ಅಧಿಕಾರಿ ವಾಹನಗಳ ಮೇಲೆ ಸೇ ನೋ ಡ್ರಗ್ಸ್‌


Team Udayavani, Sep 7, 2018, 12:18 PM IST

adikari.jpg

ಬೆಂಗಳೂರು: ಮಾದಕ ವಸ್ತು ಮಾರಾಟ ದಂಧೆಯನ್ನು ಕೇವಲ ಕಾನೂನು ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ಅದಕ್ಕಿಂತ ಮಖ್ಯವಾಗಿ ಜನಜಾಗೃತಿ ಅಗತ್ಯ ಎಂಬ ನಿರ್ಧಾರಕ್ಕೆ ಬಂದಿರುವ ಗೃಹ ಇಲಾಖೆ ಮತ್ತು ಬೆಂಗಳೂರು ನಗರ ಪೊಲೀಸರು ಇದೀಗ ಜಾಗೃತಿ ಅಭಿಯಾನಕ್ಕೆ ಮುಂದಾಗಿದೆ.

ವಿಶೇಷವೆಂದರೆ ಸ್ವತಃ ಗೃಹ ಸಚಿವರೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ತಮ್ಮ ಕಾರಿನ ಮೇಲೆ “ಲವ್‌ ಯು ಲೈಫ್’ ಮತ್ತು “ಸೇ ನೋ ಡ್ರಗ್ಸ್‌’ ಎಂಬ ಘೋಷವಾಕ್ಯ ಇರುವ ಸ್ಟಿಕ್ಕರ್‌ ಹಾಕಿಕೊಂಡಿದ್ದಾರೆ. ಅಲ್ಲದೆ, ಪೊಲೀಸ್‌ ಇಲಾಖೆಯ ಹೊಯ್ಸಳ ಸೇರಿ ಎಲ್ಲ ವಾಹನಗಳ ಮೇಲೂ ಈ ಸ್ಟಿಕ್ಕರ್‌ ಅಂಟಿಸಿ ಅಭಿಯಾನ ಆರಂಭಿಸಲಾಗಿದೆ.

ಜತೆಗೆ, ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ಸಂಘಟನೆಗಳ ಜತೆ ಚರ್ಚೆ ನಡೆಸಿರುವ ಪೊಲೀಸರು ಈ ಅಭಿಯಾನಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದ್ದು, ನಿಮ್ಮ ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಮಾರಾಟಗಾರರು ಹಾಗೂ ವ್ಯಸನಿಗಳ ಬಗ್ಗೆ ಮಾಹಿತಿ ಇದ್ದರೆ ಟೋಲ್‌ ಫ್ರೀ ನಂಬರ್‌ “1908’ಗೆ ಕರೆ ಮಾಡಿ ಮಾಹಿತಿ ನೀಡುವಂತೆಯೂ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು, ಸಾಮಾನ್ಯವಾಗಿ ಪ್ರತಿವರ್ಷ ಬಿತ್ತಿಪತ್ರಗಳ ಮೂಲಕ ಜಾಗೃತಿ ಅಭಿಯಾನ ಮಾಡಲಾಗುತ್ತಿತ್ತು. ಈ ವರ್ಷ ವಿಶೇಷವಾಗಿ ಜಾಗೃತಿ ಮೂಡಿಸಲು ಮುಂದಾಗಿದ್ದು, ವಾಹನಗಳ ಮೇಲೆ ಅಂಟಿಸುವ ಸ್ಟಿಕ್ಕರ್‌ಗಳನ್ನು ವಿತರಿಸಲಾಗಿದೆ.

ಇವುಗಳನ್ನು ಪೊಲೀಸರು ಮಾತ್ರವಲ್ಲದೆ, ಸ್ವಯಂ ಪ್ರೇರಿತವಾಗಿ ಸಾರ್ವಜನಿಕರು ಕೂಡ ತಮ್ಮ ವಾಹನಗಳಿಗೆ ಅಂಟಿಸಿಕೊಂಡು ಅಭಿಯಾನಕ್ಕೆ ಸಹಕಾರ ನೀಡಬಹುದು. ಈ ನಿಟ್ಟಿನಲ್ಲಿ ಕೆಲಸ ಸಂಘ, ಸಂಸ್ಥೆಗಳು ಮುಂದೆ ಬಂದಿವೆ. ಜತೆಗೆ ಸಾರ್ವಜನಿಕ ಸಾರಿಗೆ ವಾಹನಗಳ ಮೇಲೂ ಈ ಸ್ಟಿಕ್ಕರ್‌ಗಳನ್ನು ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. 

ಕೈ ಬ್ಯಾಂಡ್‌ಗಳು: ಶಾಲಾ-ಕಾಲೇಜುಗಳಲ್ಲಿ ಅಭಿಯಾನ ಆರಂಭಿಸಿರುವ ಪೊಲೀಸರು ಎಲ್ಲ ವಿದ್ಯಾರ್ಥಿಗಳಿಗೆ ಈ ಹ್ಯಾಂಡ್‌ ಬ್ಯಾಂಡ್‌ಗಳನ್ನು ವಿತರಿಸಲಾಗುತ್ತಿದೆ. ಈ ಬ್ಯಾಂಡ್‌ಗಳಲ್ಲಿ ಲವ್‌ ಯುವರ್‌ ಲೈಫ್, ಸೇ ನೋ ಡ್ರಗ್ಸ್‌ ಎಂಬ ಘೋಷವಾಕ್ಯಗಳೊಂದಿಗೆ ಟೋಲ್‌ ಫ್ರೀ ನಂಬರ್‌ 1908 ಕೂಡ ಇರುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಲಾಗುವುದು.

ರೇಡಿಯೋ ಜಿಂಗಲ್ಸ್‌: ನಗರದ 10 ಎಫ್ಎಂ ರೇಡಿಯೋಗಳಲ್ಲಿ ಮಾದಕ ವಸ್ತು ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಪ್ರತಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೇಳೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಅಭಿಯಾನದ ಆಡಿಯೋ ತುಣುಕುಗಳು ಪ್ರಸಾರ ಮಾಡಲಾಗುತ್ತದೆ.

ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ: ನಗರ ಪೊಲೀಸ್‌ ಆಯುಕ್ತರೇ ಖುದ್ದು ನಗರದ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ನಡೆಯುವ ಅಭಿಯಾನಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಾತ್ಯಕ್ಷಿಕೆ ಮೂಲಕ ಮಾದಕ ವಸ್ತು ಸೇವನೆಯಿಂದ ಏನೇಲ್ಲಾ ಅನಾಹುತ ಸಂಭವಿಸುತ್ತವೆ. ಆರೋಗ್ಯದ ಮೇಲಿನ ಪರಿಣಾಮಗಳು ಹಾಗೂ ತಪ್ಪು ಮಾಡಿದರೆ ಎಷ್ಟು ಪ್ರಮಾಣದಲ್ಲಿ ಶಿಕ್ಷೆ ಹಾಗೂ ದಂಡದ ಮೊತ್ತ ಎಷ್ಟು ಎಂಬುದನ್ನು ತಿಳಿಸುತ್ತಿದ್ದಾರೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಯಾನ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು “ಉದಯವಾಣಿ’ಗೆ ವಿವರಿಸಿದರು.

ಪಬ್‌ ಮತ್ತು ಬಾರ್‌ಗಳಲ್ಲಿ ನೋಟಿಸ್‌: ನಗರದಲ್ಲಿರುವ ಪಬ್‌ ಮತ್ತು ಬಾರ್‌ಗಳಲ್ಲಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಪ್ರಮಾಣ ಹೆಚ್ಚಾಗಿದೆ ಎಂಬ ಮಾಹಿತಿಯಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಬ್‌ ಮತ್ತು ಬಾರ್‌ಗಳಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಭಿತ್ತಿಪತ್ರ ಅಂಟಿಸಲಾಗುವುದು. ಮಾದಕ ವಸ್ತು ಮಾರಾಟ ಮಾಡಿದರೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 2 ಲಕ್ಷ ರೂ. ದಂಡ. ಸೇವಿಸಿದರೆ 1 ವರ್ಷ ಶಿಕ್ಷೆ, 20 ಸಾವಿರ ದಂಡ ಎಂಬ ಮಾಹಿತಿಯನ್ನೂ ಪ್ರಕಟಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಸಾರ್ವಜನಿಕ ಜಾಗೃತಿ: ಸ್ಟಿಕ್ಕರ್‌ ಜೊತೆಗೆ ರೇಡಿಯೋ ಜಿಂಗಲ್ಸ್‌, ಕಿರುಚಿತ್ರಗಳು, ಹಾಡುಗಳು, ಬೀದಿ ನಾಟಕಗಳು, ಕೈ ಬ್ಯಾಂಡ್‌ಗಳು. ಜತೆಗೆ ಇದಕ್ಕಾಗಿಯೇ ವಿಶೇಷ ವಾಹನ ಕೂಡ ಸಿದ್ಧವಾಗಿದ್ದು, ನಗರದೆಲ್ಲೆಡೆ ಸಾರ್ವಜನಿಕವಾಗಿ ಜಾಗೃತಿ ಮೂಡಿಸಲಾಗುವುದು. ಒಂದೂವರೆ ನಿಮಿಷಗಳ ಕಿರುಚಿತ್ರಗಳನ್ನು ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರಸಾರ ಮಾಡುವಂತೆ ಮಾಲ್‌ಗ‌ಳ ಮಾಲೀಕರಿಗೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.