17ರಂದು ಯಲಹಂಕದಲ್ಲಿ ಸಾಯಿ ಗೋಲ್ಡ್ ಪ್ಯಾಲೇಸ್ ಆರಂಭ
Team Udayavani, Feb 15, 2019, 6:37 AM IST
ಬೆಂಗಳೂರು: ಜ್ಯುವೆಲರಿ ಕ್ಷೇತ್ರದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನ 3ನೇ ಮಳಿಗೆ ಯಲಹಂಕ ಓಲ್ಡ್ ಟೌನ್ ಅಂಚೆ ಕಚೇರಿ ಸಮೀಪದ ನೆಹರುನಗರದಲ್ಲಿ ಫೆ.17 ರಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಮತ್ತು ಶ್ರೀ ಚೆನ್ನಮ್ಮ ದೇವೇಗೌಡ ಅವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದು, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮತ್ತು ಶ್ರೀ ಭವಾನಿ ರೇವಣ್ಣ ಅವರು ವಜ್ರಾಭರಣಗಳ ವಿಭಾಗವನ್ನು ಅನಾವರಣಗೊಳಿಸಲಿದ್ದಾರೆ.
ಈ ಸಂದರ್ಭದಲ್ಲಿ ಮೇಯರ್ ಶ್ರೀಮತಿ ಗಂಗಾಂಬಿಕೆ ಮಲ್ಲಿಕಾರ್ಜುನ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್, ಪಾಲಿಕೆ ಸದಸ್ಯೆ ಶ್ರೀಮತಿ ಚಂದ್ರಮ್ಮ ಕೆಂಪೇಗೌಡ, ಚಿತ್ರನಟಿ ಮತ್ತು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ರಾಯಭಾರಿ ಕು. ರೂಪಿಕಾ ಹಾಗೂ ನಟಿ ಕವಿತಾ ಗೌಡ ಉಪಸ್ಥಿತರಿರಲಿದ್ದಾರೆ.
ಶೋರೂಂ ಆರಂಭದ ಕೊಡುಗೆಯಾಗಿ ದುಬೈ ಚಿನ್ನದ ದರದಲ್ಲಿ ಆಭರಣಗಳು ಮಾರಾಟ ಮಾಡಲಾಗುವುದು. ಗ್ರಾಹಕರ ಹಳೆ ಚಿನ್ನಕ್ಕೆ ಎಸ್ಎಸ್ಜಿಪಿ ದರ ಹಾಗೂ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ 125 ರೂ. ಹೆಚ್ಚಿಗೆ ನೀಡಲಾಗುವುದು.
ಒಂದು ಕೆಜಿ ಬೆಳ್ಳಿ ವಸ್ತು ಕೊಂಡಲ್ಲಿ 2000 ರೂ. ರಿಯಾಯಿತಿ ಹಾಗೂ ಪ್ರತಿ ಕ್ಯಾರೆಟ್ ವಜ್ರಾಭರಣ ಖರೀದಿ ಮೇಲೆ 5000 ರೂ. ರಿಯಾಯಿತಿ ನೀಡಲಾಗುವುದು. ಅಲ್ಲದೆ, ಮೊದಲ 100 ಬಿಲ್ಗಳಿಗೆ ಆಶ್ಚರ್ಯಕರ ಕೊಡುಗೆಗಳು ಇರಲಿವೆ ಎಂದು ಸಂಸ್ಥೆಯ ಮಾಲೀಕ ಡಾ. ಟಿ.ಎ. ಶರವಣ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್