ಎಸ್ಸಿ,ಎಸ್ಟಿ ಮಕ್ಕಳಿಗೆ 5 ಮೊಟ್ಟೆ…ಉಳಿದ ಮಕ್ಕಳಿಗೆ 2 ಮೊಟ್ಟೆ…!
Team Udayavani, Jun 8, 2017, 12:55 PM IST
ವಿಧಾನಸಭೆ: ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳಿಗೆ ಐದು ಮೊಟ್ಟೆ, ಇನ್ನುಳಿದ ಜಾತಿಯ ಮಕ್ಕಳಿಗೆ 2 ಮೊಟ್ಟೆ. ಏನ್ ಸರ್ಕಾರಾ ರೀ ಇದು? ಎಂಥಾ ಸಮಾಜ ನಿರ್ಮಾಣ ಮಾಡಲು ಹೊರಟಿದೆ? ಮಕ್ಕಳ ಮನಸ್ಸಿನಲ್ಲೂ ಜಾತಿ ಬಿತ್ತುವುದಕ್ಕೆ ಇದಕ್ಕಿಂತ ಬೇರೆ ಯೋಜನೆ ಬೇಕಾ?ಬಿಜೆಪಿ ಸದಸ್ಯ ಡಿ.ಎನ್.ಜೀವರಾಜ್ ರಾಜ್ಯ ಸರ್ಕಾರವನ್ನು ಹೀಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ನಡೆಯಿತು.
ಬೇಡಿಕೆಗಳ ಮೇಲಿನ ಚರ್ಚೆ ವೇಳೆ ರಾಜ್ಯದ ಅಂಗನವಾಡಿಗಳಲ್ಲಿನ ಸ್ಥಿತಿಗತಿ ಕುರಿತು ಬೆಳಕು ಚೆಲ್ಲಿದ ಜೀವರಾಜ್ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮತ್ತು ಉತ್ತಮ ಆರೋಗ್ಯ ನೀಡಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು. ಅವರಲ್ಲಿ ರಾಷ್ಟ್ರೀಯತೆ, ಒಗ್ಗಟ್ಟು ಮತ್ತು ದೇಶಭಕ್ತಿ,ಉತ್ತಮ ಸಮಾಜ ನಿರ್ಮಾಣದ ಗುಣಗಳನ್ನು ಬೆಳೆಸಬೇಕು.
ಆದರೆ, ರಾಜ್ಯ ಸರ್ಕಾರ ಬಡವರು ಮತ್ತು ಶ್ರೀಮಂತರ ಮಕ್ಕಳ ಅಂತರ ಕಡಿಮೆ ಮಾಡುವ ಅಂಗನವಾಡಿ ಕೇಂದ್ರಗಳಲ್ಲಿ ಇದೀಗ ಜಾತಿ ವೈಷಮ್ಯ ಬಿತ್ತುವ ಕೆಲಸ ಮಾಡುತ್ತಿದೆ. ಇಲ್ಲಿಯೂ ವೋಟಿನ ರಾಜಕಾರಣ ಮಾಡುತ್ತಿದೆ. ಅಂಗನವಾಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳಿಗೆ ವಾರಕ್ಕೆ 5 ಮೊಟ್ಟೆ ಮತ್ತು ಉಳಿದ ಜಾತಿಯ ಮಕ್ಕಳಿಗೆ 2 ಮೊಟ್ಟೆ ಕೊಡಲು ಹೊರಟಿದೆ. ಇದರಿಂದ ಮಕ್ಕಳ ಮನಸ್ಸಿನಲ್ಲಿ ಜಾತಿ ವೈಷಮ್ಯ ಬೆಳೆಯುತ್ತದೆ ಕೂಡಲೇ ಇದನ್ನು ಹಿಂದಕ್ಕೆ ಪಡೆದು ಸಮಾನವಾಗಿ ಅಹಾರ ವಿತರಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ