ವೈದ್ಯಕೀಯ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ


Team Udayavani, Jan 9, 2020, 3:08 AM IST

vydyakiay

ಬೆಂಗಳೂರು: ತ್ಯಾಜ್ಯ ವಿಲೇವಾರಿಗೆ ಕಗ್ಗಂಟಾಗಿರುವ ಹಾಗೂ ಪೌರಕಾರ್ಮಿಕರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿರುವ ಸ್ಯಾನಿಟರಿ ನ್ಯಾಪ್‌ಕಿನ್‌ ಹಾಗೂ ವೈದ್ಯಕೀಯ (ಮರು ಬಳಕೆ ಮಾಡಲು ಸಾಧ್ಯವಿಲ್ಲದ) ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪಾಲಿಕೆ ಮುಂದಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಗುರುತಿಸಿ, ಅನುಮತಿ ನೀಡಿರುವ ಸಂಸ್ಥೆಗೆ ತ್ಯಾಜ್ಯ ಸಂಸ್ಕ ರಣೆ ಅನುಮತಿ ನೀಡಲು ಪಾಲಿಕೆ ನಿರ್ಧರಿಸಿದೆ. ನಗರ ದಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಈಗಾಗಲೇ ಇರುವ ವಾಹನ ಗಳನ್ನೇ ಇದಕ್ಕೆ ಬಳಸಿಕೊಳ್ಳಲಿದೆ. ತ್ಯಾಜ್ಯ ಸಂಗ್ರಹಿಸಲು ಪೌರಕಾರ್ಮಿಕರಿಗೆ ಹಳದಿ ಬಣ್ಣದ ಬ್ಯಾಗ್‌ ಮತ್ತು ಸಲಕರಣೆ ನೀಡಲಾಗುತ್ತದೆ.

ಸಂಗ್ರಹವಾಗುವ ತ್ಯಾಜ್ಯವನ್ನು ಗುತ್ತಿಗೆದಾರರು ಎರಡನೇ ಹಂತದಲ್ಲಿ ತಮ್ಮ ವಾಹನಗಳ ಮೂಲಕ ವೈಜ್ಞಾನಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಸಂಸ್ಕರಣಾ ಘಟಕಕ್ಕೆ ಸಾಗಿಸಲಿದ್ದಾರೆ. ಸಂಗ್ರಹ, ಸಾಗಣೆ ಹಾಗೂ ವಿಲೇವಾರಿ ಎಲ್ಲವೂ ಸೇರಿ ಪ್ರತಿ ಕೆ.ಜಿಗೆ 60ರಿಂದ 70 ರೂ. ನಿಗದಿಯಾಗುವ ಸಾಧ್ಯತೆ ಇದೆ ಎಂದು ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಪಾಲಿಕೆ ಸ್ಯಾನಿಟರಿ ನ್ಯಾಪ್‌ಕಿನ್‌ ಹಾಗೂ ವೈದ್ಯಕೀಯ ತ್ಯಾಜ್ಯ ಸಂಗ್ರಹ ಮಾಡುವುದಕ್ಕೆ ಎಂಟೂ ವಲಯಗಳಲ್ಲಿ ಪ್ರತ್ಯೇಕ ಟೆಂಡರ್‌ ಕರೆಯ ಲಾಗಿದೆ. ಹಸಿ, ಒಣ ಹಾಗೂ ಅಪಾಯಕಾರಿ ತ್ಯಾಜ್ಯ ವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು ಎನ್ನುವ ನಿಯ ಮವಿದೆ. ಆದರೆ, ಪಾಲಿಕೆ ಸ್ಯಾನಿಟರಿ ನ್ಯಾಪ್‌ಕಿನ್‌ ಮತ್ತು ಅಪಾಯಕಾರಿ ತ್ಯಾಜ್ಯವನ್ನೂ ಹಸಿ ತ್ಯಾಜ್ಯ ದೊಂದಿಗೆ ಸಂಗ್ರಹಿಸುತ್ತಿತ್ತು. ಪ್ರತ್ಯೇಕವಾಗಿ ನೀಡುವಂತೆ ಜಾಗೃತಿ ಮೂಡಿಸಿದ್ದರೂ ಯಶಸ್ವಿಯಾಗಿರಲಿಲ್ಲ.

ಇದರ ಸಂಸ್ಕರಣೆ ಮಾಡುವುದರಲ್ಲೂ ಲೋಪ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅಪಾಯಕಾರಿ ತ್ಯಾಜ್ಯ ವಿಲೇವಾರಿಗೆ ಟೆಂಡರ್‌ ಕರೆಯಲಾಗಿದ್ದು, ತಾಂತ್ರಿಕ ಬಿಡ್‌ ಹಂತದಲ್ಲಿದೆ. ನಗರದ ಮನೆಗಳಲ್ಲಿ ಬಳಕೆಯಾ ಗುವ ಸ್ಯಾನಿಟರಿ ನ್ಯಾಪ್‌ಕಿನ್‌, ಸಿರಿಂಜ್‌, ರಕ್ತದ ಅಂಶವಿರುವ ಹತ್ತಿ ಹಾಗೂ ಬ್ಯಾಂಡೇಜ್‌ ಸೇರಿ ಎಲ್ಲ ರೀತಿಯ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪ್ರತ್ಯೇಕ ವಿಲೇವಾರಿ ಅಗತ್ಯ: ಮನೆಗಳಲ್ಲಿ ಸಂಗ್ರಹ ವಾಗುವ ವೈದ್ಯಕೀಯ ತ್ಯಾಜ್ಯವನ್ನು ಜಾಗರೂಕತೆ ಯಿಂದ ವಿಲೇವಾರಿ ಮಾಡಬೇಕು ಎನ್ನುತ್ತಾರೆ ಡಾ. ಪದ್ಮಾವತಿ. ಸಿರಿಂಜ್‌ನ ಸೂಜಿಯನ್ನು ಒಮ್ಮೆ ಬಳಸಿದ ಮೇಲೆ ಅದರ ಕ್ಯಾಪ್‌ ಹಾಕಲು ಪ್ರಯತ್ನಿಸಬಾರದು. ಈಗ ಮಧುಮೇಹಿಗಳಿಗೆ ಚುಚ್ಚು ಮದ್ದನ್ನು ಮನೆಗಳಲ್ಲೇ ನೀಡಲಾಗುತ್ತಿದೆ. ಸಿರಿಂಜ್‌ ಒಮ್ಮೆ ಬಳಸಿದ ಬಳಿಕ ಹಾಗೂ ವಿಲೇವಾರಿ ಮಾಡುವಾಗ ಎಚ್ಚರ ವಹಿಸಬೇಕು. ಇತ್ತೀಚೆಗೆ ಪೌರಕಾರ್ಮಿಕರು ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುತ್ತಾಗುತ್ತಿದ್ದು, ಪೌರಕಾರ್ಮಿಕರಿಗೂ ಸೋಂಕು ತಗುಲದ ರೀತಿ ವಿಲೇವಾರಿ ಮಾಡಬೇಕು ಎಂದು ಅವರು ಸಲಹೆ ನೀಡುತ್ತಾರೆ.

ಭೂ ಭರ್ತಿ ಮಾಡುವಂತಿಲ್ಲ: ಘನತ್ಯಾಜ್ಯ ನಿರ್ವಹಣೆ -2016ರ ನಿಯಮಾನುಸಾರ ಅಪಾಯಕಾರಿ ತ್ಯಾಜ್ಯ ವನ್ನು ಭೂ ಭರ್ತಿ ರೀತಿ ವಿಲೇವಾರಿ ಮಾಡುವಂತಿಲ್ಲ. ಈ ರೀತಿ ವಿಲೇವಾರಿ ಮಾಡುವುದರಿಂದ ಆ ಪ್ರದೇಶದ ಅಂತರ್ಜಲ ಕಲುಷಿತವಾಗುತ್ತದೆ. ಅಲ್ಲದೆ, ವಾಯು ಮಾಲಿನ್ಯಕ್ಕೂ ಇದು ಪರೋಕ್ಷವಾಗಿ ಕಾರಣವಾಗುತ್ತದೆ. ಅಪಾಯಕಾರಿ ತ್ಯಾಜ್ಯ ವಿಲೇವಾರಿಗೆ ಪರ್ಯಾಯ ಮಾರ್ಗ ರೂಪಿಸಿಕೊಳ್ಳದ ಕಾರಣ ಈ ತ್ಯಾಜ್ಯ ಪರೋಕ್ಷವಾಗಿ ಭೂ ಭರ್ತಿಯಾಗುತ್ತಿದೆ. ಪಾಲಿಕೆ ಈಗ ಎಚ್ಚೆತ್ತುಕೊಂಡಿದ್ದು, ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮುಂದಾಗಿದೆ.

ಪ್ರತ್ಯೇಕವಾದರೂ ಅಪಾಯವೇ!: ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹ ಮಾಡಿದರೂ ಕಟ್ಟುನಿಟ್ಟಿನ ಕ್ರಮ ಅನುಸರಿಸದೆ ಇದ್ದಲ್ಲಿ, ಮತ್ತೂಂದು ಸಮಸ್ಯೆಗೆ ನಾಂದಿಯಾಗಲಿದೆ. ಈಗ ಅಪಾಯಕಾರಿ ತ್ಯಾಜ್ಯ ಸಂಗ್ರಹಕ್ಕೆ ಪಾಲಿಕೆ ನಿರ್ದಿಷ್ಟ ನಿಯಮ ರೂಪಿಸಿಲ್ಲ. ಸಾರ್ವಜನಿಕರೂ ಈ ವಿಷಯದಲ್ಲಿ ಎಚ್ಚೆತ್ತುಕೊಂಡಿಲ್ಲ. ಸ್ಯಾನಿಟರಿ ನ್ಯಾಪ್‌ಕಿನ್‌ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಪೇಪರ್‌ನಲ್ಲಿ ಸುತ್ತಿ ನೀಡಬೇಕು. ನ್ಯಾಪ್‌ಕಿನ್‌ಗಳನ್ನು ಮರುದಿನವೇ ವಿಲೇವಾರಿ ಮಾಡುವ ಜವಾಬ್ದಾರಿ ಅಳವಡಿಸಿಕೊಂಡಲ್ಲಿ ಪೌರಕಾರ್ಮಿಕರು ಅಲರ್ಜಿ, ಚರ್ಮ ಸಮಸ್ಯೆ ಹಾಗೂ ಮಾನಸಿಕ ಕಿರಿಕಿರಿಗಳಿಂದ ತಪ್ಪಿಸಿಕೊಳ್ಳಲಿದ್ದಾರೆ.

ಅಪಾಯಕಾರಿ ತ್ಯಾಜ್ಯದಿಂದ ಆಗುವ ಸಮಸ್ಯೆ ತಡೆಗಟ್ಟಲು ಪಾಲಿಕೆ ಯೋಜನೆ ರೂಪಿಸಿದೆ. ಸ್ಯಾನಿಟರಿ ನ್ಯಾಪ್‌ಕಿನ್‌ ಹಾಗೂ ಸಿರಿಂಜ್‌, ರಕ್ತದ ಅಂಶವಿರುವ ಹತ್ತಿ ಹಾಗೂ ಬ್ಯಾಂಡೇಜ್‌ಗಳನ್ನು ಪ್ರತ್ಯೇಕವಾಗಿ ವಿಲೇವಾರಿ ಮಾಡಲಾಗುತ್ತದೆ.
-ರಂದೀಪ್‌, ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

* ಹಿತೇಶ್‌ ವೈ

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.