ನೈಸ್ ರಸ್ತೆಯಲ್ಲಿ ರೂಪದರ್ಶಿಯೊಬ್ಬಳ ಕಾಡಿದ ಸೈಕೋ
Team Udayavani, Aug 9, 2017, 11:44 AM IST
ಬೆಂಗಳೂರು: ಬನ್ನೇರುಘಟ್ಟ ಸಮೀಪದ ನೈಸ್ ರಸ್ತೆಯ ಬಳಿ ಸೈಕೋ ಒಬ್ಬ ರೂಪದರ್ಶಿಯೊಬ್ಬರೊಂದಿಗೆ ಅನುಚತವಾಗಿ ವರ್ತಿಸಿದ್ದಾನೆ. ಮಹಿಳೆ ತನಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
ಈ ಹಿಂದಿನ ಮಿಸಸ್ ಇಂಡಿಯಾ ಸ್ಪರ್ಧೆಯ ರನ್ನರ್ ಆಪ್ ಆಗಿದ್ದ ರಾಜ್ಯಶ್ರೀ ಘಟನೆ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ರಾಜ್ಯಶ್ರೀ, ನೈಸ್ ರಸ್ತೆಯಲ್ಲಿ ಪ್ರಯಾಣಿಸುವವರಿಗೆ ಎಚ್ಚರದಿಂದಿರಲು ಸೂಚಿಸಿದ್ದಾರೆ. ನೈಸ್ ಸಹಾಯವಾಣಿಗೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸಲಿಲ್ಲ ಎಂದೂ ಅವರು ಆರೋಪಿಸಿದ್ದಾರೆ.
ಘಟನೆ ಏನು?
ಆ.6ರಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಪತಿಯ ಜತೆ ಮೈಸೂರಿನಿಂದ ಬನ್ನೇರುಘಟ್ಟ ರಸ್ತೆ ಮೂಲಕ ನಗರಕ್ಕೆ ಬೈಕ್ನಲ್ಲಿ ಬರುವಾಗ ನೈಸ್ರಸ್ತೆಯಲ್ಲಿ ಬೈಕ್ ಕೆಟ್ಟು ನಿಂತಿತ್ತು. ಬಳಿಕ ಪತಿ ಮತ್ತೂಂದು ವಾಹನದ ನೆರವು ಪಡೆದು ಮೆಕಾನಿಕ್ ಕರೆತರಲು ತೆರಳಿದರು. ಇದೇ ವೇಳೆ ಅಲ್ಲಿದ್ದ ಸೈಕೋ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸುತ್ತಿದ್ದ.
ಅಲ್ಲದೇ ನನ್ನ ಬಳಿ ಬರುತ್ತಿದ್ದಂತೆ ತನ್ನ ಶರ್ಟ್ ಕಳಚಿ ಮಹಿಳೆಯರು ಧರಿಸುವ ಒಳ ಉಡುಪನ್ನು ಪ್ರದರ್ಶಿಸಿದ. ಈ ಜಾಗಗಳಲ್ಲಿ ಹತ್ತಿಯ ಉಂಡೆಗಳನ್ನು ಇಟ್ಟಿರುವುದು ಕಾಣುತ್ತಿತ್ತು. ಅಲ್ಲದೇ ತುಟಿಗೆ ಲಿಪ್ಸ್ಟಿಕ್ ಹಚ್ಚಿಕೊಂಡಿದ್ದ. ಮಹಿಳೆಯರಂತೆ ಮೇಕಪ್ ಮಾಡಿ ಕೊಂಡಿದ್ದ. ಆತನ ಹಾವಭಾವ ನೋಡಿದರೆ ಮಂಗಳಮುಖೀಯಂತೆ ಕಾಣುತ್ತಿರಲಿಲ್ಲ.
ಆತನ ವಿಚಿತ್ರ ವರ್ತನೆ ಕಂಡು ಯಾರಾದರೂ ನನ್ನ ಸಹಾಯಕ್ಕೆ ಬರಲಿ ಎಂದು ಕಿರುಚಲಾರಂಭಿಸಿದೆ. ಆಗೊಮ್ಮೆ ಈಗೊಮ್ಮೆ ಬರುತ್ತಿದ್ದ ವಾಹನಗಳೆಲ್ಲವೂ ಅತ್ಯಂತ ವೇಗವಾಗಿ ಸಾಗುತ್ತಿದ್ದವು. ಹೀಗಾಗಿ ನನ್ನ ಕೂಗು ಯಾರಿಗೂ ಕೇಳಿಸಲಿಲ್ಲ. ಅಲ್ಲದೆ ಅಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿಯಲಿಲ್ಲ. ಆ ಸಂದರ್ಭದಲ್ಲಿ ನಾನು ಪೊಲೀಸರನ್ನು ಕರೆಯುವುದಾಗಿ ಬೆದರಿಸಿದೆ.
ಇದನ್ನು ಕೇಳಿ ತಟಸ್ಥನಾಗಿ ನಿಂತು ಗಾಬರಿಗೊಂಡವನಂತೆ ನನ್ನನ್ನು ದಿಟ್ಟಿಸುತ್ತಿದ್ದ. ಮೊಬೈಲ್ ತೆಗೆದ ನಾನು ಆತನ ಫೋಟೋ ಕ್ಲಿಕ್ಕಿಸಲು ಮುಂದಾದೆ. ಜತೆಗೆ ಕೆಲ ವಾಹನ ಸವಾರರು ನೋಡಿಯೂ ನೋಡದಂತೆ ನಿಧಾನವಾಗಿ ಹೋಗುತ್ತಿದ್ದರು. ಇದನ್ನು ಕಂಡ ಆತ ಅಲ್ಲಿಂದ ಬೈಕ್ನಲ್ಲಿ ಪರಾರಿಯಾದ. ಬಿಳಿ ಹೆಲ್ಮೆಟ್ ಧರಿಸಿದ್ದ ಆತ ಓರ್ವ ಸೈಕೋ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.
ಇಂತಹ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಹೀಗೆ ಓಡಾಡಲು ಬಿಟ್ಟರೆ ಅಪಾಯ ತಪ್ಪಿದ್ದಲ್ಲ. ಈ ರಸ್ತೆಯಲ್ಲಿ ಓಡಾಡುವಾಗ ಯಾವುದೇ ವ್ಯಕ್ತಿಗೂ ಇಂತಹ ಕೆಟ್ಟ ಪರಿಸ್ಥಿತಿ ಎದುರಾಗಬಹುದು. ಹೀಗಾಗಿ ಇದನ್ನು ಯಾರು ಕಡೆಗಣಿಸದಿರಿ. ಈ ಮಾರ್ಗದಲ್ಲಿ ಓಡಾಡುವರರು ಎಚ್ಚರಿಕೆಯಿಂದ ಇರುವಂತೆ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪ್ರಕಟಿಸಿ, ಪ್ರಕಟಣೆಯನ್ನು ಬೆಂಗಳೂರು ಸಿಟಿ ಪೊಲೀಸ್ ಪೇಜ್ಗೆ ಟ್ಯಾಗ್ ಮಾಡಿದ್ದಾರೆ.
ಸಹಾಯವಾಣಿ ಅಧಿಕಾರಿಗಳ ನಿರ್ಲಕ್ಷ್ಯ
ಸೈಕೋ ವ್ಯಕ್ತಿ ಸ್ಥಳದಿಂದ ಪರಾರಿಯಾಗುತ್ತಿದ್ದಂತೆ ಕೂಡಲೇ ನೈಸ್ ರಸ್ತೆಯಲ್ಲಿರುವ ಫಲಕದಲ್ಲಿ ಸೂಚಿಸಿದ ಸಹಾಯವಾಣಿಗೆ ಕರೆ ಮಾಡಲು ಪ್ರಯತ್ನಿಸಿದೆ. ಆದರೆ, ಯಾರೊಬ್ಬರೂ ಸ್ಪಂದಿಸಲಿಲ್ಲ. ಎರಡು ತಾಸಿಗೂ ಹೆಚ್ಚಿನ ಸಮಯ ನಾನು ಸಹಾಯದ ನಿರೀಕ್ಷೆಯಿಂದ ಅಲ್ಲಿ ಕಾಯುತ್ತಿದ್ದೆ. ಆದರೆ ಅಧಿಕಾರಿಗಳಿಂದ ಯಾವುದೇ ಸಹಾಯ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ