ಎಸ್ಸಿ ಎಸ್ಟಿ ಮುಂಬಡ್ತಿ ಪ್ರಕರಣ:ಆ 14 ಕ್ಕೆ ವಿಚಾರಣೆ ಮುಂದೂಡಿಕೆ
Team Udayavani, Jul 28, 2018, 6:55 AM IST
ಬೆಂಗಳೂರು:ಎಸ್ಸಿ ಎಸ್ಟಿ ನೌಕರರಿಗೆ ಮುಂಬಡ್ತಿ ಸಂಬಂಧ ರಾಜ್ಯ ಸರ್ಕಾರದ ನೂತನ ಕಾಯ್ದೆ ಅನುಷ್ಠಾನಗೊಳಿಸುವ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಒಂದು ವಾರ ಸಮಯ ನೀಡಿದ್ದು, ಆಗಸ್ಟ್ 14 ಕ್ಕೆ ವಿಚಾರಣೆ ಮುಂದೂಡಿದೆ.
ಬಿ.ಕೆ. ಪವಿತ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ 2017 ರ ಫೆಬ್ರವರಿ 9 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿಗೆ ಪರ್ಯಾಯವಾಗಿ ಎಸ್ಸಿ ಎಸ್ಟಿ ನೌಕರರ ಹಿತ ಕಾಯಲು 2018 ಜೂನ್ ತಿಂಗಳಲ್ಲಿ ಹೊಸ ಕಾಯ್ದೆ ತಂದಿದ್ದು, ರಾಜ್ಯ ಸರ್ಕಾರದ ನೂತನ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದರಿಂದ ರಾಜ್ಯ ಸರ್ಕಾರ ಕಾಯ್ದೆ ಅನುಷ್ಠಾನ ಗೊಳಿಸಲು ಮುಂದಾಗಿತ್ತು.
ರಾಜ್ಯ ಸರ್ಕಾರದ ಹೊಸ ಕಾಯ್ದೆಯನ್ನು ಅಹಿಂಸಾ (ಅಲ್ಪ ಸಂಖ್ಯಾತ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ) ಸಂಘಟನೆಯವರು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಆದೇಶ ಪಾಲಿಸದೇ ರಾಜ್ಯ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ. ಅಲ್ಲದೇ ಹೊಸ ಕಾಯ್ದೆ ತಂದಿರುವುದು ಕಾನೂನು ಬಾಹಿರ ಎಂದು ಮೇಲ್ಮನವಿ ಸಲಿಸಿದ್ದರು.
ರಾಜ್ಯ ಸರ್ಕಾರವೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದರಿಂದ ಈ ಕುರಿತು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಆಗಸ್ಟ್ 14 ಕ್ಕೆ ಮುಂದೂಡಿದೆ.ಈ ನಡುವೆ ರಾಜ್ಯ ಸರ್ಕಾರ ನೂತನ ಕಾಯ್ದೆಯನ್ವಯ ಎಸ್ಸಿ ಎಸ್ಟಿ ನೌಕರರಿಗೆ ಯಾವುದೇ ಮುಂಬಡ್ತಿ ನೀಡದಂತೆ ಮೌಖೀಕ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ