ಮದುವೆಗೆ ಸಂಬಂಧಿಕರನ್ನು ಆಮಂತ್ರಿಸಲು ತೆರಳುತ್ತಿದ್ದ ವ್ಯಕ್ತಿಗೆ ಶಾಲಾ ಬಸ್ ಡಿಕ್ಕಿ: ಸಾವು
Team Udayavani, Oct 31, 2019, 10:12 AM IST
ಬೆಂಗಳೂರು: ಮೊಮ್ಮಗನ ಮದುವೆಗೆ ಸಂಬಂಧಿಕರನ್ನು ಆಮಂತ್ರಿಸಲು ಹೋಗುತ್ತಿದ್ದ ನಂದಿನಿ ಲೇಔಟ್ನ ಬಸವರಾಜಯ್ಯ ಅವರಿಗೆ ಶಾಲಾ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ನ. 10ರಂದು ಮೊಮ್ಮಗನ ಮದುವೆ ಸಮಾರಂಭ ಇದ್ದ ಹಿನ್ನಲೆ ನೆಂಟರು, ಗೆಳೆಯರನ್ನು ಮದುವೆಗೆ ಆಹ್ವಾನಿಸಲು ಹೋಗಿದ್ದರು.
ಬೆಂಗಳೂರಿನ ಯಶವಂತಪುರ ಸರ್ಕಲ್ ಬಳಿ ಬಸವರಾಜಯ್ಯ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.
ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್