ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಆರ್‌ಟಿಇ ಸೀಟು


Team Udayavani, Apr 13, 2017, 2:15 AM IST

Farmers-Sucide-650.jpg

ಬೆಂಗಳೂರು: ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ ಪಿಂಚಣಿ ನೀಡು ವುದಾಗಿ ಸರಕಾರ ಪ್ರಕಟಿಸಿದ ಬೆನ್ನಲ್ಲೇ, ಈಗ ಅವರ ಮಕ್ಕಳಿಗೆ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಆದ್ಯತೆ ಮೇರೆಗೆ ಖಾಸಗಿ ಶಾಲೆಯಲ್ಲಿ ಸೀಟು ಕಲ್ಪಿಸಲು ಆದೇಶ ನೀಡಿದೆ. ಸಾವಿರಕ್ಕೂ ಅಧಿಕ ರೈತರು ರಾಜ್ಯದಲ್ಲಿ ನೇಣಿಗೆ ಶರಣಾಗಿದ್ದು, ಅವರ ಕುಟುಂಬಗಳಿಗೆ ಪರಿಹಾರದ ಜತೆಗೆ ಮಕ್ಕಳ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಆರ್‌ಟಿಇ ಕಾಯ್ದೆಯಡಿ ಸಮೀಪದ ಶಾಲೆಗಳಲ್ಲಿ ಸೀಟು ಒದಗಿ ಸುವ ಭರವಸೆ ಸರಕಾರ ನೀಡಿತ್ತು. ಅದರಂತೆ ಈಗ  ಈ ಸಂಬಂಧ ನಿರ್ದೇಶನ ನೀಡಲಾಗಿದೆ. ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಯೋಜನೆ ರೂಪಿಸಿ, ಸಂಬಂಧ ಪಟ್ಟ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಸಾಮಾನ್ಯ ಮಕ್ಕಳು ಅರ್ಜಿ ಸಲ್ಲಿಸುವಂತೆಯೇ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು ಸಾರ್ವಜನಿಕ ಶಿಕ್ಷಣ ಇಲಾಖೆ ವೆಬ್‌ಸೈಟ್‌ www.schooleducation.kar.nic.in ಮೂಲಕ ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಜತೆಗೆ ತಂದೆ ಅಥವಾ ಪಾಲಕರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉಪವಿಭಾಗಾಧಿಕಾರಿ ನೀಡುವ ದೃಢೀಕರಣ ಪತ್ರವನ್ನು  ಜತೆಗೆ ಸಲ್ಲಿಸಬೇಕು. ಶಿಕ್ಷಣ ಇಲಾಖೆ ಈ ಅರ್ಜಿಗಳನ್ನು ಪ್ರತ್ಯೇಕಿಸಿ, ಲಾಟರಿ ಮೂಲಕವೇ ಸೀಟು ಹಂಚಿಕೆ ಮಾಡಲಿದೆ. ಶಾಲೆಯಲ್ಲಿ ಸೀಟು ಕಡಿಮೆ ಇದ್ದಲ್ಲಿ, ಸಮೀಪದ ಶಾಲೆಗಳಲ್ಲಿ ಸೀಟು ಕಲ್ಪಿಸಲಾಗುತ್ತದೆ. ಒಂದೊಮ್ಮೆ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಪ್ರೌಢ ಶಿಕ್ಷಣ ಅಥವಾ ಉನ್ನತ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳ ವರದಿ ಆಧಾರದ ಮೇಲೆ ಸರಕಾರವೇ ಶುಲ್ಕ ಭರಿಸುತ್ತದೆ.

ವಿಶೇಷ ಮೀಸಲಾತಿ
ಏಡ್ಸ್‌ ಪೀಡಿತ ಮತ್ತು ಬಾಧಿತ ಮಕ್ಕಳಿಗೆ, ಅಂಗವಿಕಲ ಮಕ್ಕಳಿಗೆ, ವಲಸಿಗರ ಮಕ್ಕಳಿಗೆ , ಅನಾಥ ಮಕ್ಕಳಿಗೆ ಆರ್‌ಟಿಇ ಅಡಿ ಖಾಸಗಿ ಶಾಲೆಗೆ ಸೇರಲು ವಿಶೇಷ ಮೀಸಲಾತಿ ಇದೆ. ಆದರೆ, ಇದಕ್ಕೆ ಸೂಕ್ತ ದಾಖಲೆ ಒದಗಿಸಬೇಕು. ಮಕ್ಕಳು ಏಡ್ಸ್‌ ಪೀಡಿತರು/ ಬಾಧಿತರಾಗಿದ್ದರೆ ಜಿಲ್ಲಾ ವೈದ್ಯಾಧಿಕಾರಿಯ ದೃಢೀಕರಣ ಪತ್ರ, ಅಂಗವಿಕಲರಾಗಿದ್ದರೆ ಸರಕಾರಿ ವೈದ್ಯರ ದೃಢೀಕರಣಪತ್ರ ಇರಬೇಕು. ಅನಾಥ ಮಕ್ಕಳು, ವಲಸಿಗರ ಮಕ್ಕಳು ಎನ್ನು°ವುದಕ್ಕೂ ದಾಖಲೆ ಒದಗಿಸಿ, ಆರ್‌ಟಿಇ ಮೀಸಲಾತಿ ಪಡೆಯಬಹುದಾಗಿದೆ.

– ರಾಜು ಖಾರ್ವಿ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.