ಸರ ಮುಚ್ಚಿಡಲು ಸ್ಕಾರ್ಫ್ ವಿತರಣೆ


Team Udayavani, May 3, 2018, 10:49 AM IST

scraf.jpg

ಬೆಂಗಳೂರು: ಪಶ್ಚಿಮ ವಲಯದಲ್ಲಿ ಹೆಚ್ಚುತ್ತಿರುವ ಸರ ಕಳವು ಪ್ರಕರಣಗಳಿಂದ ಎಚ್ಚೆತ್ತ ಪೊಲೀಸರು ಚಿನ್ನಾಭರಣ ಧರಿಸಿ ಓಡಾಡುವ ಮಹಿಳೆಯರಿಗೆ ಕುತ್ತಿಗೆಗೆ ಧರಿಸುವ ಸ್ಕಾರ್ಫ್ ವಿತರಿಸಲು ಮುಂದಾಗಿದ್ದಾರೆ . 

ಚಿಕ್ಕಪೇಟೆ ಎಸಿಪಿ ನಿರಂಜನ್‌ ಅರಸ್‌ ಮತ್ತು ಉಪ್ಪಾರ ಪೇಟೆ ಪಿಐ ಉಮಾ ಮಹೇಶ್‌ ನೇತೃತ್ವದಲ್ಲಿ ಸ್ಕಾರ್ಫ್ ಸಿದ್ಧಪಡಿಸಲಾಗಿದೆ. ಸರ ಕಳವು ಹೆಚ್ಚಿರುವ ಜ್ಞಾನ ಭಾರತಿ, ಅನ್ನಪೂರ್ಣೇಶ್ವರಿ  ನಗರ, ಚಂದ್ರ ಲೇಔಟ್‌, ಕೆಂಗೇರಿ ಹಾಗೂ ಇತರೆ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಹೋಗುವ ಮಹಿಳೆಯರು ಹಾಗೂ ಚಿನ್ನಾ ಭರಣ ಧರಿಸಿ ಓಡಾಡುವ ಮಹಿಳೆಯರಿಗೆ ಸುಮಾರು 2 ಸಾವಿರ ಸ್ಕಾರ್ಫ್ ವಿತರಣೆ ಮಾಡಲಾಗುತ್ತದೆ.ಈ ಸ್ಕಾರ್ಫ್ ನಲ್ಲಿ ಬೆಂಗಳೂರು ನಗರ ಪೊಲೀಸರು, ಪಶ್ಚಿಮ ವಿಭಾಗ ಎಂದು ಮುದ್ರಿಸಲಾಗಿದೆ ಎಂದು ಡಿಸಿಪಿ ರವಿ ಡಿ. ಚನ್ನಣ್ಣನವರ್‌ ಹೇಳಿದ್ದಾರೆ.

ಸರಗಳ್ಳನ ಬಂಧನ: ಒಂಟಿ ಮಹಿಳೆಯರ ಸರ ಕಳವು ಮಾಡುತ್ತಿದ್ದ ಕುಖ್ಯಾತ ಸರ ಅಪಹರಣಕಾರ ಪಲ್ಸರ್‌ ಬಾಬು ಸಹಚರ ಕೊನೆಗೂ ಪೊಲೀಸರ ಬಲೆಗೆಬಿದಿದ್ದಾನೆ.

ಸಂತೋಷ್‌ (34) ಬಂಧಿತ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಒಂಟಿ  ಮಹಿಳೆಯರು ಹಾಗೂ ಮನೆ ಮುಂದೆ ರಂಗೋಲಿ
ಹಾಕುತ್ತಿದ್ದ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ತುಮಕೂರು ಮೂಲದ ಸಂತೋಷ್‌, ಕೆಲ ವರ್ಷಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದು, ಯಾವುದೇ ಕೆಲಸಸಿಗದೆ ಕುಖ್ಯಾತ  ಸರ ಅಪಹರಣಕಾರ ಪಲ್ಸರ್‌ ಬಾಬು ಜತೆ ಸೇರಿ ಸರ ಕದಿಯುತ್ತಿದ್ದ. ಒಂದೂವರೆ ವರ್ಷದ ಹಿಂದೆ ಪೊಲೀಸರು ಬಾಬುನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸಂತೋಷ್‌ ತಲೆಮರೆಸಿ ಕೊಂಡಿದ್ದ.

ಇತ್ತೀಚೆಗೆ ಪಶ್ಚಿಮ ವಲಯ ವಿಭಾಗದಲ್ಲಿ ಸರ ಅಪಹರಣ  ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ ಎಂದು ಪಶ್ಚಿಮ ವಿಭಾಗದಡಿ ಸಿಪಿ ರವಿ ಡಿ. ಚನ್ನಣ್ಣ ನವರ್‌ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮನೆ ಮಾಲೀಕರಿಗೇ ಮಾರಾಟ
ಆರೋಪಿ ನಗರದ ಹತ್ತಾರು ಬಡಾವಣೆಗಳಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಈ ವೇಳೆ ಕಳವು ಮಾಡುತ್ತಿದ್ದ ಚಿನ್ನ ದ ಸರಗಳನ್ನು ಹಣದ ಅಭಾವವಿದೆ ಎಂದು ಹೇಳಿ ಮನೆ ಮಾಲೀಕರಿಗೇ ಮಾರಾಟ ಮಾಡುತ್ತಿದ್ದ. ಒಂದು ವೇಳೆ ಖರೀದಿಗೆ ಹಿಂದೇಟು ಹಾಕಿದರೆ, ನನ್ನ ತಾಯಿ, ಪತ್ನಿ, ಮಕ್ಕಳು ಹಾಗೂ ಸಂಬಂಧಿಗಳಿಗೆ ಅನಾರೋಗ್ಯ ಎಂದು ಸುಳ್ಳು ಹೇಳಿ ಮಾರುತ್ತಿದ್ದ

ಕಳವು ಮಾಲು ಎಂದು ತಿಳಿಯದ ಮಾಲೀಕರು ಖರೀದಿಸುತ್ತಿದ್ದರು. ಅನಂತರ ಒಂದೆರಡು ದಿನ ಅಲ್ಲೇ ಇದ್ದು, ಏಕಾಏಕಿ ಮನೆ ಖಾಲಿ ಮಾಡಿ ಪರಾರಿಯಾಗುತ್ತಿದ್ದ. ಈ ರೀತಿ ಹಣಗಳಿಸಿ ಮೋಜು-ಮಸ್ತಿ ಜೀವನ ನಡೆಸುತ್ತಿದ್ದ. ಹೀಗಾಗಿ ಅವನು ವಾಸವಿದ್ದ ಕೆಲ ಮನೆಗಳ ಮಾಲೀಕರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

6 ಜನ ಚಿನ್ನಾಭರಣ ಕಳ್ಳರ ಸೆರೆ 
ರಾತ್ರಿ ಕನ್ನ ಕಳವು ಮತ್ತು ಬಸ್‌ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕದಿಯುತ್ತಿದ್ದ ಆರು ಮಂದಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಮಂಜ ಅಲಿಯಾಸ್‌ ತಿಟ್‌ ಮಂಜ (32), ಮಂಜು ಳಾ (35), ನಾಗಮ್ಮ (40), ವೆಂಕಟೇಶ್‌ (45), ರಾಕೇಶ್‌ (24) ಮತ್ತು ಭಿಯಾರಾಮ್‌ (25) ಬಂಧಿತರು. ಆರೋಪಿಗಳು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಹತ್ತಿ, ತಮ್ಮ ಮಕ್ಕಳನ್ನು ಮಹಿಳಾ ಹಾಗೂ ಪುರುಷ ಪ್ರಯಾಣಿಕರ ಪಕ್ಕಕೂರಿಸಿ ಗಮನ ಬೇರೆಡೆ ಸೆಳೆದು ಚಿನ್ನಾಭರಣ, ಪರ್ಸ್‌, ಇತರೆ ವಸ್ತುಗಳನ್ನು ಕಳವು ಮಾಡುತ್ತಿದ್ದರು. ಇವರ ಬಂಧನದಿಂದ 23 ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಗಳಿಂದ 32 ಲಕ್ಷ ರೂ. ಮೌಲ್ಯದ 1.017 ಕೆ.ಜಿ. ಚಿನ್ನ, 1.250 ಕೆ.ಜಿ. ಬೆಳ್ಳಿವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.