ಆರೆಸ್ಸೆಸ್ ನ ಉನ್ನತ ಮಟ್ಟದ ಸಭೆ ಆರಂಭ: ಮೋಹನ್ ಭಾಗವತ್, ಭೈಯಾಜೀ ಜೋಶಿಯವರಿಂದ ಉದ್ಘಾಟನೆ
Team Udayavani, Mar 19, 2021, 9:15 AM IST
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ ನಿರೂಪಣೆ ಹಾಗೂ ನಿರ್ಣಯ ತೆಗೆದುಕೊಳ್ಳುವ ಅಖಿಲಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಬೆಂಗಳೂರಿನ ಚೆನ್ನೇನಹಳ್ಳಿಯಲ್ಲಿ ಆರಂಭಗೊಂಡಿದೆ.
ಸರಸಂಘಚಾಲಕ್ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ಭೈಯಾಜೀ ಜೋಶಿಯವರು ಎಬಿಪಿಎಸ್ ಉದ್ಘಾಟನೆ ನೆರವೇರಿಸಿದರು.
ಇದನ್ನೂ ಓದಿ:ಲಾಕ್ ಡೌನ್, ಕರ್ಫ್ಯೂ ಇರಲಿ… ಇನ್ನೂ ಕ್ವಾರಂಟೈನ್ ಯಾಕಿಲ್ಲ? ಮೂಲ ನಿಯಮವನ್ನೇ ಮರೆತ ಸರ್ಕಾರ
ಸಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ, ಸಿ.ಆರ್.ಮುಕುಂದ, ಸುರೇಶ್ ಸೋನಿ, ಕೃಷ್ಣಗೋಪಾಲ್, ಭಾಗಯ್ಯ ಸೇರಿದಂತೆ ಬಿಜೆಪಿ, ವಿಶ್ವಹಿಂದು ಪರಿಷತ್, ಎಬಿವಿಪಿ, ವಿದ್ಯಾಭಾರತಿ, ಸೇವಾ ಭಾರತಿ ಮೊದಲಾದ ಸಂಘಪರಿವಾರ ಸಂಘಟನೆಗಳ ಸುಮಾರು 450 ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಮಾ.20ರ ವರೆಗೂ ಎಬಿಪಿಎಸ್ ನಡೆಯಲಿದೆ.
ಸಂಘ ಶಾಖೆಯ ವಿಸ್ತಾರ ಸೇರಿದಂತೆ ವಿವಿಧ ಚಟುವಟಿಕೆಗಳ ವರದಿ, ಮುಂದಿನ ಕಾರ್ಯಯೋಜನೆ ಹಾಗೂ ರಾಷ್ಟ್ರೀಯ ಮಹತ್ವದ ಪ್ರಮುಖ ವಿಷಯದ ಚರ್ಚೆ ಎಬಿಪಿಎಸ್ ನಲ್ಲಿ ಆಗಲಿದೆ. ಹಾಗೆಯೇ ಮಾ.20ರಂದು ಸರಕಾರ್ಯವಾಹ ಆಯ್ಕೆಯ ಚುನಾವಣೆ ಕೂಡ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಸುರಕ್ಷತ ಕ್ರಮಗಳನ್ನು ತೆಗೆದುಕೊಂಡಿದ್ದು, ನೇರವಾಗಿ ಪಾಲ್ಗೊಳ್ಳಲು ಸಾಧ್ಯವಾಗದವರಿಗೆ ವರ್ಚುವಲ್ ವ್ಯವಸ್ಥೆ ಮೂಲಕ ಭಾಗವಹಿಸಲು ಅನುಕೂಲ ಆಗುವಂತೆ ದೇಶದ 44 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ