ಕಾನೂನು ಕ್ರಮ ಜರುಗಿಸಿ 4.50 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಬುಧವಾರ ಪತ್ರಿಕಾಗೋಷ್ಠಿ ಮಾತನಾಡಿ, ಮಹಿಳೆ ಮತ್ತು ಮಾದಕ ದ್ರವ್ಯ ವಿಭಾಗದ ವತಿಯಿಂದ 1.32 ರೂ. ನಗದು ಹಾಗೂ 85,00,00 ರೂ. ಮೌಲಗ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ ಮಾದಕ ವಸ್ತು ಮಾರಾಟ ತಡ ಸಂಬಂಧ 13 ಮಂದಿ ಆರೋಪಿಗಳನ್ನು ಬಂಧಿಸಿ 95 ಕೆ.ಜಿ. ಗಾಂಜಾ ಹಾಗೂ ಇನ್ನಿತರೆ ಮಾದಕ ವಸ್ತು ಜಪ್ತಿ ಮಾಡಲಾಗಿದೆ.

ನಗರದಲ್ಲಿ ಅಕ್ರಮವಾಗಿ ಪರವಾನಿಗೆ ನಿಯಮ ಉಲ್ಲಂಘನೆ ಮಾಡಿ ನಡೆಸುತ್ತಿದ್ದ ಡ್ಯಾನ್ಸ್‌ಬಾರ್‌ ಹಾಗೂ ಡಿಸ್ಕೋಥೆಕ್‌ ನಡೆಸುತ್ತಿದ್ದ ಸಂಬಂಧ 11 ಕ್ರಿಮಿನಲ್‌ ಪ್ರಕರಣ ದಾಖಲಿಸಿ 65 ಮಂದಿಯನ್ನು ಬಂಧಿಸಲಾಗಿದೆ. ಮಾನವ ಕಳ್ಳಸಾಗಾಣಿಕೆ ಜಾಲವನ್ನು ಬೇಧಿಸಿ 9 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಸಿಸಿಬಿ ವಿಭಾಗದ ನರಹತ್ಯೆ ಮತ್ತು ಕನ್ನಕಳವು ವಿಭಾಗದ ನಡೆಸಿದ ಕಾರ್ಯಾಚರಣೆಯಲ್ಲಿ 4 ಮಂದಿ ಹಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 35 ಲಕ್ಷ ರೂ. ಬೆಲೆ ಬಾಳುವ 1 ಕೆ.ಜಿ. 250 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. 14 ಕನ್ನ ಕಳವು ಸೇರಿ 16 ಪ್ರಕರಣ ಪತ್ತೆಯಾಗಿದೆ.

ವಿಶೇಷ ವಿಚಾರಣೆ (ಎಸ್‌ಇ)ದಳವು ಅಗಸ್ಟ್‌ ತಿಂಗಳಿನಿಂದ ಈಚೆಗೆ 23 ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ 78 ಲಕ್ಷ ರೂ.ಗಳನ್ನು ಜಪ್ತಿ ಮಾಡಿಕೊಂಡಿದೆ. ನಗರದ ಐದು ಸ್ಥಳಗಳಲ್ಲಿ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ರಿಫಿಲ್ಲಿಂಗ್‌ ಮಾಡುತ್ತಿದ್ದ ಸ್ಥಳಗಳಿಗೆ ದಾಳಿ ನಡೆಸಿ 900 ಗ್ಯಾಸ್‌ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಂಚನೆ ಮತ್ತು ದುರುಪಯೋಗ ವಿಭಾಗವು ಕಾಫಿರೈಟ್‌ ಕಾಯಿದೆ ಉಲ್ಲಂಘನೆ ಮಾಡಿದ್ದ 39 ಜನ ಆರೋಪಿಗಳನ್ನು ಬಂಧಿಸಿ 16 ಪ್ರಕರಣಗಳನ್ನು ದಾಖಲಿಸಿದೆ. ಅಷ್ಟೇ ಅಲ್ಲದೆ ಎಲೆಕ್ಟ್ರಾನಿಕ್‌ ವಸ್ತುಗಳು, ಕಾಫಿರೈಟ್‌ ಉಲ್ಲಂಘನೆಯ ಬಟ್ಟೆಗಳು ಸೇರಿದಂತೆ ರೂ 1,03, ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.