ಕಿರುಕುಳ ಸಹಿಸದೇ ಲೆಕ್ಕ ಅಧಿಕಾರಿ ರಾಜೀನಾಮೆ


Team Udayavani, Feb 10, 2017, 3:50 AM IST

resignation.jpg

ಬೆಂಗಳೂರು: ಲೆಕ್ಕಪರಿಶೋಧನೆ ಹೆಸರಲ್ಲಿ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಆಗುತ್ತಿರುವುದನ್ನು ಗಮನಕ್ಕೆ ತಂದ ಲೆಕ್ಕಪರಿಶೋಧಕರೊಬ್ಬರು ಅಧಿಕಾರಿಗಳ ಕಿರುಕುಳ ತಾಳದೆ ರಾಜೀನಾಮೆ ನೀಡಿದ ಘಟನೆ ವರದಿಯಾಗಿದೆ.

ಸಮವರ್ತಿ ಲೆಕ್ಕಪರಿಶೋಧನೆ ಹೆಸರಲ್ಲಿ ಕೋಟ್ಯಂತರ ರೂ. ದುಂದು ವೆಚ್ಚ ಆಗುತ್ತಿರುವುದನ್ನು ಗಮನಿಸಿದ ನಿವೃತ್ತ ಲೆಕ್ಕಾಧಿಕಾರಿಯೂ ಆಗಿರುವ ಸದ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಅರ್ಥಿಕ ಸಲಹೆಗಾರರ ಶಾಖೆಯಲ್ಲಿ ಕಳೆದ 8 ತಿಂಗಳಿಂದ ಹೊರಗುತ್ತಿಗೆ ಲೆಕ್ಕ ಸಮಾಲೋಚಕರಾಗಿ ಸೇವೆ ಸಲ್ಲಿಸುತ್ತಿದ್ದ ಜಿ. ನಿಜಗುಣ ಮೂರ್ತಿ, ಮೇಲಧಿಕಾರಿಗಳ ಗಮನಕ್ಕೆ ತಂದರು. ಆಂತರಿಕ ಆರ್ಥಿಕ ಸಲಹೆಗಾರರಿಗೆ ಪತ್ರ ಬರೆದರು. ಅವರ ಪತ್ರದ ಆಧಾರದಲ್ಲಿ 13.86 ಕೋಟಿ ರೂ. ವ್ಯರ್ಥ ವೆಚ್ಚ ಆಗಿದೆ ಎಂದು ಆಂತರಿಕ ಆರ್ಥಿಕ ಸಲಹೆಗಾರರ, ಆಯುಕ್ತರಿಗೆ ಟಿಪ್ಪಣಿ ಬರೆದರು. ಆದರೂ ಯಾವುದೇ ಕ್ರಮ ಆಗಿಲ್ಲ. ಅಂತಿಮವಾಗಿ ಈ ವಿಚಾರವನ್ನು ನಿಜಗುಣ ಅವರು ಗ್ರಾಮೀಣಾಭಿವೃದ್ಧಿ ಸಚಿವರ ಗಮನಕ್ಕೂ ತಂದರು. ಈ ನಡುವೆ ನಿಜಗುಣ ಅವರಿಗೆ ಮೇಲಧಿಕಾರಿಗಳಿಂದ “ಅಸಹಕಾರ ಧೋರಣೆ’ ಆರಂಭವಾಯಿತು. ಬೇಸತ್ತ ನಿಜಗುಣ ಫೆ.3ರಂದು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ಹೊರನಡೆದಿದ್ದಾರೆ.

ಅಧಿಕಾರಿಗಳಿಗೆ ಪಾರದರ್ಶಕತೆ ಹೆಸರಿನಲ್ಲಿ “ಬಣ್ಣದ ಕಲ್ಪನೆ’ಗಳನ್ನು ತೇಲಿಬಿಟ್ಟು ಗ್ರಾಮೀಣಾಭಿವೃದ್ಧಿ ಇಲಾಖೆಯ ಉದ್ಯೋಗ ಖಾತರಿ ಸೇರಿ ವಿವಿಧ ಯೋಜನೆಗಳ “ಸ್ವತಂತ್ರ ಸಮವರ್ತಿ ಲೆಕ್ಕಪರಿಶೋಧನೆ’ಯ ಗುತ್ತಿಗೆ ಗಿಟ್ಟಿಸಿಕೊಂಡಿರುವ 14 ಖಾಸಗಿ ಲೆಕ್ಕಪರಿಶೋಧಕರ ಜಾಲ ಮೂರು ವರ್ಷದ ಅವಧಿಯಲ್ಲಿ 13.86 ಕೋಟಿ  ರೂ.ಗಳನ್ನು  “ಖಾತರಿ’ಪಡಿಸಿಕೊಂಡಿದೆ.

ಇಲಾಖೆಯ ಯೋಜನೆಗಳ “ಶಾಸನಬದ್ಧ ಲೆಕ್ಕಪರಿಶೋಧನೆ’ಯನ್ನು ಮಾತ್ರ ಖಾಸಗಿ ಲೆಕ್ಕಪರಿಶೋಧಕರಿಂದ ಮಾಡಿಸಬಹುದು. ಇದು ಬಹಳ ಹಿಂದಿನಿಂದ ನಡೆದು ಬಂದ ಪದ್ದತಿ. ಆದರೆ, 2014ರಲ್ಲಿ “ಸ್ವತಂತ್ರ ಸಮವರ್ತಿ ಲೆಕ್ಕಪರಿಶೋಧನೆ’ ಪದ್ಧತಿ ಜಾರಿಗೆ ತರುವಲ್ಲಿ ಯಶಸ್ವಿಯಾದ ಕೆಲ ಖಾಸಗಿ ಲೆಕ್ಕಪರಿಶೋಧಕರು, ಅಧಿಕಾರಿಗಳ “ನೆರವಿನಿಂದ’ ಕಾಯ್ದೆ-ನಿಯಮಗಳಲ್ಲಿ ಅವಕಾಶವೇ ಇಲ್ಲದ ಪರ್ಯಾಯ ವ್ಯವಸ್ಥೆಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಜಾರಿಗೆ ತಂದ ಈ ಸಮವರ್ತಿ ಲೆಕ್ಕಪರಿಶೋಧನೆ ವ್ಯವಸ್ಥೆಗೆ ಯಾವುದೇ ಸರ್ಕಾರಿ ಆದೇಶವಿಲ್ಲ. 

ಗ್ರಾಮೀಣಾಭಿವೃದ್ಧಿ ಸಚಿವರ ಅನುಮೋದನೆಯೂ ಇಲ್ಲ. ಆರ್ಥಿಕ ಇಲಾಖೆಯ ಸಹಮತಿ ಇಲ್ಲ. ಸಚಿವ ಸಂಪುಟದ ಒಪ್ಪಿಗೆ ಇಲ್ಲ ಎನ್ನಲಾಗಿದೆ.

ಅದರಂತೆ, 2014-15 ರಿಂದ 2016-17ನೇ ಸಾಲಿನಲ್ಲಿ ಮೂರು ವರ್ಷಗಳ ಅವಧಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಉದ್ಯೋಗ ಖಾತರಿ ಸೇರಿ ಇತರ ಯೋಜನೆಗಳ “ಸ್ವತಂತ್ರ ಸಮವರ್ತಿ ಲೆಕ್ಕಪರಿಶೋಧನೆಗೆ’ 29 ಜಿಲ್ಲೆಗಳಲ್ಲಿ ಖಾಸಗಿ ಲೆಕ್ಕಪರಿಶೋಧಕರನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕೆ ಏಳು ಖಾಸಗಿ ಲೆಕ್ಕಪರಿಶೋಧಕರು 22 ಜಿಲ್ಲೆಗಳ ಲೆಕ್ಕಪರಿಶೋಧನಾ ಕಾರ್ಯಾದೇಶ ಪಡೆದುಕೊಂಡಿದ್ದರೆ, ಉಳಿದ 7 ಲೆಕ್ಕಪರಿಶೋಧಕರು ಬಾಕಿ ಏಳು ಜಿಲ್ಲೆಗಳ ಕಾರ್ಯಾದೇಶ ಪಡೆದುಕೊಂಡಿದ್ದಾರೆ. ಇದಕ್ಕಾಗಿ ಪ್ರತಿ ವರ್ಷ 4.62 ಕೋಟಿ ರೂ.ಗಳಂತೆ ಮೂರು ವರ್ಷದ ಅವಧಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ 13.86 ಕೋಟಿ ರೂ. ವೆಚ್ಚ ಮಾಡಿದೆ.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.