ಸಕಾಲದಡಿ ಎಲ್ಲ ಸೇವೆ ಮುಂದುವರಿಕೆ
Team Udayavani, Aug 9, 2018, 6:00 AM IST
ಬೆಂಗಳೂರು: “ಸಕಾಲ’ದಡಿ ಸರ್ಕಾರಿ ನೌಕರರು, ಸಿಬ್ಬಂದಿಗೆ ಸಂಬಂಧಪಟ್ಟ 18 ಸೇವೆಗಳನ್ನು ಕೈಬಿಡುವ ಪ್ರಸ್ತಾವಕ್ಕೆ ನೌಕರರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ “ಸಕಾಲ’ದಡಿ ಸದ್ಯ ಜಾರಿಯಲ್ಲಿರುವ ಎಲ್ಲಾ ಸೇವೆಗಳನ್ನು ಮುಂದುವರಿಸಲು ಸರ್ಕಾರ ಮುಂದಾಗಿದೆ.
ಈ ನಡುವೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗವು ಬುಧವಾರ ಸಂಜೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿ “ಸಕಾಲ’ದಡಿ ಸದ್ಯ ಸರ್ಕಾರಿ ನೌಕರರಿಗೆ ಕಲ್ಪಿಸಿರುವ ಸೇವೆಗಳನ್ನು ಮುಂದುವರಿಸುವಂತೆ ಮನವಿ ಮಾಡಿದೆ. ಇದಕ್ಕೆ ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂಘಕ್ಕೆ ಸಮಾಧಾನ ತಂದಿದೆ.
ಹಾಗಾಗಿ ವೇತನ ವಿತರಣೆ, ವಾರ್ಷಿಕ ಬಡ್ತಿ ಮಂಜೂರಾತಿ, ಪ್ರವಾಸ ಭತ್ಯೆ, ವೈದ್ಯಕೀಯ ವೆಚ್ಚ ಮರುಪಾವತಿ, ಬಾಕಿ ವೇತನ ಮಂಜೂರಾತಿ, ಪ್ರಭಾರ ಭತ್ಯೆ ಮಂಜೂರಾತಿ ಸೇರಿದಂತೆ ಸಕಾಲದಿಂದ ಹೊರಗಿಡಲು ಚಿಂತಿಸಲಾಗಿದ್ದ 18 ಸೇವೆಗಳು ಸಕಾಲದಲ್ಲೇ ಉಳಿಯುವ ಆಶಾಭಾವನೆ ನೌಕರರಲ್ಲಿ ಮೂಡಿದೆ.
ನೌಕರರು ಬಯಸಿದರೆ ಸೇವೆ ಮುಂದುವರಿಕೆ
ಸರ್ಕಾರಿ ನೌಕರರಿಗೆ ಸಂಬಂಧಪಟ್ಟಂತೆ “ಸಕಾಲ’ದಡಿ ಕಲ್ಪಿಸಿರುವ ಸೇವೆಗಳ ಪೈಕಿ ಆಯ್ದ ಸೇವೆಗಳನ್ನು ಕೈಬಿಡುವ ಬಗ್ಗೆ ನೌಕರರ ಸಂಘಗಳೊಂದಿಗೆ ಚರ್ಚಿಸಿ ಒಪ್ಪಿದರಷ್ಟೇ ಈ ಬಗ್ಗೆ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಆಯ್ದ ಸೇವೆಗಳು ಅಗತ್ಯವಿದ್ದು, ಮುಂದುವರಿಸುವಂತೆ ನೌಕರರ ಸಂಘಗಳು ಕೋರಿದರೆ ಮುಂದುವರಿಸಲಾಗುವುದು. ನೌಕರರ ಸಂಘಗಳು ಒಪ್ಪದೆ ಯಾವ ಸೇವೆಯನ್ನೂ ಕೈಬಿಡುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ “ಉದಯವಾಣಿ’ಗೆ ತಿಳಿಸಿದರು.
ಸಂಘದಿಂದ ಮನವಿ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಕೆ.ರಾಮು, ಸರ್ಕಾರಿ ನೂತನ ಪಿಂಚಣಿ ಯೋಜನೆ ಅಡಿಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗ ಸೇರಿದಂತೆ ಇತರೆ ಪದಾಧಿಕಾರಿಗಳು ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾಗಿ “ಸಕಾಲ’ದಲ್ಲಿರುವ ಸೇವೆಗಳನ್ನು ಮುಂದುವರಿಸುವಂತೆ ಮನವಿ ಮಾಡಿದರು.
ಸರ್ಕಾರಿ ನೌಕರರಿಗೆ ಸಂಬಂಧಪಟ್ಟಂತೆ “ಸಕಾಲ’ದಡಿ ಕಲ್ಪಿಸಿರುವ ಸೇವೆಗಳನ್ನು ಮುಂದುವರಿಸುವಂತೆ ಕೋರಿ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿಗಳು ಸದ್ಯದಲ್ಲೇ ಸಂಘದ ಪ್ರಮುಖರ ಸಭೆ ಕರೆದು ಚರ್ಚಿಸುವುದಾಗಿ ಭರವಸೆ ನಿಡಿದ್ದಾರೆ ಎಂದು ಎಚ್.ಕೆ.ರಾಮು ಹೇಳಿದರು.
ರಾಜ್ಯ ಸರ್ಕಾರಿ ನೌಕರರು, ಸಿಬ್ಬಂದಿಗೆ ಸಂಬಂಧಪಟ್ಟಂತೆ 21 ಸೇವೆಗಳನ್ನು “ಸಕಾಲ’ ವ್ಯಾಪ್ತಿಗೆ 2011ರಲ್ಲೇ ಅಳವಡಿಸಲಾಗಿತ್ತು.
ಈ ಪೈಕಿ ಆಯ್ದ 18 ಸೇವೆಗಳನ್ನು “ಸಕಾಲ’ದಿಂದ ಕೈಬಿಡುವ ಪ್ರಯತ್ನ ನಡೆದಿತ್ತು. ಈ ಕುರಿತು “ಉದಯವಾಣಿ’ ಆ.6ರಂದು “ಸರ್ಕಾರಿ ಸಿಬ್ಬಂದಿ ಸಕಾಲಕ್ಕೆ ಸಂಚಕಾರ’ ತಲೆಬರಹದಡಿ ವಿಶೇಷ ವರದಿ ಪ್ರಕಟಿಸಿತ್ತು. ಇದು ಸರ್ಕಾರಿ ನೌಕರರ ವರ್ಗದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ