ಕಮಿಷನರ್ ನಿವಾಸಕ್ಕೆ ಹಗ್ಗಜಗ್ಗಾಟ
Team Udayavani, Aug 30, 2019, 3:00 AM IST
ಬೆಂಗಳೂರು: ನಗರ ಪೊಲೀಸ್ ಆಯುಕ್ತರಿಗೆ ನೀಡಲಾಗುವ ಸರ್ಕಾರಿ ನಿವಾಸಕ್ಕೆ ಹಾಲಿ ಆಯುಕ್ತ ಭಾಸ್ಕರ್ ರಾವ್ ಹಾಗೂ ನಿರ್ಗಮಿತ ಆಯುಕ್ತ ಅಲೋಕ್ ಕುಮಾರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಇನ್ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ನಿವಾಸದಲ್ಲಿ ಈ ಹಿಂದಿನ ಆಯುಕ್ತ ಅಲೋಕ್ ಕುಮಾರ್ ವಾಸವಿದ್ದರು. ಆಗಸ್ಟ್ 2ರಂದು ಅವರನ್ನು ಕೆಎಸ್ಆರ್ಪಿ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡರು.
ಇದಾದ ಬಳಿಕ ಅಲೋಕ್ ಕುಮಾರ್ ನಿವಾಸ ತೆರವುಗೊಳಿಸಿದರೂ ಅವರಿಗೆ ಸೇರಿದ ಅರ್ಧದಷ್ಟು ವಸ್ತುಗಳು ಅದೇ ನಿವಾಸದಲ್ಲಿವೆ. ನಿವಾಸಕ್ಕೆ ಅಲೋಕ್ ಕುಮಾರ್ ಬೀಗ ಹಾಕಿಕೊಂಡು ಹೋಗಿದ್ದಾರೆ. ಹೀಗಾಗಿ, ಹಾಲಿ ಆಯುಕ್ತ ಭಾಸ್ಕರ್ ರಾವ್ ಅವರಿಗೆ ನಿವಾಸ ದೊರೆತಿಲ್ಲ.
ಈ ನಿಟ್ಟಿನಲ್ಲಿ ಅಧಿಕೃತ ನಿವಾಸ ತೆರವುಗೊಳಿಸಿಕೊಡುವಂತೆ ಆಯುಕ್ತ ಭಾಸ್ಕರ್ ರಾವ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ