ವಿಧಾನಸಭೆ ಕಾರ್ಯದರ್ಶಿಯ ಆರ್ಥಿಕ ಅಧಿಕಾರಕ್ಕೆ ಕತ್ತರಿ


Team Udayavani, Aug 14, 2018, 6:50 AM IST

ramesh-kumar-dd.jpg

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಖರೀದಿ ಮತ್ತು ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ವಿಧಾನಸಭೆ ಕಾರ್ಯದರ್ಶಿಗಳಿಗೆ ಇರುವ ಆರ್ಥಿಕ ಅಧಿಕಾರಕ್ಕೆ (ಹಣ ವೆಚ್ಚ ಮಾಡುವ ಅಧಿಕಾರ) ವಿಧಾನಸಭಾಧ್ಯಕ್ಷರು ಕಡಿವಾಣ ಹಾಕಿದ್ದಾರೆ.

ವಿಧಾನಸಭಾಧ್ಯಕ್ಷರ ಆದೇಶದಂತೆ ವಿಧಾನಸಭೆ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಗಳಿಗೆ ಹಣ ಮಂಜೂರು ಮಾಡುವ ಆರ್ಥಿಕ ಅಧಿಕಾರವನ್ನು ಹಿಂಪಡೆದು ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಇದರ ಜತೆಗೆ ಸಭಾಧ್ಯಕ್ಷರಿಗೆ ಇದ್ದ ಹಣ ಮಂಜೂರಾತಿ ಅಧಿಕಾರವನ್ನೂ ಹಿಂಪಡೆಯಲಾಗಿದೆ.

ಅಲ್ಲದೆ, ಇನ್ನುಮುಂದೆ ವಿಧಾನಸಭೆ ಸಚಿವಾಲಯದಲ್ಲಿ (ಶಾಸಕರ ಭವನವೂ ಸೇರಿ) ವ್ಯವಹರಿಸಲಾಗುವ ಎಲ್ಲಾ ವಹಿವಾಟುಗಳಿಗೆ ಸಂಬಂಧಿಸಿದಂತೆ ಯಾವ ಕಾರಣಕ್ಕೆ ಹಣ ವೆಚ್ಚ ಮಾಡಲಾಗಿದೆ ಎಂಬ ಬಗ್ಗೆ ಸ್ಪಷ್ಟ ವಿವರಣೆಯೊಂಗಿಹೆ ವಿಧಾನಸಭಾಧ್ಯಕ್ಷರಿಂದ ಅನುಮೋದನೆ ಪಡೆದು ಮೊತ್ತ ಪಾವತಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ಏನಿದು ವಿವಾದ?:
ವಿಧಾನಸಭೆ ಸಚಿವಾಲಯದ ಆಡಳಿತ ಸುಧಾರಣೆ ಮತ್ತು ಆಡಳಿತ ಹಿತದೃಷ್ಟಿಯಿಂದ ಸಭಾಧ್ಯಕ್ಷರನ್ನೊಳಗೊಂಡಂತೆ ವಿಧಾನಸಭೆ ಕಾರ್ಯದರ್ಶಿಯಿಂದ ಹಿಡಿದು ಅಧೀನ ಕಾರ್ಯದರ್ಶಿ ಹಂತದವರೆಗೆ ನಿರ್ದಿಷ್ಟು ಮೊತ್ತವನ್ನು ಮಂಜೂರು ಮಾಡಲು 2018ರ ಫೆ. 21ರಂದು ಆದೇಶ ಹೊರಡಿಸಲಾಗಿತ್ತು.

ಅದರಂತೆ ವಿಧಾನಸಭಾಧ್ಯಕ್ಷರು 1 ಲಕ್ಷ ರೂ.ಗಿಂತ ಮೇಲ್ಪಟ್ಟ ಮೊತ್ತಕ್ಕೆ, ವಿಧಾನಸಭೆ ಕಾರ್ಯದರ್ಶಿ 1 ಲಕ್ಷ ರೂ.ವರೆಗೆ, ಜಂಟಿ ಕಾರ್ಯದರ್ಶಿ 75 ಸಾವಿರ ರೂ.ವರೆಗೆ, ಉಪ ಕಾರ್ಯದರ್ಶಿ 50 ಸಾವಿರ ರೂ.ವರೆಗೆ ಹಾಗೂ ಅಧೀನ ಕಾರ್ಯದರ್ಶಿ 25 ಸಾವಿರ ರೂ.ವರೆಗೆ ಹಣ ಮಂಜೂರಾತಿ ಮಾಡುವ ಅಧಿಕಾರ ನೀಡಲಾಗಿತ್ತು.

ಆದರೆ, ಈ ಆದೇಶವು ಸಚಿವಾಲಯದ ಅಧಿಕಾರಿಗಳು ಸರ್ಕಾರದ ಹಣ ದುರುಪಯೋಗಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿರುವುದರಿಂದ ಬೊಕ್ಕಸಕ್ಕೆ ನಷ್ಟ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರದ ಅನಗತ್ಯ ಆರ್ಥಿಕ ವೆಚ್ಚದಿಂದ ಉಂಟಾಗುವ ಹೊರೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆದೇಶ ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ.

ಯಾಕಾಗಿ ಈ ಕ್ರಮ?:
ಇತ್ತೀಚಿನ ದಿನಗಳಲ್ಲಿ ಸಚಿವಾಲಯದ ಕೆಲವು ಖರೀದಿ, ಟೆಂಡರ್‌ಗಳಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬಗ್ಗೆ ರಮೇಶ್‌ಕುಮಾರ್‌ ಅವರು ವಿಧಾನಸಭಾಧ್ಯಕ್ಷರಾದ ಬಳಿಕ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಕೆಲವು ಪ್ರಕರಣಗಳ ಬಗ್ಗೆ ಆಂತರಿಕ ತನಿಖೆಗೂ ಆದೇಶಿಸಿದ್ದರು. ಈ ವೇಳೆ ವಿಧಾನಸಭೆ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳಿಗೆ ನೀಡಿದ ಆರ್ಥಿಕ ಅಧಿಕಾರದಿಂದ ಈ ಲೋಪಗಳಾಗಿರುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ನೀಡಿರುವ ಅಧಿಕಾರ ವಾಪಸ್‌ ಪಡೆಯಲಾಗಿದೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.