Arrested: ಜಿಂಕೆ ಕೊಂಬು, ಆನೆದಂತ, 2 ತಲೆ ಹಾವು ಮಾರಾಟ; ಐವರ ಸೆರೆ
Team Udayavani, Nov 8, 2023, 9:58 AM IST
ಬೆಂಗಳೂರು: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಎರಡು ತಲೆಯ ಹಾವುಗಳು, ಜಿಂಕೆ ಕೊಂಬು ಮತ್ತು ಆನೆಯ ದಂತ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರ್, ರಂಗಸ್ವಾಮಿ, ಲೋಕೇಶ್, ಶೇಖರ್ ಹಾಗೂ ರೈಮಂಡ್ ಬಂಧಿತರು. ಆರೋಪಿಗಳಿಂದ 10 ಲಕ್ಷ ರೂ. ಮೌಲ್ಯದ ಎರಡು ತಲೆಯ ಎರಡು ಹಾವುಗಳು, 12 ಲಕ್ಷ ರೂ. ಮೌಲ್ಯದ 12 ಜಿಂಕೆ ಕೊಂಬುಗಳು ಹಾಗೂ 5 ಲಕ್ಷ ರೂ. ಮೌಲ್ಯದ ಆನೆ ದಂತ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾರಾಟಕ್ಕೆ ಬಂದಾಗ ಬಂಧಿಸಲಾಗಿದೆ ಎಂದುಪೊಲೀಸರು ಹೇಳಿದರು. ಜಿಂಕೆ ಕೊಂಬುಗಳನ್ನು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಭಾಗದಲ್ಲಿ ವ್ಯಕ್ತಿಯೊಬ್ಬರಿಂದ ಖರೀದಿಸಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದರು. ಇನ್ನು ಮೈಸೂರು-ಚಾಮರಾ ಜನಗರ ಜಿಲ್ಲೆ ಗಡಿಭಾಗದಲ್ಲಿ ಆನೆ ದಂತ ತಂದಿರುವುದಾಗಿ ಮಾಹಿತಿ ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.