Namma Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಮೈ ಮುಟ್ಟಿ ಅಸಭ್ಯ ವರ್ತನೆ


Team Udayavani, Dec 9, 2023, 9:14 AM IST

Namma Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಮೈ ಮುಟ್ಟಿ ಅಸಭ್ಯ ವರ್ತನೆ

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಮಹಿಳಾ ಐಟಿ ಉದ್ಯೋಗಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಮೆಟ್ರೋ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಲೋಕೇಶ್‌ (30) ಬಂಧಿತ. 22 ವರ್ಷದ ಮಹಿಳಾ ಟೆಕಿಯೊಬ್ಬರು ಗುರುವಾರ ಬೆಳಗ್ಗೆ 9.40 ಗಂಟೆಗೆ ರಾಜಾಜಿನಗರ ನಿಲ್ದಾಣದಲ್ಲಿ ಮೆಟ್ರೋ ರೈಲು ಹತ್ತಿದ್ದರು. ನಾಡಪ್ರಭು ಕೆಂಪೇಗೌಡ ನಿಲ್ದಾಣಕ್ಕೆ ರೈಲು ಸಮೀಪಿಸುತ್ತಿದ್ದಂತೆ ಪ್ರಯಾಣಿಕರ ಜನಸಂದಣಿ ಹೆಚ್ಚಾಗಿತ್ತು. ಆ ವೇಳೆ ಆರೋಪಿ ಲೋಕೇಶ್‌ ಯುವತಿಯ ಹಿಂಬದಿಯಲ್ಲಿ ನಿಂತು ಮೈ ಮುಟ್ಟಿ ಅನುಚಿತವಾಗಿ ವರ್ತಿಸಿದ್ದ.

ಜನ ಸಂದಣಿ ಇರುವ ಹಿನ್ನೆಲೆಯಲ್ಲಿ ಒತ್ತಡದಲ್ಲಿ ಆಗಿರಬಹುದು ಎಂದುಕೊಂಡು ಯುವತಿ ಮೊದಲು ಸುಮ್ಮನಿದ್ದರು. ಆರೋಪಿಯು ಮತ್ತೆ ಇದೇ ರೀತಿ ವರ್ತಿಸಿದಾಗ ಯುವತಿ ರೈಲಿನೊಳಗೆ ಜೋರಾಗಿ ಕೂಗಿ ಪ್ರತಿಭಟಿಸಿದ್ದಾರೆ. ಈ ವೇಳೆ ರೈಲು ಮೆಜೆಸ್ಟಿಕ್‌ ನಿಲ್ದಾಣಕ್ಕೆ ತಲುಪಿದ್ದು, ಆರೋಪಿ ಲೋಕೇಶ್‌ ಇಳಿದು ಓಡಲು ಪ್ರಾರಂಭಿಸಿದ್ದಾನೆ. ಆಗ ಯುವತಿ ಮತ್ತು ಸಾರ್ವಜನಿಕರು ಜೋರಾಗಿ ಕೂಗಿ ಆತನನ್ನು ಹಿಡಿಯುವಂತೆ ಸೂಚಿಸಿದ್ದರು. ಇದನ್ನು ಗಮನಿಸಿದ ಮೆಟ್ರೋ ಭದ್ರತಾ ಸಿಬ್ಬಂದಿ ಲೋಕೇಶ್‌ನನ್ನು ಹಿಡಿದು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯ ಹಳೆ ಕೃತ್ಯ ಬಯಲು: ಯುವತಿ ನೀಡಿದ ದೂರು ದಾಖಲಿಸಿಕೊಂಡ ಪೊಲೀಸರು ಲೋಕೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲೋಕೇಶ್‌ ಕಳೆದ ಏಪ್ರಿಲ್‌ನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರ ಮೊಬೈಲ್‌ ಕಳ್ಳತನ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡಿದ್ದ. ಆ ವೇಳೆ ಪೊಲೀಸರು ಆತನಿಂದ 20 ಮೊಬೈಲ್‌, 1 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಎಂಬ ಸಂಗತಿ ವಿಚಾರಣೆಯಿಂದ ಗೊತ್ತಾಗಿದೆ.

ಪ್ರಯಾಣಿಕರ ಸುರಕ್ಷತೆಯೇ ನಿಗಮದ ಮೊದಲ ಆದ್ಯತೆ:  ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆಯಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹೇಳಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ನಮ್ಮ ಪ್ರಯಾಣಿಕರಿಗೆ ಸಹಾಯ ಮಾಡಲು ನಮ್ಮ ಮೆಟ್ರೋ ಸಿದ್ಧವಾಗಿದೆ. ಭದ್ರತಾ ಸಿಬ್ಬಂದಿಯು ಯಾವಾಗಲೂ ಜಾಗರೂಕರಾಗಿದ್ದು, ತುರ್ತು ಸಂದರ್ಭದಲ್ಲಿ ಯಾವುದೇ ಸಹಾಯಕ್ಕಾಗಿ ಸಿದ್ಧರಾಗಿರುತ್ತಾರೆ ಎಂದು ಹೇಳಿದೆ. ಪ್ರಯಾಣಿಕರು ನಿಯಂತ್ರಣ ಕೇಂದ್ರದ ದೂ.ಸಂ. 080 2519 1208, 080 2216 2258 / 2208 ಮತ್ತು ಸಹಾಯವಾಣಿ 1800-425-12345ಗೆ ಸಂಪರ್ಕಿಸಬಹುದು. ಹೆಚ್ಚುವರಿಯಾಗಿ, ತುರ್ತು ಸಮಯದಲ್ಲಿ ಪ್ರಯಾಣಿಕರು ಸಹಾಯ ಪಡೆಲು ಎಲ್ಲ ಮೆಟ್ರೋ ಬೋಗಿಯಲ್ಲಿ (ಪ್ರತಿ ಬೋಗಿಯಲ್ಲಿ-4) ಅಳವಡಿಸಿರುವ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಬಳಸಿ, ರೈಲು ನಿರ್ವಾಹಕರೊಂದಿಗೆ ಸಂವಹನ ನಡೆಸಬಹುದು. ಇದರಿಂದಾಗಿ, ಸಮೀಪಿಸುತ್ತಿರುವ ಅಥವಾ ಮುಂದಿನ ನಿಲ್ದಾಣದಲ್ಲಿ ಸಹಾಯ ಒದಗಿಸಲು ಅನುಕೂಲವಾಗುತ್ತದೆ ಎಂದು ನಿಗಮ ಹೇಳಿದೆ.

ಹಿಂದೆಯೂ ಮೆಟ್ರೋದಲ್ಲಿ ನಡೆದಿದ್ದವು ಇಂತಹ ಕೃತ್ಯ:

 ಕಳೆದ ನವೆಂಬರ್‌ನಲ್ಲಿ ಮೆಟ್ರೋ ನಿಲ್ದಾಣದಲ್ಲಿ ಕಾಲೇಜು ಯುವತಿಯೊಬ್ಬಳಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು. ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದರು.

 ಸೆಪ್ಟೆಂಬರ್‌ನಲ್ಲಿ ನಗರದ ಪ್ರತಿಷ್ಠಿತ ಕಾಲೇಜೊಂದರ 20 ವರ್ಷದ ವಿದ್ಯಾರ್ಥಿನಿಗೆ ಮೆಟ್ರೋದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.