ವೆಲ್ಲಾರ ಜಂಕ್ಷನ್‌ ಬಳಿಯ ಮೆಟ್ರೋ ನಿಲ್ದಾಣಕ್ಕೆ ಕತ್ತರಿ?


Team Udayavani, Aug 14, 2019, 3:08 AM IST

VELLARA-JUNTION

ಬೆಂಗಳೂರು: ದಿನದಿಂದ ದಿನಕ್ಕೆ ವಿವಾದ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವೆಲ್ಲಾರ ಜಂಕ್ಷನ್‌ ಬಳಿಯ ಸುರಂಗ ಮಾರ್ಗದ ಮೆಟ್ರೋ ನಿಲ್ದಾಣವನ್ನು ಮರುವಿನ್ಯಾಸಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಚಿಂತನೆ ನಡೆಸಿದೆ. ಆಲ್‌ ಸೆಂಟ್ಸ್‌ ಚರ್ಚ್‌ ಆವರಣದ ನೆಲದಡಿ ನಿರ್ಮಾಣವಾಗಲಿರುವ ಮೆಟ್ರೋ ನಿಲ್ದಾಣದ ಉದ್ದಕ್ಕೆ ಕತ್ತರಿ ಹಾಕಲು ಸಾಧ್ಯವೇ ಎಂಬುದರ ಸಾಧಕ-ಬಾಧಕಗಳ ಚಿಂತನೆ ನಡೆದಿದೆ. ಈ ಮೂಲಕ ಚರ್ಚ್‌ ಆವರಣದಲ್ಲಿನ ಮರಗಳು ಸೇರಿದಂತೆ ಇತರೆ ಕಟ್ಟಡಗಳನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆದಿದೆ.

ಈ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್‌ ತಜ್ಞರು ನಿಲ್ದಾಣದ ವಿನ್ಯಾಸದಲ್ಲಿ ಮಾರ್ಪಾಡುಗಳನ್ನು ಮಾಡುವ ಪ್ರಯತ್ನ ನಡೆಸಿದ್ದಾರೆ. ಸಾಮಾನ್ಯವಾಗಿ ಸುರಂಗದಲ್ಲಿರುವ ಮೆಟ್ರೋ ನಿಲ್ದಾಣಗಳಿಗೆ ಹೋಲಿಸಿದರೆ, ಉದ್ದೇಶಿತ ವೆಲ್ಲಾರ ಜಂಕ್ಷನ್‌ ಬಳಿಯ ನಿಲ್ದಾಣದ ಉದ್ದವನ್ನು ಕನಿಷ್ಠ 25ರಿಂದ 30 ಮೀಟರ್‌ನಷ್ಟು ನಿಲ್ದಾಣದ ಉದ್ದವನ್ನು ಕಡಿಮೆಗೊಳಿಸುವ ಪ್ರಯತ್ನ ನಡೆದಿದೆ. ಆದರೆ, ಈ ಚಿಂತನೆ ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ಬಿಎಂಆರ್‌ಸಿಎಲ್‌ ಮೂಲಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿವೆ.

ಈಗಿರುವ ಸುರಂಗ ಮೆಟ್ರೋ ನಿಲ್ದಾಣಗಳ ಉದ್ದ 192 ಮೀ. ಇದರಲ್ಲಿ 135 ಮೀ. ಬರೀ ರೈಲು ನಿಲುಗಡೆಯಾಗುವ ಪ್ಲಾಟ್‌ಫಾರಂಗೆ ಸೀಮಿತವಾಗಿರುತ್ತದೆ. ಉಳಿದ 57 ಮೀ.ನಲ್ಲಿ ಎರಡೂ ಬದಿ ಆಕಸ್ಮಿಕ ಅಗ್ನಿ ಸಂಭವಿಸಿದಾಗ ಅಗ್ನಿಶಾಮಕ ದಳ ಸಿಬ್ಬಂದಿ ಓಡಾಡಲು ಜಾಗ ಮೀಸಲಿಡಲಾಗಿರುತ್ತದೆ. ಅಲ್ಲದೆ, ಎರಡೂ ಬದಿಯಲ್ಲಿ ಟನಲ್‌ ವೆಂಟಿಲೇಷನ್‌ ಸಿಸ್ಟ್‌ಂ (ಟಿವಿಎಸ್‌) ಅಳವಡಿಸಲಾಗಿರುತ್ತದೆ. ಇದು ಮೆಟ್ರೋ ಸುರಂಗದಲ್ಲಿ ಬೆಂಕಿಯನ್ನು ನಂದಿಸುವ ಹಾಗೂ ಆ ಬೆಂಕಿ ಉಗುಳುವ ಹೊಗೆಯನ್ನೂ ಹೊರಗಡೆ ಕೊಂಡೊಯ್ಯುವ ಕೆಲಸ ಮಾಡಲಿದೆ.

ಅಂಗವಿಕಲ ಆಗಲಿದೆ!: ವಿನ್ಯಾಸದಲ್ಲಿ ಮಾರ್ಪಾಡು ಮಾಡಿದಲ್ಲಿ, ಇದರಲ್ಲಿ ಯಾವುದಾದರೂ ಒಂದು ಭಾಗಕ್ಕೆ ಕತ್ತರಿ ಹಾಕಬೇಕಾಗುತ್ತದೆ (ಪ್ಲಾಟ್‌ಫಾರಂ ಹೊರತುಪಡಿಸಿ). ಆಗ ಉಳಿದ ನಿಲ್ದಾಣಗಳಿಗೆ ಹೋಲಿಸಿದರೆ, ಉದ್ದೇಶಿತ ಜಂಕ್ಷನ್‌ ಬಳಿ ನಿಲ್ದಾಣವು ಅಂಗವಿಕಲ (ಹ್ಯಾಂಡಿಕ್ಯಾಪ್ಡ್) ಆಗಲಿದೆ! ಪ್ರಸ್ತುತ ನಿಲ್ದಾಣದ ನಿರ್ಮಾಣಕ್ಕೆ ನಿಗದಿಪಡಿಸಿದ ಒಟ್ಟಾರೆ 192 ಮೀ. ಪೈಕಿ 80ರಿಂದ 90 ಮೀ. ಚರ್ಚ್‌ ಆವರಣದಲ್ಲಿ ಬಂದರೆ, 60ರಿಂದ 70 ಮೀ. ಪಕ್ಕದ ಫಾತಿಮಾ ಬೇಕರಿ ಮತ್ತು ಪೆಟ್ರೋಲ್‌ ಬಂಕ್‌ ಜಾಗ ಹಾಗೂ 35ರಿಂದ 45 ಮೀ. ರಕ್ಷಣಾ ಇಲಾಖೆಗೆ ಸೇರಿದ ಭೂಮಿಯನ್ನು ಪಡೆಯಲಾಗಿದೆ. 25ರಿಂದ 30 ಮೀ. ಕಡಿಮೆ ಮಾಡಿಕೊಂಡರೆ, ಚರ್ಚ್‌ ಆವರಣದಲ್ಲಿ ಬರುವ ಅಂಗವಿಕಲ ಮಕ್ಕಳ ಶಾಲೆ ಅಥವಾ ವೃದ್ಧಾಶ್ರಮ ಉಳಿಸಬಹುದು ಅಥವಾ ಮರಗಳ ಕಡಿತಲೆ ತಗ್ಗಿಸಬಹುದು ಎಂಬುದು ಬಿಎಂಆರ್‌ಸಿಎಲ್‌ ಎಂಜಿನಿಯರ್‌ಗಳ ಲೆಕ್ಕಾಚಾರ.

ಭವಿಷ್ಯದಲ್ಲಿ ಸಮಸ್ಯೆ: ಈಗಿನ ವಿವಾದದ ತಲೆನೋವಿನಿಂದ ಪಾರಾಗಲು ಹೀಗೆ ನಿಲ್ದಾಣಗಳ ಗಾತ್ರವನ್ನು ಕುಗ್ಗಿಸಬಹುದು. ಆದರೆ ಇದು ತಾತ್ಕಾಲಿಕ ಪರಿಹಾರ ಆಗಲಿದ್ದು, ಭವಿಷ್ಯದಲ್ಲಿ ಇದು ಮತ್ತೂಂದು ರೀತಿಯ ಸಮಸ್ಯೆಗೆ ಕಾರಣವಾಗಲಿದೆ. “ನಮ್ಮ ಮೆಟ್ರೋ’ ಮೊದಲ ಹಂತ ಪೂರ್ಣಗೊಳ್ಳುತ್ತಿದ್ದಂತೆ ರೈಲುಗಳ ಗಾತ್ರ ದುಪ್ಪಟ್ಟಾಯಿತು (ಬೋಗಿಗಳ ಸಂಖ್ಯೆ ಮೂರರಿಂದ ಆರಕ್ಕೆ ಏರಿಕೆ). ಮೆಜೆಸ್ಟಿಕ್‌ನ ಕೆಂಪೇಗೌಡ ಇಂಟರ್‌ಚೇಂಜ್‌ ತುಂಬಾ ದೊಡ್ಡದಾಯಿತು ಎಂಬ ಕೂಗು ಆರಂಭದಲ್ಲಿತ್ತು. ಈಗ “ಪೀಕ್‌ ಅವರ್‌’ನಲ್ಲಿ ಆ ನಿಲ್ದಾಣವೇ ಸಾಲುತ್ತಿಲ್ಲ. ಹೀಗಿರುವಾಗ, ಪ್ರಯಾಣಿಕರ ದಟ್ಟಣೆ ಮತ್ತು ರೈಲುಗಳ ಸಂಖ್ಯೆ ಹೆಚ್ಚಿದಂತೆ ವೆಲ್ಲಾರ ಜಂಕ್ಷನ್‌ ಬಳಿಯ ನಿಲ್ದಾಣದಲ್ಲಿ ಎಲ್ಲ ರೀತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಆರ್‌ಸಿ ಎಂಜಿನಿಯರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.

ವಿವಾದ ಏನು?: ಚರ್ಚ್‌ ಆವರಣದ ನೆಲದಡಿ ಮೆಟ್ರೋ ನಿಲ್ದಾಣ ನಿರ್ಮಾಣದಿಂದ ಹತ್ತಾರು ಮರಗಳು ಬಲಿ ಆಗುತ್ತವೆ. ಎರಡು ಪ್ರವೇಶ ದ್ವಾರಗಳನ್ನು ಮುಚ್ಚಬೇಕಾಗುತ್ತದೆ. ಆವರಣದಲ್ಲಿ ವೃದ್ಧಾಶ್ರಮ, ಅಂಗವಿಕಲ ಮಕ್ಕಳ ಶಾಲೆ ಇವೆ. ಅವುಗಳನ್ನು ತೆರವುಗೊಳಿಸಬೇಕಾಗುತ್ತದೆ ಎಂದು ಆರೋಪಿಸಿ ಚರ್ಚ್‌ ಸದಸ್ಯರು ಯಾವುದೇ ಕಾರಣಕ್ಕೂ ಆವರಣದಲ್ಲಿ ನಿಲ್ದಾಣ ಬೇಡ ಎಂದು ಪಟ್ಟುಹಿಡಿದಿದ್ದಾರೆ. ಆದರೆ, ನಿಲ್ದಾಣದಿಂದ ಚರ್ಚ್‌ ಆವರಣದೊಳಗೆ ಕೇವಲ ಕಾಮಗಾರಿಗೆ ಜಾಗ ಪಡೆಯಲಾಗುತ್ತಿದೆ. ಅಲ್ಲಿ ಯಾವುದೇ ಡಂಪಿಂಗ್‌ ಯಾರ್ಡ್‌ ಬರುತ್ತಿಲ್ಲ. ಕೆಲವೇ ಕೆಲವರ ಹಿತಕ್ಕಾಗಿ ನಿಲ್ದಾಣ ಸ್ಥಳಾಂತರಿಸಿದರೆ, ಭವಿಷ್ಯದಲ್ಲಿ ಸಾವಿರಾರು ಜನರಿಗೆ ಸಮಸ್ಯೆ ಆಗುತ್ತದೆ ಎಂಬುದು ಬಿಎಂಆರ್‌ಸಿಎಲ್‌ ವಾದ.

* 192 ಮೀ. ಸಾಮಾನ್ಯವಾಗಿ ಸುರಂಗದಲ್ಲಿರುವ ಮೆಟ್ರೋ ನಿಲ್ದಾಣದ ಉದ್ದ
* 90 ಮೀ. ಚರ್ಚ್‌ ಆವರಣದಲ್ಲಿ ಬರುವ ನಿಲ್ದಾಣದ ಭಾಗ
* 25-30 ಮೀ.ನಷ್ಟು ಉದ್ದ ತಗ್ಗಿಸಲು ಚಿಂತನೆ
* 150-160 ಮೀ. ಎತ್ತರಿಸಿದ ಮಾರ್ಗದಲ್ಲಿನ ನಿಲ್ದಾಣದ ಉದ್ದ

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.