ಮರಳು ನೀತಿ ಸರಳೀಕರಣಕ್ಕೆ ಅಸ್ತು
Team Udayavani, Nov 10, 2017, 6:00 AM IST
ಬೆಂಗಳೂರು: ರಾಜ್ಯದಲ್ಲಿನ ಮರಳು ಕೊರತೆ ಸರಿದೂಗಿಸಲು ಎಂ. ಸ್ಯಾಂಡ್ ನೀತಿ ಸರಳೀಕರಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕಾರ್ಯಪಡೆಯ ಬದಲಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಕಾರ್ಯಪಡೆ ರಚಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಜಿಲ್ಲಾಧಿಕಾರಿಗಳ ನೇತೃತ್ವದ ಕಾರ್ಯಪಡೆಯ ಮುಂದೆ ಬಾಕಿ ಇರುವ ಸಾವಿರಾರು ಅರ್ಜಿಗಳ ವಿಲೇವಾರಿ ರಾಜ್ಯ ಮಟ್ಟದ ಕಾರ್ಯ ಪಡೆ ಮಾಡಲಿದೆ ಎಂದರು.
ಕರಾವಳಿಯ 3 ಜಿಲ್ಲೆಗಳ ಮರಳು ನೀತಿ ಸಹಿತ ಎಲ್ಲ ಜಿಲ್ಲಾ ಮರಳು ವಹಿವಾಟು ಹಾಗೂ ವಿದೇಶದಿಂದ ಆಮದು ಮಾಡಿ ಕೊಳ್ಳುವ ಮರಳು ವ್ಯಾಪಾರಕ್ಕೂ ನೂತನ ನಿಯಮದಲ್ಲಿ ಮಾರ್ಪಾಡು ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದರು.
ಸಾಂಪ್ರದಾಯಿಕವಾಗಿ ಮರಳುಗಾರಿಕೆ ಮಾಡುವವರ ಗುತ್ತಿಗೆ ಅವಧಿಯನ್ನು ನವೀಕರಣ ಮಾಡಿಕೊಳ್ಳಲು 3 ತಿಂಗಳ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ವಿದೇಶಗಳಿಂದ ಮರಳು ಆಮದಿಗೆ ಕಾನೂನಿನಲ್ಲಿ ತಿದ್ದುಪಡಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ