ಹಿಂದೂ ವಿರೋಧಿ ಅಂತಾರೆ!


Team Udayavani, Jul 18, 2019, 3:08 AM IST

hindu-vi

ಬೆಂಗಳೂರು: “ಒಂದು ರಸ್ತೆಯಲ್ಲಿ ಒಂದು ಕಡೆ ಮಾತ್ರ ಗಣಪತಿ ಪ್ರತಿಷ್ಠಾಪನೆ ಮಾಡುವಂತೆ ತಿಳಿಸಲು ಹೋದರೆ, ನಮ್ಮನ್ನೇ “ಹಿಂದೂ ವಿರೋಧಿಗಳು’ ಎನ್ನುತ್ತಾರೆ’ ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ವಿಷಾದ ವ್ಯಕ್ತಪಡಿಸಿದರು.

ಮಲ್ಲೇಶ್ವರದ ನಗರ ಆರೋಗ್ಯ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಗುರುವಾರ ಪರಿಸರ ಜಾಗೃತಿ ಮೂಡಿಸಲು ಬಿಬಿಎಂಪಿ ಹಮ್ಮಿಕೊಂಡಿದ್ದ ಶಾಲಾ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ಬಾರಿ ಗಣೇಶ ಚತುರ್ಥಿ ವೇಳೆ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ’ ಎಂದು ಶಿಕ್ಷಕರು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಮೇಯರ್‌, “ಮನವಿ ಮಾಡಿದರೆ ನಮ್ಮನ್ನು ಹಿಂದೂ ವಿರೋಧಿಗಳೆಂದು ಬಿಂಬಿಸುತ್ತಾರೆ. ಮಣ್ಣಿನ ಗಣಪತಿಯೂ ಶ್ರೇಷ್ಠ ಎನ್ನುವುದನ್ನು ಸಾರ್ವಜನಿಕರೇ ತಿಳಿದುಕೊಳ್ಳಬೇಕು. ಅರಿವು ಮೂಡಿಸುವ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

ಪರಿಸರ ಸಂರಕ್ಷಣೆ, ನೀರಿನ ಮಿತ ಬಳಕೆ, ಪ್ಲಾಸ್ಟಿಕ್‌ ಬಳಕೆ ನಿಷೇಧ, ಪಿಒಪಿ ಗಣೇಶ ಮೂರ್ತಿ ಬದಲು ಮಣ್ಣಿನ ಮೂರ್ತಿ ಬಳಕೆ ಹಾಗೂ ಕಸ ವಿಂಗಡಣೆ ಮಾಡುವ ಬಗ್ಗೆ ನಿತ್ಯ ಎರಡು ನಿಮಿಷಗಳ ಕಾಲ ಶಾಲೆಗಳಲ್ಲಿ ಅರಿವು ಮೂಡಿಸಬೇಕು. ಆಗ ಮಕ್ಕಳು ಇದನ್ನು ಪಾಲಿಸುತ್ತಾರೆ. ಉಳಿದವರಿಗೂ ತಿಳಿಸುತ್ತಾರೆ’ ಎಂದರು.

ಈ ಅಂಶಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಹೀಗಾಗಿ, ಎಲ್ಲ ಶಾಲಾ ಮಕ್ಕಳ ಸಹಕಾರ ಅವಶ್ಯಕತೆಯಿದೆ. ಪಾಲಿಕೆಯ ಪಶ್ಚಿಮ ವಲಯದಲ್ಲಿ 33 ಬಿಬಿಎಂಪಿ ಹಾಗೂ ಸುಮಾರು 140 ಖಾಸಗಿ ಶಾಲೆಗಳಿದ್ದು, ಎಲ್ಲರೂ ಜಾಥಾದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿದರು.

ಬಿಬಿಎಂಪಿ ವತಿಯಿಂದ ನಗರದ ಎಂಟು ವಲಯಗಳಲ್ಲೂ ಜಾಥಾ ಆಯೋಜಿಸಲಾಗುತ್ತಿದೆ. ಈ ಸಂಬಂಧ ದಕ್ಷಿಣ ವಲಯದಲ್ಲಿ ಜು.20ರಂದು ಎಲ್ಲ ಶಾಲಾ ಮಕ್ಕಳ ಸಹಯೋಗದಲ್ಲಿ ಜಾಥಾ ನಡೆಯಲಿದೆ. ಅದೇ ರೀತಿ ಪಶ್ಚಿಮ ವಲಯದಲ್ಲಿ ಮುಂದಿನ ವಾರ ಜಾಥಾ ನಡೆಯಲಿದ್ದು, ಈ ಬಗ್ಗೆ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಕಳುಹಿಸಲಾಗುವುದು ಎಂದರು. ಸಭೆಯಲ್ಲಿ ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ, ಶಾಲಾ ಮುಖ್ಯಸ್ಥರು ಮತ್ತಿತರರು ಹಾಜರಿದ್ದರು.

ಶಾಲಾ ಮುಖ್ಯಸ್ಥರ ಗೈರು: ಮೇಯರ್‌ ಅಸಮಾಧಾನ: ಸಭೆಗೆ ನಿರೀಕ್ಷಿತ ಮಟ್ಟದಲ್ಲಿ ಶಾಲಾ ಮುಖ್ಯಸ್ಥರು ಹಾಜರಾಗದೆ ಇರುವುದಕ್ಕೆ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅಸಮಾಧಾನ ವ್ಯಕ್ತಪಡಿಸಿದರು. “ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕರೆದಿರುವ ಸಭೆಗೆ ಗೈರಾಗುವುದು ಸರಿಯಲ್ಲ. ಈ ಭಾಗದಲ್ಲಿ 140 ಖಾಸಗಿ ಶಾಲೆಗಳು ಮತ್ತು 33 ಬಿಬಿಎಂಪಿ ಶಾಲೆಗಳಿವೆ. ಬಹುತೇಕರು ಹಾಜರಾಗದೆ ಇರುವುದು ಬೇಸರ ತಂದಿದೆ ಮಾಡಿದೆ ಎಂದರು.

ಶಾಲಾ ಮುಖ್ಯಸ್ಥರು ನೀಡಿದ ಸಲಹೆಗಳು
-ಗಣಪತಿ ಹಬ್ಬಕ್ಕೆ ರಾಜಕೀಯ ನಾಯಕರು ಹಣ ನೀಡುವುದು ನಿಲ್ಲಲಿ, ಇದರಿಂದಲೇ ಪಿಒಪಿ ಗಣಪತಿ ಸಂಖ್ಯೆ ಹೆಚ್ಚಾಗುತ್ತಿದೆ. ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ ನೀಡಬೇಕು.

-ಶಾಲಾ ಮಕ್ಕಳಿಗೆ ಸ್ಟೀಲ್‌ ಬಾಟಲ್‌ ಮಾತ್ರ ಬಳಸುವಂತೆ ಸೂಚಿಸಬೇಕು.

-ಸ್ಲಂ ಪ್ರದೇಶಗಳಲ್ಲೂ ಪರಿಸರ ಜಾಗೃತಿ ಹೆಚ್ಚಾಗಬೇಕು.

-ಮಳೆ ನೀರು ಕೋಯ್ಲು ಪದ್ಧತಿ ಅಳವಡಿಸಿಕೆಗೆ ಅನುದಾನಿತ ಶಾಲೆಗಳಿಗೂ ಪಾಲಿಕೆ ನೆರವು ನೀಡಬೇಕು.

-ಪಿಒಪಿ ಗಣಪತಿ ಪೂಜೆಗೆ ಅಸಹಕಾರ ಚಳವಳಿ ರೀತಿಯಲ್ಲೇ ವಿರೋಧ ವ್ಯಕ್ತಪಡಿಸಬೇಕು.

ಪಿಒಪಿ ಗಣಪತಿ ಮೂರ್ತಿಗಳಿಗೆ ಕಡಿವಾಣ: ಗಣೇಶ ಚರ್ತುಥಿಯ ವೇಳೆ ಬಳಸುವ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ಗಣಪತಿ ಮೂರ್ತಿಗಳಿಂದ ಪರಿಸರದ ಮೇಲೆ ಉಂಟಾಗುವ ಸಮಸ್ಯೆಗಳನ್ನು ತಪ್ಪಿಸುವ ಉದ್ದೇಶದಿಂದ ಬಿಬಿಎಂಪಿ ಈಗಲಿಂದಲೇ ಕಾರ್ಯಪ್ರವೃತ್ತವಾಗಿದೆ. ನಗರದ ಹೊರವಲಯಗಳಿಂದ ಬರುವ ಪಿಒಪಿ ಗಣಪತಿ ಮೂರ್ತಿಗಳಿಗೆ ಕಡಿವಾಣ ಹಾಕುವುದಕ್ಕೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಈ ನಿಟ್ಟಿನಲ್ಲಿ ನಿರ್ಮಾಣ ಹಂತದಲ್ಲೇ ಪಿಒಪಿ ತಾಯರಿಕೆಯ ಮೇಲೆ ಬಿಬಿಎಂಪಿ ಕಣ್ಣಿಟ್ಟಿದೆ. ಬುಧವಾರ ಪಾಲಿಕೆ ಆರೋಗ್ಯಾಧಿಕಾರಿ ಮನೋರಂಜನ್‌ ಹೆಗ್ಡೆ ನೇತೃತ್ವದಲ್ಲಿ ಮೂರು ತಂಡಗಳು ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಕುಂಬಳಗೊಡಿಗೆ ಭೇಟಿ ನೀಡಿದ್ದು, ಪಿಒಪಿ ಗಣಪತಿ ಮೂರ್ತಿಗಳನ್ನು ಯಾವುದೇ ಕಾರಣಕ್ಕೂ ನಗರದಲ್ಲಿ ಮಾರಾಟ ಮಾಡಬಾರದು ಎಂದು ಮೂರ್ತಿ ತಯಾರಕರಿಗೆ ಸೂಚಿಸಿದ್ದಾರೆ.

ಕುಂಬಳಗೊಡಿನಲ್ಲಿ ಈಗಾಗಲೇ ಒಂದು ಸಾವಿರ ಪಿಒಪಿ ಗಣಪತಿ ಮೂರ್ತಿಗಳು ತಯಾರಾಗಿವೆ. ಈ ಮೂರ್ತಿಗಳನ್ನು ನಗರಕ್ಕೆ ತರಬಾರದು. ತಂದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈಗ ಇರುವ ಪೊಲೀಸ್‌ ಚೆಕ್‌ ಪೋಸ್ಟ್‌ಗಳ ಮೂಲಕವೇ ಮೂರ್ತಿಗಳನ್ನು ನಗರದ ಒಳಗೆ ತೆಗೆದುಕೊಂಡು ಬರುವುದನ್ನು ತಡೆಯುವುದರ ಬಗ್ಗೆ ಚರ್ಚೆ ನಡೆದಿದೆ.

ಪೊಲೀಸ್‌, ಆರ್‌ಟಿಒ ಸೇರಿದಂತೆ ವಿವಿಧ ಇಲಾಖೆಗಳಿಗೆ ಪತ್ರ ಬರೆದು, ಪಿಒಪಿ ಗಣಪತಿ ಮೂರ್ತಿಗಳು ನಗರ ಪ್ರವೇಶಿಸದಂತೆ ತಡೆಯಲು ಸಹಕರಿಸುವಂತೆ ಮನವಿ ಮಾಡಲಾಗುವುದು ಎಂದು ಆರೋಗ್ಯಾಧಿಕಾರಿ ಮನೋರಂಜನ್‌ ಹೆಗ್ಡೆ ತಿಳಿಸಿದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.