ಪೌರಕಾರ್ಮಿಕರಿಗೆ ಸಂಕ್ರಾಂತಿ ಉಡುಗೊರೆ
Team Udayavani, Jan 15, 2019, 6:38 AM IST
ಬೆಂಗಳೂರು: ಮಕರ ಸಂಕ್ರಾಂತಿ ಅಂಗವಾಗಿ ಸೋಮವಾರ ಜೆ.ಪಿ.ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ರಾಮಲಿಂಗಾರೆಡ್ಡಿ ಮತ್ತು ಸೌಮ್ಯಾ ರೆಡ್ಡಿ, ಸ್ಥಳೀಯ ಪಾಲಿಕೆ ಸದಸ್ಯರ ಜತೆಗೂಡಿ, ಪೌರಕಾರ್ಮಿಕರಿಗೆ ಎಳ್ಳು-ಬೆಲ್ಲದ ಜತೆ ಸೀರೆ, ರವಿಕೆ, ಶರ್ಟ್ ಇನ್ನಿತರ ಉಡುಪುಗಳನ್ನು ಉಡುಗೊರೆಯಾಗಿ ನೀಡಿದರು.
ದುರ್ಗಾ ಪರಮೇಶ್ವರಿ ದೇವಸ್ಥಾನ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ನಗರವನ್ನು ಸ್ವತ್ಛ ಹಾಗೂ ಸುಂದರವಾಗಿ ಇರಿಸುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯ. ಸದಾ ಸ್ವತ್ಛತೆ ಕಾರ್ಯದಲ್ಲಿ ತೊಡಗಿರುವ ನಿಮಗೂ ಖುಷಿ ಸಿಗಲಿ ಎಂಬ ಕಾರಣದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶುಚಿತ್ವದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿಮ್ಮಗೆ ಬೇಕಾದ ಎಲ್ಲಾ ರೀತಿಯ ನೆರವು ನೀಡಲು ಸರ್ಕಾರ ಮತ್ತು ಪಾಲಿಕೆ ಬದ್ಧವಾಗಿದೆ. ಹಳ್ಳಿಯ ಸಂಕ್ರಾಂತಿ ಹಬ್ಬ ನಿಮ್ಮೆಲ್ಲರ ಬಾಳಿನಲ್ಲಿ ಬೆಳಕು ತರಲಿ ಎಂದು ಆಶಿಸಿದರು.
ಪಾಲಿಕೆ ಸದಸ್ಯ ನಾಗರಾಜು ಮಾತನಾಡಿ, ಜಯನಗರ ವಿಧಾನಸಭೆ ಕ್ಷೇತ್ರದ ಏಳು ವಾರ್ಡ್ಗಳ ಪೌರ ಕಾರ್ಮಿಕರನ್ನು ಒಂದೆಡೆ ಸೇರಿಸಿ ಉಡುಗೊರೆ ನೀಡಲಾಗಿದೆ ಎಂದರು. ಇದೇ ವೇಳೆ ನೂರಾರು ಪೌರ ಕಾರ್ಮಿಕರಿಗೆ ಪೊಂಗಲ್ ತಯಾರಿಸಿ ಹಂಚಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು