ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣ ಒಂದು ವರ್ಷ ಸ್ಥಗಿತ?
Team Udayavani, Jun 25, 2019, 3:05 AM IST
ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿದ್ಯಾಲಯ ರಸ್ತೆ (ಆರ್.ವಿ. ರಸ್ತೆ) ಮೆಟ್ರೋ ನಿಲ್ದಾಣವು ಸುಮಾರು ಒಂದು ವರ್ಷ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಉದ್ದೇಶಿತ ನಿಲ್ದಾಣದ ಮೇಲೆಯಿಂದಲೇ ಹಳದಿ ಮಾರ್ಗ (ಆರ್.ವಿ. ರಸ್ತೆ-ಎಲೆಕ್ಟ್ರಾನಿಕ್ ಸಿಟಿ-ಬೊಮ್ಮಸಂದ್ರ)ವು ಹಾದುಹೋಗಲಿದೆ. ಈ ಕಾಮಗಾರಿ ಹಿನ್ನೆಲೆಯಲ್ಲಿ ನಾಗಸಂದ್ರ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ ಬರುವ ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಚಿಂತನೆ ಇದೆ. ಹಾಗೊಂದು ವೇಳೆ ಸ್ಥಗಿತಗೊಳಿಸಿದರೆ, ಸುಮಾರು ಒಂದು ವರ್ಷ ಈ ಮಾರ್ಗದ ಪ್ರಯಾಣಿಕರಿಗೆ ಸೇವೆ ವ್ಯತ್ಯಯ ಆಗಲಿದೆ.
ಹಸಿರು ಮಾರ್ಗ 2017ರಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ನಿತ್ಯ ಇಲ್ಲಿಂದ ಐದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಾರೆ. ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣ ಬಂದ್ ಆಗುವುದರಿಂದ ಪ್ರಯಾಣಿಕರು ಜಯನಗರ ಅಥವಾ ಬನಶಂಕರಿ ಮೆಟ್ರೋ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಮೆಟ್ರೋ ಏರಬೇಕಾಗುತ್ತದೆ. ಆದರೆ, ಈ ಸಂಬಂಧ ಇನ್ನೂ ಅಧಿಕೃತ ಆದೇಶ ಹೊರಬಿದ್ದಿಲ್ಲ.
ಮರಗಳನ್ನು ಉಳಿಸುವ ನಿಟ್ಟಿನಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ ತೆರಳುವ ನಿಲ್ದಾಣಕ್ಕೆ ಆರ್.ವಿ. ನಿಲ್ದಾಣವನ್ನೇ ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ನಿರ್ಧರಿಸಿದೆ. ಈ ಮೂಲಕ ವೆಚ್ಚ ಕೂಡ ಕಡಿಮೆಯಾಗಲಿದೆ. ಹಳದಿ ಮಾರ್ಗದ ಮೆಟ್ರೋ ಕಾಮಗಾರಿ 2021ಕ್ಕೆ ಮುಕ್ತಾಯಗೊಳಿಸುವ ಗುರಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ